AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರದ್ಧಾ ಕೊಲೆ ಕೃತ್ಯ ಬಗ್ಗೆ ಕೇಳಿ ಆಘಾತಕ್ಕೊಳಗಾದೆ ಎಂದು ಪೊಲೀಸರಿಗೆ ಹೇಳಿದ ಅಫ್ತಾಬ್​​ನ ಗರ್ಲ್​​​ಫ್ರೆಂಡ್

ತನಿಖೆಯ ಸಂದರ್ಭದಲ್ಲಿ, ಪೊಲೀಸರು ಆತನ ಬಂಬಲ್ ಆ್ಯಪ್ ದಾಖಲೆಯನ್ನು ಪರಿಶೀಲಿಸಿದ್ದಾರೆ. ಕೊಲೆಯಾದ ಸುಮಾರು 12 ದಿನಗಳ ನಂತರ ಮೇ 30 ರಂದು ಅವನು ಸಂಪರ್ಕಕ್ಕೆ ಬಂದ ಮಹಿಳೆ ಮಾಹಿತಿಯನ್ನೂ ಪೊಲೀಸರು ಕಲೆ ಹಾಕಿದ್ದಾರೆ.

ಶ್ರದ್ಧಾ ಕೊಲೆ ಕೃತ್ಯ ಬಗ್ಗೆ ಕೇಳಿ ಆಘಾತಕ್ಕೊಳಗಾದೆ ಎಂದು ಪೊಲೀಸರಿಗೆ ಹೇಳಿದ ಅಫ್ತಾಬ್​​ನ ಗರ್ಲ್​​​ಫ್ರೆಂಡ್
ಅಫ್ತಾಬ್ ಪೂನಾವಾಲಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 30, 2022 | 4:39 PM

