AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಟೀಕಿಸಿ ಪೋಸ್ಟರ್ ಅಂಟಿಸಲು 9 ಸಾವಿರ ಪಾವತಿಸಿದ್ದ ಆಮ್​ಆದ್ಮಿ ಪಕ್ಷದ ಸದಸ್ಯ

ಕೊವಿಡ್ ನಿರ್ವಹಣೆಯ ಕುರಿತು ಪ್ರಧಾನಿ ಮೋದಿಯನ್ನು ಟೀಕಿಸಿ ಪೋಸ್ಟರ್ ಪ್ರಕಟಿಸಲು ಮತ್ತು ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಲು 9 ಸಾವಿರ ಹಣವನ್ನು ನೀಡಿದ್ದಾಗಿ ಈಗಾಗಲೇ ಬಂಧನಕ್ಕೊಳಪಟ್ಟ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ ಟೀಕಿಸಿ ಪೋಸ್ಟರ್ ಅಂಟಿಸಲು 9 ಸಾವಿರ ಪಾವತಿಸಿದ್ದ ಆಮ್​ಆದ್ಮಿ ಪಕ್ಷದ ಸದಸ್ಯ
ಪ್ರಧಾನಿ ನರೇಂದ್ರ ಮೋದಿ
guruganesh bhat
|

Updated on:May 16, 2021 | 9:01 PM

Share

ದೆಹಲಿ: ಕೊವಿಡ್​ 19 ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಟೀಕಿಸಿ, ಪೋಸ್ಟರ್​ ಅಂಟಿಸಿದ್ದ ಸುಮಾರು 17 ಮಂದಿಯನ್ನು ದೆಹಲಿ ಪೊಲೀಸರು ನಿನ್ನೆಯಷ್ಟೇ ಬಂಧಿಸಿದ್ದರು.  ಆದರೆ  ಪೋಸ್ಟರ್ ಪ್ರಕಟಣೆಯ ಹಿಂದೆ ಇರುವ ಅಸಲಿ ವ್ಯಕ್ತಿಯ ತಲಾಶೆಯಲ್ಲಿದ್ದ ಪೊಲೀಸರಿಗೆ ಆಮ್​ಆದ್ಮಿ ಪಕ್ಷದ ಸದಸ್ಯ ಅರವಿಂದ್ ಗೌತಮ್ ಎಂಬ ವ್ಯಕ್ತಿ ಇರುವುದು ಪತ್ತೆಯಾಗಿದೆ. ಅರವಿಂದ್  ಗೌತಮ್ ಪ್ರಧಾನಿ ಮೋದಿಯನ್ನು ಟೀಕಿಸಿ ಪೋಸ್ಟರ್ ಪ್ರಕಟಿಸಲು ಮತ್ತು ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಲು 9 ಸಾವಿರ ಹಣವನ್ನು ನೀಡಿದ್ದಾಗಿ ಈಗಾಗಲೇ ಬಂಧನಕ್ಕೊಳಪಟ್ಟ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದಾನೆ.

