Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ

Aaftab Poonawalla ಪೂನಾವಾಲಾ ಶ್ರದ್ದಾಳ ದೇಹದ ಮೇಲೆ ಸಿಗರೇಟ್ ಸುಡುತ್ತಿದ್ದ. ಅವನಿಗೆ "ಮತ್ತೊಂದು ಅವಕಾಶ" ನೀಡಲು ಬಯಸಿದ್ದರಿಂದ ಶ್ರದ್ಧಾ ಪೊಲೀಸರನ್ನು ಸಂಪರ್ಕಿಸಲು ನಿರಾಕರಿಸಿದಳು ಎಂದು ಆಕೆಯ ಸ್ನೇಹಿತರೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ
ಅಫ್ತಾಬ್ ಅಮೀನ್ ಪೂನಾವಾಲಾ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jan 24, 2023 | 10:02 PM

ದೆಹಲಿಯಲ್ಲಿ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಕರ್‌ನ್ನು (Shraddha Walkar) ಕೊಂದು ಕತ್ತರಿಸಿದ್ದ ಅಫ್ತಾಬ್ ಪೂನಾವಾಲಾ(Aaftab Poonawala). ಶ್ರದ್ಧಾ ಇನ್ನೊಬ್ಬ ಸ್ನೇಹಿತನನ್ನು ಭೇಟಿ ಮಾಡಿದ್ದಕ್ಕೆ ಅಫ್ತಾಬ್ ಕೋಪ ಬಂದು ಆಕೆಯ ಮೇಲೆ ಹಲ್ಲೆ ನಡೆಸಿದ್ದ ಎಂದು ದೆಹಲಿ ಪೊಲೀಸರು ಸಲ್ಲಿಸಿದ 6,629 ಪುಟಗಳ ಬೃಹತ್ ಚಾರ್ಜ್‌ಶೀಟ್‌ನಲ್ಲಿ (chargesheet) ಹೇಳಲಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಶ್ರದ್ಧಾಳ ಕತ್ತು ಹಿಸುಕಿ ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಪೂನಾವಾಲಾ, ತಿಹಾರ್ ಜೈಲಿನಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾಗಿತ್ತು. ಈತನ ನ್ಯಾಯಾಂಗ ಬಂಧನವನ್ನು ಫೆಬ್ರವರಿ 7 ರವರೆಗೆ ವಿಸ್ತರಿಸಲಾಗಿದೆ. ಘಟನೆಯ ದಿನ, ವಾಕರ್ ತನ್ನ ಸ್ನೇಹಿತರೊಬ್ಬರನ್ನು ಭೇಟಿಯಾಗಲು ಹೋಗಿದ್ದಳು, ಅದು ಪೂನಾವಾಲಾಗೆ ಇಷ್ಟವಾಗಲಿಲ್ಲ. ಆಮೇಲೆ ಅವನು ಹಿಂಸಾತ್ಮಕವಾಗಿ ವರ್ತಿಸಿದ್ದು ಈ ಘಟನೆ ಸಂಭವಿಸಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ದಕ್ಷಿಣ) ಮೀನು ಚೌಧರಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಶ್ರದ್ಧಾ ವಾಕರ್ ಹತ್ಯೆಯಾದ ನಂತರ ಆಕೆಯ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ಅದರಲ್ಲಿ ಆಕೆಯ ಮುಖದ ಮೇಲೆ ಗಾಯದ ಗುರುತುಗಳಿತ್ತು. ಪೂನಾವಾಲಾ ಆಕೆಯ ಮೇಲೆ ನಡೆಸಿದ ಹಲ್ಲೆಯ ಗುರುತುಗಳು ಎಂದು ಶ್ರದ್ಧಾಳ ಸ್ನೇಹಿತರು ಹೇಳಿದ್ದಾರೆ.

ಪೂನಾವಾಲಾ ಶ್ರದ್ದಾಳ ದೇಹದ ಮೇಲೆ ಸಿಗರೇಟ್ ಸುಡುತ್ತಿದ್ದ. ಅವನಿಗೆ “ಮತ್ತೊಂದು ಅವಕಾಶ” ನೀಡಲು ಬಯಸಿದ್ದರಿಂದ ಶ್ರದ್ಧಾ ಪೊಲೀಸರನ್ನು ಸಂಪರ್ಕಿಸಲು ನಿರಾಕರಿಸಿದಳು ಎಂದು ಆಕೆಯ ಸ್ನೇಹಿತರೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಆಕೆಯನ್ನು ಕೆಟ್ಟದಾಗಿ ನಡೆಸಿಕೊಂಡರೆ ನಿನ್ನ ವಿರುದ್ಧ ಪೊಲೀಸ್ ದೂರು ದಾಖಲಿಸುವುದಾಗಿ ವಾಕರ್ ಸ್ನೇಹಿತರು ಪೂನಾವಾಲಾಗೆ ಬೆದರಿಕೆ ಹಾಕಿದ್ದರು ಮೆಹ್ರೌಲಿ ಹತ್ಯೆ ಪ್ರಕರಣದಲ್ಲಿ ಪೂನಾವಾಲಾ ವಿರುದ್ಧ ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪೊಲೀಸರು ಇದನ್ನು ಸೆಕ್ಷನ್ 302, 201 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ವಿಭಾಗಗಳ ಅಡಿಯಲ್ಲಿ ಪಟ್ಟಿ ಮಾಡಿದ್ದಾರೆ.

ವಾಕರ್ ಅವರ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಲವಾರು ದಿನಗಳ ಕಾಲ ದಕ್ಷಿಣ ದೆಹಲಿಯ ವಿವಿಧ ಭಾಗಗಳಲ್ಲಿ ಎಸೆದಿದ್ದ ಪೂನಾವಾಲಾ. ತನಿಖೆಯ ವೇಳೆ ಪೂನಾವಾಲಾ ದೇಹವನ್ನು ತುಂಡರಿಸಲು ಹಲವು ಆಯುಧಗಳನ್ನು ಬಳಸಿರುವುದು ಪತ್ತೆಯಾಗಿದೆ. ಚಾರ್ಜ್‌ಶೀಟ್‌ಗಾಗಿ 150 ಕ್ಕೂ ಹೆಚ್ಚು ಸಾಕ್ಷಿಗಳ ಸಾಕ್ಷ್ಯವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪೂನಾವಾಲಾ ಅವರ ಧ್ವನಿ ಮಾದರಿಯನ್ನೂ ಸಂಗ್ರಹಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’