Share

ದೆಹಲಿ: ಅಫ್ತಾಬ್ ಪೂನಾವಾಲಾ (Aaftab Poonawala) ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಕರ್ (Shraddha Walkar) ಅವರನ್ನು ಕೊಲೆ ಮಾಡಿದ ನಂತರ ಡೇಟಿಂಗ್ ಮಾಡಿದ ಮಹಿಳೆಗೆ ಆತನ ಪೈಶಾಚಿಕ ಕೃತ್ಯದ ಬಗ್ಗೆ ತಿಳಿದು ಆಘಾತವಾಗಿದೆ. ಕೊಲೆಯ ನಂತರ ಎರಡು ಬಾರಿ ಅಲ್ಲಿಗೆ ಭೇಟಿ ನೀಡಿದಾಗ ತನ್ನ ಫ್ಲಾಟ್‌ನಲ್ಲಿ ಮಾನವ ದೇಹದ ಭಾಗಗಳನ್ನು ಇರಿಸಲಾಗಿತ್ತು ಎಂಬ ಸುಳಿವು ತನಗೆ ಇರಲಿಲ್ಲ ಎಂದು ನನಗೆ ತಿಳಿದಿರಲಿಲ್ಲ ಎಂದು ಆ ಮಹಿಳೆ ಹೇಳಿದ್ದಾರೆ. ಅಕ್ಟೋಬರ್ 12 ರಂದು ತನಗೆ ಫ್ಯಾನ್ಸಿ ಆರ್ಟಿಫಿಷಲ್ ಉಂಗುರವನ್ನು ಅಫ್ತಾಬ್ ಉಡುಗೊರೆಯಾಗಿ ನೀಡಿದ್ದ ಎಂದು ಆಕೆ ಹೇಳಿದ್ದಾರೆ. ಮೂಲಗಳ ಪ್ರಕಾರ ಆ  ಉಂಗುರ ಶ್ರದ್ಧಾಳದ್ದು. ಇದನ್ನು ಅಫ್ತಾಬ್‌ನ ಹೊಸ ಗೆಳತಿಯಿಂದ ವಶಪಡಿಸಿಕೊಳ್ಳಲಾಗಿದೆ. ಆಕೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಆಕೆ ವೃತ್ತಿಯಲ್ಲಿ ಮನೋವೈದ್ಯೆಯಾಗಿದ್ದಾರೆ.ನಾನು ಅಕ್ಟೋಬರ್‌ನಲ್ಲಿ ಎರಡು ಬಾರಿ ಅಫ್ತಾಬ್‌ನ ಫ್ಲಾಟ್‌ಗೆ ಭೇಟಿ ನೀಡಿದ್ದೇನೆ.ಆದರೆ ಕೊಲೆಯ ಬಗ್ಗೆ ಅಥವಾ ಮನೆಯಲ್ಲಿ ದೇಹದ ಭಾಗಗಳಿರುವ ಬಗ್ಗೆ ತನಗೆ ಯಾವುದೇ ಸುಳಿವು ಇರಲಿಲ್ಲ. ಅಫ್ತಾಬ್ ಎಂದಿಗೂ ಭಯಭೀತನಾಗಿರುವಂತೆ ಕಾಣಲಿಲ್ಲ. ಆಗಾಗ್ಗೆ ಆತ ತನ್ನ ಮುಂಬೈನ ಮನೆಯ ಬಗ್ಗೆ ಹೇಳುತ್ತಿದ್ದ ಎಂದು ಆಕೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಮಹಿಳೆ ಅಫ್ತಾಬ್ ನ್ನು ಡೇಟಿಂಗ್ ಆಪ್ ನಲ್ಲಿ ಭೇಟಿಯಾಗಿದ್ದಳು. ಅಫ್ತಾಬ್ ವಿವಿಧ ಡೇಟಿಂಗ್ ಸೈಟ್‌ಗಳ ಮೂಲಕ ಸುಮಾರು 15 ರಿಂದ 20 ಹುಡುಗಿಯರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಸಂದರ್ಭದಲ್ಲಿ, ಪೊಲೀಸರು ಆತನ ಬಂಬಲ್ ಆ್ಯಪ್ ದಾಖಲೆಯನ್ನು ಪರಿಶೀಲಿಸಿದ್ದಾರೆ. ಕೊಲೆಯಾದ ಸುಮಾರು 12 ದಿನಗಳ ನಂತರ ಮೇ 30 ರಂದು ಅವನು ಸಂಪರ್ಕಕ್ಕೆ ಬಂದ ಮಹಿಳೆ ಮಾಹಿತಿಯನ್ನೂ ಪೊಲೀಸರು ಕಲೆ ಹಾಕಿದ್ದಾರೆ. ಅವನ ನಡವಳಿಕೆಯು ನಾರ್ಮಲ್ ಆಗಿತ್ತು. ಆತ ಕಾಳಜಿ ತೋರಿಸುತ್ತಿದ್ದ. ಅವನ ಮಾನಸಿಕ ಸ್ಥಿತಿ ಸರಿ ಇಲ್ಲ ಎಂದು ಹೇಳುವಂತಿರಲಿಲ್ಲ. ಅಫ್ತಾಬ್‌ನಲ್ಲಿ ಡಿಯೋಡರೆಂಟ್‌ಗಳು ಮತ್ತು ಸುಗಂಧ ದ್ರವ್ಯಗಳ ಸಂಗ್ರಹವಿದೆ. ಆತ ಆಗಾಗ್ಗೆ ಸುಗಂಧ ದ್ರವ್ಯಗಳನ್ನು ಉಡುಗೊರೆಯಾಗಿ ನೀಡುತ್ತಿದ್ದ ಎಂದು ಅವರು ಹೇಳಿದರು. ಅಫ್ತಾಬ್ ತುಂಬಾ ಧೂಮಪಾನ ಮಾಡುತ್ತಿದ್ದ. ತನ್ನ ಸಿಗರೇಟ್ ನ್ನು ಆತನೇ ಸುತ್ತುತ್ತಿದ್ದ. ಆದರೆ ಆಗಾಗ್ಗೆ ಧೂಮಪಾನವನ್ನು ತ್ಯಜಿಸುವ ಬಗ್ಗೆಯೂ ಮಾತನಾಡುತ್ತಿದ್ದ ಎಂದು ಆಕೆ ಹೇಳಿದ್ದಾರೆ.

ಆತ ವಿವಿಧ ರೀತಿಯ ಆಹಾರಗಳನ್ನು ತುಂಬಾ ಇಷ್ಟಪಡುತ್ತಿದ್ದ. ಮನೆಯಲ್ಲಿ ವಿವಿಧ ರೆಸ್ಟೋರೆಂಟ್‌ಗಳಿಂದ ಮಾಂಸಾಹಾರಿ ವಸ್ತುಗಳನ್ನು ಆರ್ಡರ್ ಮಾಡುತ್ತಿದ್ದರು. ರೆಸ್ಟೋರೆಂಟ್‌ಗಳಲ್ಲಿ ಬಾಣಸಿಗರು ಆಹಾರವನ್ನು ಹೇಗೆ ಅಲಂಕರಿಸುತ್ತಾರೆ ಎಂದು ಅವರು ಹೇಳಿದ್ದರು. ಕೊಲೆ ಪ್ರಕರಣದ ವಿವರಗಳು ಹೊರಬಿದ್ದ ನಂತರ ಆಘಾತಕ್ಕೊಳಗಾದ ಆಕೆಗೆ ಈಗ ಕೌನ್ಸೆಲಿಂಗ್ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!