AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಟೀಕಿಸಿ ಪೋಸ್ಟರ್ ಅಂಟಿಸಲು 9 ಸಾವಿರ ಪಾವತಿಸಿದ್ದ ಆಮ್​ಆದ್ಮಿ ಪಕ್ಷದ ಸದಸ್ಯ

ಕೊವಿಡ್ ನಿರ್ವಹಣೆಯ ಕುರಿತು ಪ್ರಧಾನಿ ಮೋದಿಯನ್ನು ಟೀಕಿಸಿ ಪೋಸ್ಟರ್ ಪ್ರಕಟಿಸಲು ಮತ್ತು ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಲು 9 ಸಾವಿರ ಹಣವನ್ನು ನೀಡಿದ್ದಾಗಿ ಈಗಾಗಲೇ ಬಂಧನಕ್ಕೊಳಪಟ್ಟ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದಾನೆ.

ಪ್ರಧಾನಿ ನರೇಂದ್ರ ಮೋದಿ ಟೀಕಿಸಿ ಪೋಸ್ಟರ್ ಅಂಟಿಸಲು 9 ಸಾವಿರ ಪಾವತಿಸಿದ್ದ ಆಮ್​ಆದ್ಮಿ ಪಕ್ಷದ ಸದಸ್ಯ
ಪ್ರಧಾನಿ ನರೇಂದ್ರ ಮೋದಿ
guruganesh bhat
|

Updated on:May 16, 2021 | 9:01 PM

Share

ದೆಹಲಿ: ಕೊವಿಡ್​ 19 ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಟೀಕಿಸಿ, ಪೋಸ್ಟರ್​ ಅಂಟಿಸಿದ್ದ ಸುಮಾರು 17 ಮಂದಿಯನ್ನು ದೆಹಲಿ ಪೊಲೀಸರು ನಿನ್ನೆಯಷ್ಟೇ ಬಂಧಿಸಿದ್ದರು.  ಆದರೆ  ಪೋಸ್ಟರ್ ಪ್ರಕಟಣೆಯ ಹಿಂದೆ ಇರುವ ಅಸಲಿ ವ್ಯಕ್ತಿಯ ತಲಾಶೆಯಲ್ಲಿದ್ದ ಪೊಲೀಸರಿಗೆ ಆಮ್​ಆದ್ಮಿ ಪಕ್ಷದ ಸದಸ್ಯ ಅರವಿಂದ್ ಗೌತಮ್ ಎಂಬ ವ್ಯಕ್ತಿ ಇರುವುದು ಪತ್ತೆಯಾಗಿದೆ. ಅರವಿಂದ್  ಗೌತಮ್ ಪ್ರಧಾನಿ ಮೋದಿಯನ್ನು ಟೀಕಿಸಿ ಪೋಸ್ಟರ್ ಪ್ರಕಟಿಸಲು ಮತ್ತು ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಲು 9 ಸಾವಿರ ಹಣವನ್ನು ನೀಡಿದ್ದಾಗಿ ಈಗಾಗಲೇ ಬಂಧನಕ್ಕೊಳಪಟ್ಟ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದಾನೆ.

