Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Murder Case: ಶ್ರದ್ಧಾಳ ದೇಹದ ಭಾಗಗಳು ಫ್ರಿಜ್​ನಲ್ಲಿರುವಾಗಲೇ ಅದೇ ಮನೆಯಲ್ಲಿ ವೈದ್ಯೆ ಜತೆ ಅಫ್ತಾಬ್​ನ ಪ್ರೇಮದಾಟ

ಪ್ರೇಯಸಿ ಶ್ರದ್ಧಾ ವಾಕರ್​ ಅನ್ನು ಹತ್ಯೆ ಮಾಡಿ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟು, ಅಫ್ತಾಬ್ ವೈದ್ಯೆ ಜತೆ ಅದೇ ಮನೆಯಲ್ಲಿ ಡೇಟಿಂಗ್ ಮಾಡುತ್ತಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Shraddha Murder Case: ಶ್ರದ್ಧಾಳ ದೇಹದ ಭಾಗಗಳು ಫ್ರಿಜ್​ನಲ್ಲಿರುವಾಗಲೇ ಅದೇ ಮನೆಯಲ್ಲಿ ವೈದ್ಯೆ ಜತೆ ಅಫ್ತಾಬ್​ನ ಪ್ರೇಮದಾಟ
Aftab
Follow us
TV9 Web
| Updated By: ನಯನಾ ರಾಜೀವ್

Updated on:Nov 27, 2022 | 9:41 AM

ಪ್ರೇಯಸಿ ಶ್ರದ್ಧಾ ವಾಕರ್​ (Shraddha Walker) ಅನ್ನು ಹತ್ಯೆ ಮಾಡಿ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟು, ಅಫ್ತಾಬ್ ವೈದ್ಯೆ ಜತೆ ಅದೇ ಮನೆಯಲ್ಲಿ ಡೇಟಿಂಗ್ ಮಾಡುತ್ತಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದೆ ಈ ವಿಚಾರ ತಿಳಿದಿತ್ತಾದರೂ ಆತ ಡೇಟಿಂಗ್ ಮಾಡುತ್ತಿದ್ದ ಯುವತಿ ವೃತ್ತಿಯಲ್ಲಿ ವೈದ್ಯೆ ಎಂದು ತಿಳಿದಿರಲಿಲ್ಲ.

ಶ್ರದ್ಧಾಳನ್ನು ಕೊಂದ ಬಳಿಕ ಅಫ್ತಾಬ್ ತನ್ನ ಫ್ಲಾಟ್‌ಗೆ ಕರೆತಂದ ಯುವತಿ ವೃತ್ತಿಯಲ್ಲಿ ವೈದ್ಯೆ, ಪೊಲೀಸರು ಆಕೆಯನ್ನು ಪತ್ತೆ ಮಾಡಿದ್ದಾರೆ. ಇಲ್ಲಿ ನೋಡಬೇಕಾದ ದೊಡ್ಡ ವಿಷಯವೆಂದರೆ ಶ್ರದ್ಧಾ ದೇಹದ ಭಾಗಗಳು ಫ್ರಿಜ್‌ನಲ್ಲಿ ಇರುವಾಗಲೇ ಹುಡುಗಿಯನ್ನು ಆತ ಫ್ಲಾಟ್‌ಗೆ ಕರೆತಂದಿದ್ದ. ಅಫ್ತಾಬ್​ಗೆ ತಾನು ಕೊಲೆ ಮಾಡಿರುವ ಕುರಿತು ಯಾವುದೇ ತಪ್ಪಿತಸ್ಥ ಭಾವನೆಯೂ ಇರಲಿಲ್ಲ ಎಂಬುದು ತೋರುತ್ತದೆ.

ಅಫ್ತಾಬ್ ಪೂನವಾಲಾ ಅವರ ಪಾಲಿಗ್ರಾಫ್ ಪರೀಕ್ಷೆ ನಡೆದಿದ್ದು, ಇದೀಗ ನಾರ್ಕೋ ಪರೀಕ್ಷೆ ಕೂಡ ನಡೆಯಲಿದೆ. ಪೂನಾವಾಲಾ ಮೊಬೈಲ್ ಡೇಟಿಂಗ್ ಅಪ್ಲಿಕೇಷನ್ ಬಂಬಲ್ ಮೂಲಕ ಮಹಿಳೆಯನ್ನು ಭೇಟಿಯಾಗಿದ್ದ, ಅದೇ ಆನ್​ಲೈನ್ ಪ್ಲಾಟ್​ಫಾರ್ಮ್ ಮೂಲಕ ಈ ಮೊದಲು ಶ್ರದ್ಧಾಳನ್ನು ಕೂಡ ಭೇಟಿಯಾಗಿದ್ದ.

ಇದೀಗ ಅಫ್ತಾಬ್​ ಜತೆ ಇದ್ದ ಮಹಿಳೆಯು ಮನೋವೈದ್ಯೆ ಎಂಬುದು ತಿಳಿದುಬಂದಿದೆ.ಈ ಆ್ಯಪ್ ಮೂಲಕ ಅಫ್ತಾಬ್ ತುಂಬಾ ಮಹಿಳೆಯನ್ನು ಭೇಟಿಯಾಗಿದ್ದಾನೆ ಎಂಬುದು ತಿಳಿದುಬಂದಿದೆ. ಶನಿವಾರ ಅಫ್ತಾಬ್​ನನ್ನು ದೆಹಲಿ ನ್ಯಾಯಾಲಯವು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಕರೆತಂದಿದ್ದು, ಅಲ್ಲಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತೊಂದೆಡೆ ನವೆಂಬರ್ 28 ಸೋಮವಾರ, ಆರೋಪಿಯ ನಾರ್ಕೋ ಪರೀಕ್ಷೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಫ್ತಾಬ್ ಪೂನಾವಾಲಾ ಶ್ರದ್ಧಾ ವಾಕರ್​ ಅನ್ನು ಹತ್ಯೆ ಮಾಡಿ 31 ತುಂಡುಗಳಾಗಿ ಕತ್ತರಿಸಿ, ನಗರದ ವಿವಿಧೆಡೆ ಎಸೆದಿದ್ದ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:39 am, Sun, 27 November 22

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