AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ

Aaftab Poonawalla ಪೂನಾವಾಲಾ ಶ್ರದ್ದಾಳ ದೇಹದ ಮೇಲೆ ಸಿಗರೇಟ್ ಸುಡುತ್ತಿದ್ದ. ಅವನಿಗೆ "ಮತ್ತೊಂದು ಅವಕಾಶ" ನೀಡಲು ಬಯಸಿದ್ದರಿಂದ ಶ್ರದ್ಧಾ ಪೊಲೀಸರನ್ನು ಸಂಪರ್ಕಿಸಲು ನಿರಾಕರಿಸಿದಳು ಎಂದು ಆಕೆಯ ಸ್ನೇಹಿತರೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ
ಅಫ್ತಾಬ್ ಅಮೀನ್ ಪೂನಾವಾಲಾ
TV9 Web
| Edited By: |

Updated on: Jan 24, 2023 | 10:02 PM

Share

ದೆಹಲಿಯಲ್ಲಿ ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಕರ್‌ನ್ನು (Shraddha Walkar) ಕೊಂದು ಕತ್ತರಿಸಿದ್ದ ಅಫ್ತಾಬ್ ಪೂನಾವಾಲಾ(Aaftab Poonawala). ಶ್ರದ್ಧಾ ಇನ್ನೊಬ್ಬ ಸ್ನೇಹಿತನನ್ನು ಭೇಟಿ ಮಾಡಿದ್ದಕ್ಕೆ ಅಫ್ತಾಬ್ ಕೋಪ ಬಂದು ಆಕೆಯ ಮೇಲೆ ಹಲ್ಲೆ ನಡೆಸಿದ್ದ ಎಂದು ದೆಹಲಿ ಪೊಲೀಸರು ಸಲ್ಲಿಸಿದ 6,629 ಪುಟಗಳ ಬೃಹತ್ ಚಾರ್ಜ್‌ಶೀಟ್‌ನಲ್ಲಿ (chargesheet) ಹೇಳಲಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಶ್ರದ್ಧಾಳ ಕತ್ತು ಹಿಸುಕಿ ಕೊಂದಿರುವುದಾಗಿ ತಪ್ಪೊಪ್ಪಿಕೊಂಡ ಪೂನಾವಾಲಾ, ತಿಹಾರ್ ಜೈಲಿನಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾಗಿತ್ತು. ಈತನ ನ್ಯಾಯಾಂಗ ಬಂಧನವನ್ನು ಫೆಬ್ರವರಿ 7 ರವರೆಗೆ ವಿಸ್ತರಿಸಲಾಗಿದೆ. ಘಟನೆಯ ದಿನ, ವಾಕರ್ ತನ್ನ ಸ್ನೇಹಿತರೊಬ್ಬರನ್ನು ಭೇಟಿಯಾಗಲು ಹೋಗಿದ್ದಳು, ಅದು ಪೂನಾವಾಲಾಗೆ ಇಷ್ಟವಾಗಲಿಲ್ಲ. ಆಮೇಲೆ ಅವನು ಹಿಂಸಾತ್ಮಕವಾಗಿ ವರ್ತಿಸಿದ್ದು ಈ ಘಟನೆ ಸಂಭವಿಸಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ದಕ್ಷಿಣ) ಮೀನು ಚೌಧರಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಶ್ರದ್ಧಾ ವಾಕರ್ ಹತ್ಯೆಯಾದ ನಂತರ ಆಕೆಯ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು ಅದರಲ್ಲಿ ಆಕೆಯ ಮುಖದ ಮೇಲೆ ಗಾಯದ ಗುರುತುಗಳಿತ್ತು. ಪೂನಾವಾಲಾ ಆಕೆಯ ಮೇಲೆ ನಡೆಸಿದ ಹಲ್ಲೆಯ ಗುರುತುಗಳು ಎಂದು ಶ್ರದ್ಧಾಳ ಸ್ನೇಹಿತರು ಹೇಳಿದ್ದಾರೆ.

ಪೂನಾವಾಲಾ ಶ್ರದ್ದಾಳ ದೇಹದ ಮೇಲೆ ಸಿಗರೇಟ್ ಸುಡುತ್ತಿದ್ದ. ಅವನಿಗೆ “ಮತ್ತೊಂದು ಅವಕಾಶ” ನೀಡಲು ಬಯಸಿದ್ದರಿಂದ ಶ್ರದ್ಧಾ ಪೊಲೀಸರನ್ನು ಸಂಪರ್ಕಿಸಲು ನಿರಾಕರಿಸಿದಳು ಎಂದು ಆಕೆಯ ಸ್ನೇಹಿತರೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಆಕೆಯನ್ನು ಕೆಟ್ಟದಾಗಿ ನಡೆಸಿಕೊಂಡರೆ ನಿನ್ನ ವಿರುದ್ಧ ಪೊಲೀಸ್ ದೂರು ದಾಖಲಿಸುವುದಾಗಿ ವಾಕರ್ ಸ್ನೇಹಿತರು ಪೂನಾವಾಲಾಗೆ ಬೆದರಿಕೆ ಹಾಕಿದ್ದರು ಮೆಹ್ರೌಲಿ ಹತ್ಯೆ ಪ್ರಕರಣದಲ್ಲಿ ಪೂನಾವಾಲಾ ವಿರುದ್ಧ ದೆಹಲಿಯ ಸಾಕೇತ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಪೊಲೀಸರು ಇದನ್ನು ಸೆಕ್ಷನ್ 302, 201 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಇತರ ವಿಭಾಗಗಳ ಅಡಿಯಲ್ಲಿ ಪಟ್ಟಿ ಮಾಡಿದ್ದಾರೆ.

ವಾಕರ್ ಅವರ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಹಲವಾರು ದಿನಗಳ ಕಾಲ ದಕ್ಷಿಣ ದೆಹಲಿಯ ವಿವಿಧ ಭಾಗಗಳಲ್ಲಿ ಎಸೆದಿದ್ದ ಪೂನಾವಾಲಾ. ತನಿಖೆಯ ವೇಳೆ ಪೂನಾವಾಲಾ ದೇಹವನ್ನು ತುಂಡರಿಸಲು ಹಲವು ಆಯುಧಗಳನ್ನು ಬಳಸಿರುವುದು ಪತ್ತೆಯಾಗಿದೆ. ಚಾರ್ಜ್‌ಶೀಟ್‌ಗಾಗಿ 150 ಕ್ಕೂ ಹೆಚ್ಚು ಸಾಕ್ಷಿಗಳ ಸಾಕ್ಷ್ಯವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಪೂನಾವಾಲಾ ಅವರ ಧ್ವನಿ ಮಾದರಿಯನ್ನೂ ಸಂಗ್ರಹಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು