AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್ ಯೋಜನೆಯಿಂದ ಸರ್ಕಾರಕ್ಕೆ 2.25 ಲಕ್ಷ ಕೋಟಿ ರೂ ಉಳಿತಾಯ: UIDAI ಸಿಇಒ ಮಾಹಿತಿ

ಆಧಾರ್​ನಿಂದ ಸರ್ಕಾರದ ಬೊಕ್ಕಸಕ್ಕೆ 2.25ಲಕ್ಷ ಕೋಟಿ ರೂ ಲಾಭವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸಿಇಒ ಸೌರಭ್​ ಗಾರ್ಗ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 300ಯೋಜನೆಗಳು ಮತ್ತು ರಾಜ್ಯ ಸರ್ಕಾರದ 400 ಯೋಜನೆಗಳನ್ನು ಆಧಾರ್​ನೊಂದಿಗೆ ಲಿಂಕ್​ ಮಾಡಲಾಗಿದೆ.

ಆಧಾರ್ ಯೋಜನೆಯಿಂದ ಸರ್ಕಾರಕ್ಕೆ 2.25 ಲಕ್ಷ ಕೋಟಿ ರೂ ಉಳಿತಾಯ: UIDAI ಸಿಇಒ ಮಾಹಿತಿ
ಆಧಾರ್ ಕಾರ್ಡ್ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 16, 2021 | 6:29 PM

Share

ನವದೆಹಲಿ: ಆಧಾರ್​ನಿಂದ ಸರ್ಕಾರದ ಬೊಕ್ಕಸಕ್ಕೆ 2.25ಲಕ್ಷ ಕೋಟಿ ರೂ ಲಾಭವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಸಿಇಒ ಸೌರಭ್​ ಗಾರ್ಗ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 300ಯೋಜನೆಗಳು ಮತ್ತು ರಾಜ್ಯ ಸರ್ಕಾರದ 400 ಯೋಜನೆಗಳನ್ನು ಆಧಾರ್​ನೊಂದಿಗೆ ಲಿಂಕ್​ ಮಾಡಲಾಗಿದೆ. ಇದರಿಂದ ಸರ್ಕಾರವು ಫಲಾನುವಿಗಳಿಗೆ ನೇರ ಹಣ ವರ್ಗಾವಣೆ ಮೂಲಕ 2.25ಲಕ್ಷ ಕೋಟಿ ರೂಗಳನ್ನು ಉಳಿತಾಯ ಮಾಡಿದೆ. ರಾಜ್ಯ ಸರ್ಕಾರಗಳ ಉಳಿತಾಯವನ್ನು ಸೇರಿಸಿದರೆ ಇನ್ನೂ ಹೆಚ್ಚಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಮುಂದುವರೆದು ಮಾತನಾಡಿ, ಆಧಾರ್ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದನ್ನು ಸುಲಭಗೊಳಿಸಿದೆ. ಕೊರೋನಾ ಸಮಯದಲ್ಲಿ ಫಲಾನುವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಾಯಿತು. ಇದರಿಂದ ಜನ ಹಣಕ್ಕಾಗಿ ಕಷ್ಟಪಡಬೇಕಾದ ಸಂದರ್ಭ ಎದುರಾಗಲಿಲ್ಲ. ಹತ್ತಿರದ ಎಟಿಎಂಗಳಿಗೆ ತೆರಳಿ ಖಾತೆಯಲ್ಲಿರುವ ಹಣವನ್ನು ತೆಗೆದುಕೊಳ್ಳಬಹುದಾಗಿದೆ. ಇದು ಸಾಧ್ಯವಾಗಿರುವುದು ಆಧಾರ್​ ಯೋಜನೆಯಿಂದ ಎಂದು ಹೇಳಿದರು.

2010ರ ಸೆಪ್ಟಂಬರ್ 29ರಂದು ಮೊದಲ ಬಾರಿಗೆ ಆಧಾರ್ ಅನ್ನು ಜನರಿಗೆ ಪರಿಚಯಿಸಲಾಯಿತು. ಈವರೆಗೆ 10 ವರ್ಷಗಳಲ್ಲಿ ಹೊಸ ಮೈಲುಗಲ್ಲನ್ನು ಮುಟ್ಟಿದ್ದೇವೆ. ಹೀಗಾಗಿ ಆಧಾರ್​ ನೋಂದಣಿ ಒಂದು ಸಾಚುರೇಷನ್​ಗೆ ಬಂದಿದೆ. ಮುಂದಿನ 10 ವರ್ಷಗಳಲ್ಲಿ ಏನು ಮಾಡಬಹುದೆಂಬ ಗುರಿ ಹೊಂದಿದ್ದೇವೆ.

ಅವುಗಳಲ್ಲಿ ಮುಖ್ಯವಾಗಿ ಡಿಜಿಟಲೀಕರಣ. ಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ಹೆಚ್ಚು ಸೌಲಭ್ಯವನ್ನು ಒದಗಿಸುವುದು. ದೇಶದ 6.5 ಲಕ್ಷ ಹಳ್ಳಿಗಳಲ್ಲಿ ಆಧಾರ್ ನೋಂದಣಿಯನ್ನು ಸ್ಮಾರ್ಟ್​ ಫೋನ್​ಗಳಲ್ಲಿ ಮಾಡುವಂತೆ ಮಾಡುವುದು. ಹಾಗೂ ಅದರ ನವೀಕರಣಕ್ಕಾಗಿ ಮೊಬೈಲ್​ ಅಪ್ಲಿಕೇಷನ್​ಗಳ ಅಭಿವೃದ್ಧಿಯತ್ತ ಚಿಂತನೆ ನಡೆಸಿದ್ದೇವೆ. ಇದರೊಂದಿಗೆ ಆಧಾರ್​ನ ಭದ್ರತೆ ಹಾಗೂ ಬಳಕೆದಾರನ ಸುರಕ್ಷತೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

 ಇದನ್ನೂ ಓದಿ:

ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮಿತಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜನರಲ್ ನರವಾಣೆ ಅಧಿಕಾರ ಸ್ವೀಕಾರ

National Tourism Policy: ಪ್ರವಾಸೋದ್ಯಮಕ್ಕೆ ಉತ್ತೇಜನ; ಮೋದಿ ಸರ್ಕಾರದ ರಾಷ್ಟ್ರೀಯ ಪ್ರವಾಸೋದ್ಯಮ ನೀತಿ ನಿರ್ಧಾರ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್