ಪೋಸ್ಟರ್​ನಲ್ಲಿ ಯಾವ ಪ್ರಿಂಟಿಂಗ್ ಪ್ರೆಸ್​ನಲ್ಲಿ ಪ್ರಕಟಿಸಿದ್ದು ಎಂಬ ಮಾಹಿತಿಯಾಗಲೀ, ಪ್ರಕಾಶಕರ ಮಾಹಿತಿಯಾಗಲಿ ಇರಲಿಲ್ಲ. ಮೇ 12ರಂದು ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು, ಈವರೆಗೆ 17 ಜನರನ್ನು ಬಂಧಿಸಿದ್ದರು. ಸದ್ಯ ಆಮ್ಆದ್ಮಿ ಪಕ್ಷದ ಸದಸ್ಯ ಅರವಿಂದ್ ಗೌತಮ್​​ರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ಇದೇ ವಿಚಾರಕ್ಕೆ ಈಗ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಎಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಟ್ವೀಟ್ ಮಾಡಿ.. ನಮ್ಮನ್ನೂ ಬಂಧಿಸಿ (Arrest Me Too..)ಎಂದು ಹಿಂದಿ ಮತ್ತು ಇಂಗ್ಲಿಷ್​ ಎರಡೂ ಭಾಷೆಯಲ್ಲಿ ಬರೆದುಕೊಂಡಿದ್ದರು. ಅಷ್ಟೇ ಅಲ್ಲ, ಮೋದಿ ಜೀ, ನಮ್ಮ ದೇಶದ ಮಕ್ಕಳ ಪಾಲಿನ ಲಸಿಕೆಯನ್ನು ನೀವೇಕೆ ವಿದೇಶಗಳಿಗೆ ಕೊಟ್ಟಿರಿ? ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಯಿರುವ ಫೋಟೋವನ್ನೇ ತಮ್ಮ ಟ್ವಿಟರ್​ನ ಪ್ರೊಫೈಲ್​ ಫೋಟೊವನ್ನಾಗಿ ಕೂಡ ಮಾಡಿಕೊಂಡಿದ್ದರು

ದೆಹಲಿ ಪೊಲೀಸರು ನೇರವಾಗಿ ಕೇಂದ್ರ ಗೃಹ ಇಲಾಖೆಯಡಿ ಬರುತ್ತಾರೆ. ಏನೇ ಇದ್ದರೂ ಅವರು ಗೃಹ ಇಲಾಖೆಗೆ ರಿಪೋರ್ಟ್ ಮಾಡಿಕೊಳ್ಳಬೇಕಾಗುತ್ತದೆ. ನಿನ್ನೆ 17 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಪೋಸ್ಟರ್​ಗೆ ಸಂಬಂಧಪಟ್ಟಂತೆ, ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಕಾಯ್ದೆ ಮತ್ತು ಸೆಕ್ಷನ್​ 188ರಡಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾಗಿ ವರದಿ ನೀಡಿದ್ದಾರೆ.

17 ಜನರ ಬಂಧನವಾಗುತ್ತಿದ್ದಂತೆ ಕಾಂಗ್ರೆಸ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್​, ವಕ್ತಾರರಾದ ಡಾ. ಶಮಾ ಮೊಹಮ್ಮದ್​, ಹೋರಾಟಗಾರ ಸಾಕೇತ್ ಗೋಖಲೆ ಮತ್ತಿತರರೂ ಕೂಡ ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು.  ಜೈರಾಮ್ ರಮೇಶ್​ ಅವರು ಟ್ವೀಟ್​ ಮಾಡಿ, ನಾನು ನನ್ನ ಮನೆಯ ಕಾಂಪೌಂಡ್ ಮೇಲೆಲ್ಲ ಪೋಸ್ಟರ್​ ಅಂಟಿಸುತ್ತೇನೆ. ನನ್ನನ್ನೂ ಬಂಧಿಸಿ ಎಂದು ದೆಹಲಿ ಪೊಲೀಸರು, ಗೃಹ ಸಚಿವ ಅಮಿತ್​ ಶಾ ಅವರಿಗೆ ಸವಾಲು ಹಾಕಿದ್ದರು.

ಇದನ್ನೂ ಓದಿ: Covid-19 Karnataka Update: ಕಳೆದ 24 ಗಂಟೆಗಳಲ್ಲಿ ಬೆಂಗಳೂರಲ್ಲಿ 8,344, ಇತರ ಜಿಲ್ಲೆಗಳಲ್ಲಿ 23,197 ಕೊವಿಡ್ ಸೋಂಕಿತರು ಪತ್ತೆ

ಮನೆಯಲ್ಲಿ ಜಾಗವಿಲ್ಲದೆ, ಮರದ ಮೇಲೆ 11 ದಿನ ಐಸೋಲೇಟ್ ಆದ ಕೊವಿಡ್​ 19 ಸೋಂಕಿತ ಯುವಕ..

(AAM AADMI member behind Delhi poster against PM Narendra Modi)

Published On - 8:54 pm, Sun, 16 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