AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi MCD By-Election Result: ದೆಹಲಿ ಪಾಲಿಕೆ ಉಪಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ; 5ರಲ್ಲಿ 4ವಾರ್ಡ್​ ಗೆದ್ದ ಆಪ್​

ವಾರ್ಡ್​ ನಂ.32 ಎನ್​, ವಾರ್ಡ್​ ನಂ.62 ಎನ್​, ವಾರ್ಡ್​ ನಂ.02 ಇ, ವಾರ್ಡ್​ ನಂ.08-ಇ ಮತ್ತು ವಾರ್ಡ್​ ನಂ.41-ಇ ಗಳಿಗೆ ಫೆಬ್ರವರಿ 28ರಂದು ಚುನಾವಣೆ ನಡೆದು ಶೇ.50ಕ್ಕಿಂತಲೂ ಹೆಚ್ಚು ಮತದಾನ ನಡೆದಿತ್ತು. ಉಪಚುನಾವಣೆಗೂ ಮೊದಲು ಈ ಐದು ವಾರ್ಡ್​ಗಳಲ್ಲಿ ನಾಲ್ಕು ವಾರ್ಡ್​ಗಳು ಆಪ್​ ಕೈಯಲ್ಲಿದ್ದವು.

Delhi MCD By-Election Result: ದೆಹಲಿ ಪಾಲಿಕೆ ಉಪಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ; 5ರಲ್ಲಿ 4ವಾರ್ಡ್​ ಗೆದ್ದ ಆಪ್​
ಅರವಿಂದ್​ ಕೇಜ್ರಿವಾಲ್​
Lakshmi Hegde
|

Updated on: Mar 03, 2021 | 4:19 PM

Share

ದೆಹಲಿ ನಗರ ಪಾಲಿಕೆ​ ಉಪಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ (AAP)ಭರ್ಜರಿ ಜಯಸಾಧಿಸಿದೆ. ಒಟ್ಟು 5 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಆಪ್​ 4 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ. ಬಿಜೆಪಿ ಒಂದೂ ಸ್ಥಾನವನ್ನು ಗೆಲ್ಲಲಾಗದೆ ತೀವ್ರ ಮುಖಭಂಗ ಅನುಭವಿಸಿದೆ. ಗುಜರಾತ್​ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗೆದ್ದು ಬೀಗಿದ್ದ ಬಿಜೆಪಿಗೆ ಇದೊಂದು ಆಘಾತವೇ ಆಗಿದೆ.

ಭಾನುವಾರ ದೆಹಲಿ ನಗರ ಪಾಲಿಕೆಯ ಐದು ವಾರ್ಡ್​ಗಳಿಗೆ ಚುನಾವಣೆ ನಡೆದಿತ್ತು. ಈ ಐದರಲ್ಲಿ ಆಪ್​-ಕಾಂಗ್ರೆಸ್​ 4-1 ಸೀಟುಗಳನ್ನು ಹಂಚಿಕೊಂಡಿವೆ. ವಾರ್ಡ್​ ನಂ.32 ಎನ್​, ವಾರ್ಡ್​ ನಂ.62 ಎನ್​, ವಾರ್ಡ್​ ನಂ.02 ಇ, ವಾರ್ಡ್​ ನಂ.08-ಇ ಮತ್ತು ವಾರ್ಡ್​ ನಂ.41-ಇ ಗಳಿಗೆ ಫೆಬ್ರವರಿ 28ರಂದು ಚುನಾವಣೆ ನಡೆದು ಶೇ.50ಕ್ಕಿಂತಲೂ ಹೆಚ್ಚು ಮತದಾನ ನಡೆದಿತ್ತು. ಉಪಚುನಾವಣೆಗೂ ಮೊದಲು ಈ ಐದು ವಾರ್ಡ್​ಗಳಲ್ಲಿ ನಾಲ್ಕು ವಾರ್ಡ್​ಗಳು ಆಪ್​ ಕೈಯಲ್ಲಿದ್ದವು, ಒಂದು ವಾರ್ಡ್ ಬಿಜೆಪಿ ಕೈಯಲ್ಲಿತ್ತು. ಆದರೆ ಈಗ ಬಿಜೆಪಿಗೆ ಒಂದೂ ವಾರ್ಡ್​ ಕೂಡ ಸಿಗಲಿಲ್ಲ.

ಆಪ್​ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರು, 5ವಾರ್ಡ್​ಗಳಲ್ಲಿ, 4 ವಾರ್ಡ್​ಗಳನ್ನು ಗೆದ್ದ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ಹಾಗೂ ಅಭಿನಂದನೆ ಸಲ್ಲಿಸುತ್ತೇನೆ. ದೆಹಲಿ ಜನರು ಬಿಜೆಪಿ ಆಡಳಿತವನ್ನು ಯಾವ ಕಾರಣಕ್ಕೂ ಇಷ್ಟಪಡುತ್ತಿಲ್ಲ. ಬರುವ 2022ರಲ್ಲಿ ದೆಹಲಿ ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿದ್ದು, ಈ ಉಪಚುನಾವಣೆ ಅದರ ಪ್ರತಿಬಿಂಬವಾಗಿದೆ. ಇದೀಗ ಆಪ್​ ನಾಲ್ಕು ವಾರ್ಡ್ ಗೆದ್ದು, ಬಿಜೆಪಿ ಸಂಪೂರ್ಣ ಸೋತಿದೆ. ಹಾಗೇ ಮುಂದಿನ ವರ್ಷ 272 ವಾರ್ಡ್​ಗಳಿಗೆ ನಡೆಯಲಿರುವ ಚುನಾವಣೆಯಲ್ಲೂ ಇದೇ ಮರುಕಳಿಸಲಿದೆ. ಬಿಜೆಪಿ ಸಂಪೂರ್ಣವಾಗಿ ಸೋಲುಣ್ಣಲಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ: ಬಿಜೆಪಿ ಮೇಲುಗೈ, ಆಪ್ ಗಮನಾರ್ಹ ಸಾಧನೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು