AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Murder Case: ಶ್ರದ್ಧಾಳ ದೇಹದ ಭಾಗಗಳು ಫ್ರಿಜ್​ನಲ್ಲಿರುವಾಗಲೇ ಅದೇ ಮನೆಯಲ್ಲಿ ವೈದ್ಯೆ ಜತೆ ಅಫ್ತಾಬ್​ನ ಪ್ರೇಮದಾಟ

ಪ್ರೇಯಸಿ ಶ್ರದ್ಧಾ ವಾಕರ್​ ಅನ್ನು ಹತ್ಯೆ ಮಾಡಿ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟು, ಅಫ್ತಾಬ್ ವೈದ್ಯೆ ಜತೆ ಅದೇ ಮನೆಯಲ್ಲಿ ಡೇಟಿಂಗ್ ಮಾಡುತ್ತಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Shraddha Murder Case: ಶ್ರದ್ಧಾಳ ದೇಹದ ಭಾಗಗಳು ಫ್ರಿಜ್​ನಲ್ಲಿರುವಾಗಲೇ ಅದೇ ಮನೆಯಲ್ಲಿ ವೈದ್ಯೆ ಜತೆ ಅಫ್ತಾಬ್​ನ ಪ್ರೇಮದಾಟ
Aftab
TV9 Web
| Edited By: |

Updated on:Nov 27, 2022 | 9:41 AM

Share

ಪ್ರೇಯಸಿ ಶ್ರದ್ಧಾ ವಾಕರ್​ (Shraddha Walker) ಅನ್ನು ಹತ್ಯೆ ಮಾಡಿ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್​ನಲ್ಲಿಟ್ಟು, ಅಫ್ತಾಬ್ ವೈದ್ಯೆ ಜತೆ ಅದೇ ಮನೆಯಲ್ಲಿ ಡೇಟಿಂಗ್ ಮಾಡುತ್ತಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಈ ಹಿಂದೆ ಈ ವಿಚಾರ ತಿಳಿದಿತ್ತಾದರೂ ಆತ ಡೇಟಿಂಗ್ ಮಾಡುತ್ತಿದ್ದ ಯುವತಿ ವೃತ್ತಿಯಲ್ಲಿ ವೈದ್ಯೆ ಎಂದು ತಿಳಿದಿರಲಿಲ್ಲ.

ಶ್ರದ್ಧಾಳನ್ನು ಕೊಂದ ಬಳಿಕ ಅಫ್ತಾಬ್ ತನ್ನ ಫ್ಲಾಟ್‌ಗೆ ಕರೆತಂದ ಯುವತಿ ವೃತ್ತಿಯಲ್ಲಿ ವೈದ್ಯೆ, ಪೊಲೀಸರು ಆಕೆಯನ್ನು ಪತ್ತೆ ಮಾಡಿದ್ದಾರೆ. ಇಲ್ಲಿ ನೋಡಬೇಕಾದ ದೊಡ್ಡ ವಿಷಯವೆಂದರೆ ಶ್ರದ್ಧಾ ದೇಹದ ಭಾಗಗಳು ಫ್ರಿಜ್‌ನಲ್ಲಿ ಇರುವಾಗಲೇ ಹುಡುಗಿಯನ್ನು ಆತ ಫ್ಲಾಟ್‌ಗೆ ಕರೆತಂದಿದ್ದ. ಅಫ್ತಾಬ್​ಗೆ ತಾನು ಕೊಲೆ ಮಾಡಿರುವ ಕುರಿತು ಯಾವುದೇ ತಪ್ಪಿತಸ್ಥ ಭಾವನೆಯೂ ಇರಲಿಲ್ಲ ಎಂಬುದು ತೋರುತ್ತದೆ.

ಅಫ್ತಾಬ್ ಪೂನವಾಲಾ ಅವರ ಪಾಲಿಗ್ರಾಫ್ ಪರೀಕ್ಷೆ ನಡೆದಿದ್ದು, ಇದೀಗ ನಾರ್ಕೋ ಪರೀಕ್ಷೆ ಕೂಡ ನಡೆಯಲಿದೆ. ಪೂನಾವಾಲಾ ಮೊಬೈಲ್ ಡೇಟಿಂಗ್ ಅಪ್ಲಿಕೇಷನ್ ಬಂಬಲ್ ಮೂಲಕ ಮಹಿಳೆಯನ್ನು ಭೇಟಿಯಾಗಿದ್ದ, ಅದೇ ಆನ್​ಲೈನ್ ಪ್ಲಾಟ್​ಫಾರ್ಮ್ ಮೂಲಕ ಈ ಮೊದಲು ಶ್ರದ್ಧಾಳನ್ನು ಕೂಡ ಭೇಟಿಯಾಗಿದ್ದ.

ಇದೀಗ ಅಫ್ತಾಬ್​ ಜತೆ ಇದ್ದ ಮಹಿಳೆಯು ಮನೋವೈದ್ಯೆ ಎಂಬುದು ತಿಳಿದುಬಂದಿದೆ.ಈ ಆ್ಯಪ್ ಮೂಲಕ ಅಫ್ತಾಬ್ ತುಂಬಾ ಮಹಿಳೆಯನ್ನು ಭೇಟಿಯಾಗಿದ್ದಾನೆ ಎಂಬುದು ತಿಳಿದುಬಂದಿದೆ. ಶನಿವಾರ ಅಫ್ತಾಬ್​ನನ್ನು ದೆಹಲಿ ನ್ಯಾಯಾಲಯವು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ಕರೆತಂದಿದ್ದು, ಅಲ್ಲಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮತ್ತೊಂದೆಡೆ ನವೆಂಬರ್ 28 ಸೋಮವಾರ, ಆರೋಪಿಯ ನಾರ್ಕೋ ಪರೀಕ್ಷೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಫ್ತಾಬ್ ಪೂನಾವಾಲಾ ಶ್ರದ್ಧಾ ವಾಕರ್​ ಅನ್ನು ಹತ್ಯೆ ಮಾಡಿ 31 ತುಂಡುಗಳಾಗಿ ಕತ್ತರಿಸಿ, ನಗರದ ವಿವಿಧೆಡೆ ಎಸೆದಿದ್ದ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:39 am, Sun, 27 November 22

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್