AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್‌ನ ಸಿಎಂ ಅಭ್ಯರ್ಥಿಯಾಗಿ ಎಎಪಿಯಿಂದ ಸಿಖ್ ಸಮುದಾಯದವರೇ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್

Arvind Kejriwal: ಇಡೀ ಪಂಜಾಬ್ ಈಗ ಬದಲಾವಣೆಯನ್ನು ಬಯಸುತ್ತದೆ, ಒಂದೇ ಭರವಸೆ ‘ಆಪ್ ’. ಕುಂವರ್ ಸಾಹಿಬ್ ಅವರ ಬೆಂಬಲವು ಪಂಜಾಬ್ ಜನರ ಈ ಭರವಸೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಪಂಜಾಬ್‌ನ ಸಿಎಂ ಅಭ್ಯರ್ಥಿಯಾಗಿ ಎಎಪಿಯಿಂದ ಸಿಖ್ ಸಮುದಾಯದವರೇ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 21, 2021 | 4:08 PM

ಅಮೃತ್​ಸರ: 2022 ರ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್‌ನಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಸಿಖ್ ಸಮುದಾಯದವರು ಆಗಿರಲಿದ್ದಾರೆ ಎಂದು ಘೋಷಿಸಿದರು. ಅಮೃತ್​ಸರದಲ್ಲಿ ನಡೆದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಇಡೀ ಪಂಜಾಬ್‌ಗೆ ಹೆಮ್ಮೆ ಎನಿಸುವ ವ್ಯಕ್ತಿಯಾಗಿರುತ್ತಾರೆ ಅವರು. ಇದು ಸಿಖ್ ಸಮುದಾಯದ ಹಕ್ಕು ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು.

ಮಾಜಿ ಐಪಿಎಸ್ ಕುಂವರ್ ವಿಜಯ್ ಪ್ರತಾಪ್ ಸಿಂಗ್ ಎಎಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಪಕ್ಷ ಪ್ರಕಟಿಸಿದೆ. ಕುಂವರ್ ವಿಜಯ್ ಪ್ರತಾಪ್ ರಾಜಕಾರಣಿ ಅಲ್ಲ. ಅವರನ್ನು ‘ಆಮ್ ಆದ್ಮಿ ಕಾ ಪೊಲೀಸ್ವಾಲಾ’ ಎಂದು ಕರೆಯಲಾಯಿತು. ನಾವೆಲ್ಲರೂ ರಾಷ್ಟ್ರ ಸೇವೆ ಮಾಡಲು ಇಲ್ಲಿದ್ದೇವೆ. ಈ ಮನೋಭಾವದಿಂದ ಅವರು ಇಂದು ಪಕ್ಷಕ್ಕೆ ಸೇರಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಕನ್ವೀನರ್ ಹೇಳಿದರು.

2015 ರಲ್ಲಿ ಗುರು ಗ್ರಂಥ ಸಾಹೀಬ್ ಅಪವಿತ್ರಗೊಳಿಸಿದ ನಂತರ ಪೊಲೀಸ್ ಗುಂಡಿನ ದಾಳಿ ಪ್ರಕರಣಗಳನ್ನು ತನಿಖೆ ಮಾಡಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಭಾಗವಾಗಿದ್ದರು ಸಿಂಗ್. ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಬಾರ್ಗರಿ ಪವಿತ್ರ ಪ್ರಕರಣದ ಅಪರಾಧಿಗಳಿಗೆ ಶಿಕ್ಷೆ ಮತ್ತು ನ್ಯಾಯ ಒದಗಿಸಲಾಗುವುದು ಎಂದು  ಪಂಜಾಬ್ ಜನರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇಡೀ ಪಂಜಾಬ್ ಈಗ ಬದಲಾವಣೆಯನ್ನು ಬಯಸುತ್ತದೆ, ಒಂದೇ ಭರವಸೆ ‘ಆಪ್ ’. ಕುಂವರ್ ಸಾಹಿಬ್ ಅವರ ಬೆಂಬಲವು ಪಂಜಾಬ್ ಜನರ ಈ ಭರವಸೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್  ಅಮೃತಸರಕ್ಕೆ ಒಂದು ದಿನದ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: 2022 ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್

ಇದನ್ನೂ ಓದಿ: ಪಿಜ್ಜಾ ಹೋಮ್ ಡೆಲಿವರಿ ಮಾಡುವುದಾದರೆ ರೇಷನ್ ಯಾಕೆ ಆಗಲ್ಲ?: ಅರವಿಂದ್ ಕೇಜ್ರಿವಾಲ್

(Aam Aadmi party’s chief minister candidate in Punjab will be from the Sikh community says Arvind Kejriwal)

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!