AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ; ರಾಜ್ಯ ತಲುಪಿದ ಇಬ್ಬರು ಮುಖ್ಯಮಂತ್ರಿಗಳು

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ.

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ; ರಾಜ್ಯ ತಲುಪಿದ ಇಬ್ಬರು ಮುಖ್ಯಮಂತ್ರಿಗಳು
ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on:Sep 02, 2022 | 12:51 PM

Share

ದೆಹಲಿ: ಅರವಿಂದ್​ ಕೇಜ್ರಿವಾಲ್ (Arvind Kejriwal)​ ಅವರ ಆಮ್​ ಆದ್ಮಿ ಪಕ್ಷ (Aam Aadmy Party)  ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಪಂಜಾಬ್​ ರಾಜ್ಯವನ್ನು ಗೆದ್ದುಕೊಂಡಿದೆ. ಇದೀಗ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್​​ನಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಲು ಸಿದ್ಧತೆ ನಡೆಸುತ್ತಿದೆ. ಗುಜರಾತ್​​ನಲ್ಲಿ ಇಂದಿನಿಂದ (ಏಪ್ರಿಲ್​ 2) ಆಪ್​ ಪಕ್ಷ ವಿವಿಧ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಲ್ಲಿನ ಜನರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿದೆ. ಗುಜರಾತ್​​ನಲ್ಲಿ  1995ರಿಂದ  ಇಲ್ಲಿಯವರೆಗೆ ಬಿಜೆಪಿ ಪಕ್ಷವೇ ಆಡಳಿತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ರಾಜ್ಯವರು. ಕಾಂಗ್ರೆಸ್​​ ಕೈಯಲ್ಲಿದ್ದ ಪಂಜಾಬ್​​ನಲ್ಲಿ ಸರ್ಕಾರ ರಚನೆ ಮಾಡಿದ ಆಪ್​ ಇದೀಗ ಪ್ರಧಾನಿ ಮೋದಿ ತವರು ರಾಜ್ಯಕ್ಕೇ ಪ್ರವೇಶ ಮಾಡಿದೆ.  ಅಷ್ಟೇ ಅಲ್ಲ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮತ್ತು ಪಂಜಾಬ್​ ಸಿಎಂ ಭಗವಂತ್ ಮಾನ್​ ಇಬ್ಬರೂ ಈಗಾಗಲೇ ಅಹ್ಮದಾಬಾದ್​ಗೆ ತೆರಳಿದ್ದಾರೆ.

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ. ಬಳಿಕ ಭಾನುವಾರ ಇವರಿಬ್ಬರೂ ಅಹ್ಮದಾಬಾದ್​​ನ ಸ್ವಾಮಿನಾರಾಯಣ್​ ದೇಗುಲಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸುವರು. ಗುಜರಾತ್​ನಲ್ಲಿ 2017ರ ವಿಧಾನಸಭೆ ಚುನಾವಣೆಯಲ್ಲಿಯೂ ಆಪ್​ ಪಕ್ಷ ಸ್ಪರ್ಧಿಸಿತ್ತು. ಆದರೆ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಲೂ ವಿಫಲವಾಗಿತ್ತು. ಒಟ್ಟು 29 ಕ್ಷೇತ್ರಗಳು ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಎಲ್ಲರೂ ಸೋತಿದ್ದರು. ಆದರೆ ಈ ಬಾರಿ ಅರವಿಂದ್ ಕೇಜ್ರಿವಾಲ್​ ತುಂಬ ಮುಂಚಿನಿಂದಲೇ ಪಕ್ಷವನ್ನು ಪ್ರಬಲ ಗೊಳಿಸಲು ಪ್ರಾರಂಭಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್​ ಅವರು ದಿ ಕಾಶ್ಮೀರ್​ ಫೈಲ್ಸ್​ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರ ದೆಹಲಿಯ ನಿವಾಸದ ಎದುರು ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಇಂದು ಗುಜರಾತ್​​ನಲ್ಲಿ ಅವರಿಗೆ ಬಿಗಿ ಭದ್ರತೆ ಕಲ್ಪಿಸುವಂತೆ ಆಪ್​ ಗುಜರಾತ್​ ಘಟಕ ಅಹ್ಮದಾಬಾದ್ ಪೊಲೀಸರಲ್ಲಿ ಮನವಿ ಮಾಡಿತ್ತು. ಆಪ್​ ಈ ಬಾರಿ ಗುಜರಾತ್​ನಲ್ಲಿ ಎಲ್ಲ 182 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಅರವಿಂದ್ ಕೇಜ್ರಿವಾಲ್​ ಕಳೆದವರ್ಷವೇ ಘೋಷಣೆ ಮಾಡಿದ್ದಾರೆ. ಈ ಪಕ್ಷ ಗುಜರಾತ್​​ನಲ್ಲಿ ಹಿಂದೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೂಡ ಒಳ್ಳೆಯ ಸಾಧನೆಯನ್ನೇ ಮಾಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್​​ಗಿಂತಲೂ ಆಮ್ ಆದ್ಮಿ ಪಕ್ಷವೇ ಬಿಜೆಪಿಗೆ ಪ್ರಬಲ ಪ್ರತಿಸ್ಫರ್ಧಿ ಎಂಬುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ

Published On - 8:16 am, Sat, 2 April 22

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?