AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಗತ್​ ಸಿಂಗ್​ ಗ್ರಾಮ​ ಇಂದು ಹಳದಿಮಯ; ಸಿಎಂ ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರದಲ್ಲಿ 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ

ಭಗವಂತ್​ ಮಾನ್​ ಇಂದು ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಆ ಸಮಾರಂಭದ ನಿಮಿತ್ತ ಖಟ್ಕರ್ ಕಲಾನ್​ ಹಳದಿಮಯವಾಗಲಿದೆ. ಇಲ್ಲಿ ಬಸಂತಿ ಅಥವಾ ಹಳದಿ ಬಣ್ಣ ಸ್ವಾತಂತ್ರ್ಯ ಹೋರಾಟದೊಂದಿಗೆ ಗುರುತಿಸಿಕೊಂಡ ಬಣ್ಣ.

ಭಗತ್​ ಸಿಂಗ್​ ಗ್ರಾಮ​ ಇಂದು ಹಳದಿಮಯ; ಸಿಎಂ ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರದಲ್ಲಿ 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ
ಭಗವಂತ್ ಮಾನ್​
TV9 Web
| Edited By: |

Updated on:Mar 16, 2022 | 9:36 AM

Share

ಆಮ್​ ಆದ್ಮಿ ಪಕ್ಷದ ಭಗವಂತ್​ ಮಾನ್ (Bhagwant Mann)​ ಇಂದು ಪಂಜಾಬ್​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹುಟ್ಟೂರಾದ ಖಟ್ಕರ್ ಕಲಾನ್​​ನಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಅದ್ದೂರಿಯಾಗಿ ನಡೆಯಲಿದ್ದು, ದೆಹಲಿ ಮುಖ್ಯಮಂತ್ರಿ, ಆಪ್​ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್​ ಸೇರಿ ಪಕ್ಷದ ವಿವಿಧ ಪ್ರಮುಖ ಮುಖಂಡರು ಪಾಲ್ಗೊಳ್ಳುವರು. ಪಂಜಾಬ್​ ಸಿಎಂ ಆಗಿ ಕೇವಲ ನಾನೊಬ್ಬನೇ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲ, ಈ ರಾಜ್ಯದ 3 ಕೋಟಿ ಜನರೂ ನನ್ನೊಂದಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡುತ್ತಾರೆ ಎಂದು ಹೇಳಿದ್ದ ಭಗವಂತ್​ ಮಾನ್​, ಇಂದಿನ ಸಮಾರಂಭದಲ್ಲಿ ಭಾಗವಹಿಸುವಂತೆ ಜನರಿಗೂ ಆಮಂತ್ರಣ ನೀಡಿದ್ದಾರೆ. ಮಹಿಳೆಯರು ಹಳದಿ ಬಣ್ಣದ ದುಪ್ಪಟ್ಟಾ ಧರಿಸಿ ಬನ್ನಿ, ಪುರುಷರು ಹಳದಿ ಬಣ್ಣದ ಟೋಪಿ ಧರಿಸಿ ಬನ್ನಿ. ಈ ಬಸಂತಿ ಬಣ್ಣಕ್ಕೆ ಸಿಖ್​ ಸಮುದಾಯದಲ್ಲಿ ಅತ್ಯಂತ ಪ್ರಾಮುಖ್ಯತೆ ಇದೆ ಎಂದು ಹೇಳಿದ್ದಾರೆ. ಅದರಂತೆ ಈ ಸಮಾರಂದಲ್ಲಿ ಸುಮಾರು 3 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದೂ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಆಮ್​ ಆದ್ಮಿ ಪಕ್ಷ ಪಂಜಾಬ್​ನ 117 ಕ್ಷೇತ್ರಗಳಲ್ಲಿ 92 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಸಂಗ್ರೂರ್​ ಜಿಲ್ಲೆಯ  ಮಾನ್​ ಧುರಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಾಂಗ್ರೆಸ್​ನ ದಲ್ವೀರ್ ಸಿಂಗ್ ಗೋಲ್ಡಿ ವಿರುದ್ಧ ಸುಮಾರು 58,206 ಮತಗಳ ಅಂತರದಿಂದ ಗೆದ್ದಿದ್ದಾರೆ.  ಗೆಲ್ಲುತ್ತಿದ್ದಂತೆ ತಾವು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲ ಎಂದು ಘೋಷಿಸಿಬಿಟ್ಟಿದ್ದರು. ಅಷ್ಟೇ ಅಲ್ಲ, ತನ್ನ ಜೊತೆ ಈ ರಾಜ್ಯದ ಮೂರು ಕೋಟಿ ಜನರೂ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಅವರೂ ಈ ರಾಜ್ಯದ ಮುಖ್ಯಮಂತ್ರಿಗಳೇ ಆಗುತ್ತಾರೆ ಎಂದು ವಿಡಿಯೋ ಸಂದೇಶ ನೀಡಿದ್ದರು.