ಪೋಸ್ಟರ್​ನಲ್ಲಿ ಯಾವ ಪ್ರಿಂಟಿಂಗ್ ಪ್ರೆಸ್​ನಲ್ಲಿ ಪ್ರಕಟಿಸಿದ್ದು ಎಂಬ ಮಾಹಿತಿಯಾಗಲೀ, ಪ್ರಕಾಶಕರ ಮಾಹಿತಿಯಾಗಲಿ ಇರಲಿಲ್ಲ. ಮೇ 12ರಂದು ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು, ಈವರೆಗೆ 17 ಜನರನ್ನು ಬಂಧಿಸಿದ್ದರು. ಸದ್ಯ ಆಮ್ಆದ್ಮಿ ಪಕ್ಷದ ಸದಸ್ಯ ಅರವಿಂದ್ ಗೌತಮ್​​ರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ಇದೇ ವಿಚಾರಕ್ಕೆ ಈಗ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಎಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದರು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯ ಟ್ವೀಟ್ ಮಾಡಿ.. ನಮ್ಮನ್ನೂ ಬಂಧಿಸಿ (Arrest Me Too..)ಎಂದು ಹಿಂದಿ ಮತ್ತು ಇಂಗ್ಲಿಷ್​ ಎರಡೂ ಭಾಷೆಯಲ್ಲಿ ಬರೆದುಕೊಂಡಿದ್ದರು. ಅಷ್ಟೇ ಅಲ್ಲ, ಮೋದಿ ಜೀ, ನಮ್ಮ ದೇಶದ ಮಕ್ಕಳ ಪಾಲಿನ ಲಸಿಕೆಯನ್ನು ನೀವೇಕೆ ವಿದೇಶಗಳಿಗೆ ಕೊಟ್ಟಿರಿ? ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಯಿರುವ ಫೋಟೋವನ್ನೇ ತಮ್ಮ ಟ್ವಿಟರ್​ನ ಪ್ರೊಫೈಲ್​ ಫೋಟೊವನ್ನಾಗಿ ಕೂಡ ಮಾಡಿಕೊಂಡಿದ್ದರು

ದೆಹಲಿ ಪೊಲೀಸರು ನೇರವಾಗಿ ಕೇಂದ್ರ ಗೃಹ ಇಲಾಖೆಯಡಿ ಬರುತ್ತಾರೆ. ಏನೇ ಇದ್ದರೂ ಅವರು ಗೃಹ ಇಲಾಖೆಗೆ ರಿಪೋರ್ಟ್ ಮಾಡಿಕೊಳ್ಳಬೇಕಾಗುತ್ತದೆ. ನಿನ್ನೆ 17 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಪೋಸ್ಟರ್​ಗೆ ಸಂಬಂಧಪಟ್ಟಂತೆ, ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಕಾಯ್ದೆ ಮತ್ತು ಸೆಕ್ಷನ್​ 188ರಡಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾಗಿ ವರದಿ ನೀಡಿದ್ದಾರೆ.

17 ಜನರ ಬಂಧನವಾಗುತ್ತಿದ್ದಂತೆ ಕಾಂಗ್ರೆಸ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್​, ವಕ್ತಾರರಾದ ಡಾ. ಶಮಾ ಮೊಹಮ್ಮದ್​, ಹೋರಾಟಗಾರ ಸಾಕೇತ್ ಗೋಖಲೆ ಮತ್ತಿತರರೂ ಕೂಡ ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು.  ಜೈರಾಮ್ ರಮೇಶ್​ ಅವರು ಟ್ವೀಟ್​ ಮಾಡಿ, ನಾನು ನನ್ನ ಮನೆಯ ಕಾಂಪೌಂಡ್ ಮೇಲೆಲ್ಲ ಪೋಸ್ಟರ್​ ಅಂಟಿಸುತ್ತೇನೆ. ನನ್ನನ್ನೂ ಬಂಧಿಸಿ ಎಂದು ದೆಹಲಿ ಪೊಲೀಸರು, ಗೃಹ ಸಚಿವ ಅಮಿತ್​ ಶಾ ಅವರಿಗೆ ಸವಾಲು ಹಾಕಿದ್ದರು.

ಇದನ್ನೂ ಓದಿ: Covid-19 Karnataka Update: ಕಳೆದ 24 ಗಂಟೆಗಳಲ್ಲಿ ಬೆಂಗಳೂರಲ್ಲಿ 8,344, ಇತರ ಜಿಲ್ಲೆಗಳಲ್ಲಿ 23,197 ಕೊವಿಡ್ ಸೋಂಕಿತರು ಪತ್ತೆ

ಮನೆಯಲ್ಲಿ ಜಾಗವಿಲ್ಲದೆ, ಮರದ ಮೇಲೆ 11 ದಿನ ಐಸೋಲೇಟ್ ಆದ ಕೊವಿಡ್​ 19 ಸೋಂಕಿತ ಯುವಕ..

(AAM AADMI member behind Delhi poster against PM Narendra Modi)

Published On - 8:54 pm, Sun, 16 May 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