ಭಗವಂತ್​ ಮಾನ್​ ಇಂದು ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಆ ಸಮಾರಂಭದ ನಿಮಿತ್ತ ಖಟ್ಕರ್ ಕಲಾನ್​ ಹಳದಿಮಯವಾಗಲಿದೆ. ಇಲ್ಲಿ ಬಸಂತಿ ಅಥವಾ ಹಳದಿ ಬಣ್ಣ ಸ್ವಾತಂತ್ರ್ಯ ಹೋರಾಟದೊಂದಿಗೆ ಗುರುತಿಸಿಕೊಂಡ ಬಣ್ಣ, ಸ್ವಾತಂತ್ರ್ಯ ಹೋರಾಟಗಾರರು ಇದೇ ಬಣ್ಣವನ್ನು ಸಂಕೇತವಾಗಿ ಬಳಸುತ್ತಿದ್ದರು. ಮಾನ್​ ಕೂಡ ಸದಾ ಹಳದಿ ಬಣ್ಣದ ಪೇಟವನ್ನೇ ಧರಿಸುತ್ತಾರೆ. ನವನ್‌ಶಹರ್ ಜಿಲ್ಲೆಯ ಖಟ್ಕರ್ ಕಲಾನ್​ ಹಳ್ಳಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ 40 ಎಕರೆ  ಸ್ಥಳದಲ್ಲಿ ಸಜ್ಜುಗೊಳಿಸಲಾಗಿದೆ.  ವೇದಿಕೆ ಮುಂಭಾಗ ಹಳದಿ, ನೀಲಿ ಮಿಶ್ರಿತ ಪೆಂಡಾಲ್​ ಹಾಕಲಾಗಿದೆ. 50 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಕುರ್ಚಿ ಮತ್ತು ನೆಲ ಸೇರಿ ಸುಮಾರು 4 ಲಕ್ಷ ಜನರು ಕುಳಿತುಕೊಳ್ಳಬಹುದಾದಷ್ಟು ದೊಡ್ಡ ಜಾಗ ನಿರ್ಮಾಣವಾಗಿದೆ.

ಸುಮಾರು 40 ಎಕರೆ ಜಾಗದಲ್ಲಿ ರೈತರ ಗೋಧಿ ಬೆಳೆಯನ್ನು ನಾಶ ಮಾಡಿ, ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗಿದೆ. ರೈತರಿಗೆ ಎಕರೆಗೆ 46 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ. ಸಮಾರಂಭಕ್ಕೆ 25 ಸಾವಿರಗಳಷ್ಟು ವಾಹನಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಇಷ್ಟು ದೊಡ್ಡ ಜಾಗದಲ್ಲಿ ಪಾರ್ಕಿಂಗ್​ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಆಪ್​ ಪಕ್ಷ ಯಾವುದೇ ವಿವಿಐಪಿಗಳನ್ನೂ ಸಮಾರಂಭಕ್ಕೆ ಆಹ್ವಾನಿಸಿಲ್ಲ. ಈ ಸಮಾರಂಭಕ್ಕೆ ರಂಗ್​ ದೆ ಬಸಂತಿ ಹಾಡಿನ ಥೀಮ್​ ನೀಡಲಾಗಿದೆ.  10 ಸಾವಿರಕ್ಕೂ ಅಧಿಕ ರಕ್ಷಣಾ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲ ಶಾಲಾ-ಕಾಲೇಜುಗಳಿಗೂ ಜಿಲ್ಲಾಡಳಿತ ರಜೆ ನೀಡಿದೆ.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಯಶಸ್ಸು: ‘ಏನ್​ ಬೇಕಾದ್ರೂ ಆಗಬಹುದು’ ಅಂತ ಮತ್ತೆ ಹೇಳಿದ ಅನುಪಮ್​ ಖೇರ್​

Published On - 9:35 am, Wed, 16 March 22

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು