AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ; ರಾಜ್ಯ ತಲುಪಿದ ಇಬ್ಬರು ಮುಖ್ಯಮಂತ್ರಿಗಳು

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ.

ಗುಜರಾತ್​ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿರುವ ಆಮ್ ಆದ್ಮಿ ಪಕ್ಷ; ರಾಜ್ಯ ತಲುಪಿದ ಇಬ್ಬರು ಮುಖ್ಯಮಂತ್ರಿಗಳು
ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on:Sep 02, 2022 | 12:51 PM

Share

ದೆಹಲಿ: ಅರವಿಂದ್​ ಕೇಜ್ರಿವಾಲ್ (Arvind Kejriwal)​ ಅವರ ಆಮ್​ ಆದ್ಮಿ ಪಕ್ಷ (Aam Aadmy Party)  ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಪಂಜಾಬ್​ ರಾಜ್ಯವನ್ನು ಗೆದ್ದುಕೊಂಡಿದೆ. ಇದೀಗ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್​​ನಲ್ಲಿ ಪಕ್ಷದ ಪ್ರಾಬಲ್ಯ ಹೆಚ್ಚಿಸಲು ಸಿದ್ಧತೆ ನಡೆಸುತ್ತಿದೆ. ಗುಜರಾತ್​​ನಲ್ಲಿ ಇಂದಿನಿಂದ (ಏಪ್ರಿಲ್​ 2) ಆಪ್​ ಪಕ್ಷ ವಿವಿಧ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಲ್ಲಿನ ಜನರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿದೆ. ಗುಜರಾತ್​​ನಲ್ಲಿ  1995ರಿಂದ  ಇಲ್ಲಿಯವರೆಗೆ ಬಿಜೆಪಿ ಪಕ್ಷವೇ ಆಡಳಿತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ರಾಜ್ಯವರು. ಕಾಂಗ್ರೆಸ್​​ ಕೈಯಲ್ಲಿದ್ದ ಪಂಜಾಬ್​​ನಲ್ಲಿ ಸರ್ಕಾರ ರಚನೆ ಮಾಡಿದ ಆಪ್​ ಇದೀಗ ಪ್ರಧಾನಿ ಮೋದಿ ತವರು ರಾಜ್ಯಕ್ಕೇ ಪ್ರವೇಶ ಮಾಡಿದೆ.  ಅಷ್ಟೇ ಅಲ್ಲ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮತ್ತು ಪಂಜಾಬ್​ ಸಿಎಂ ಭಗವಂತ್ ಮಾನ್​ ಇಬ್ಬರೂ ಈಗಾಗಲೇ ಅಹ್ಮದಾಬಾದ್​ಗೆ ತೆರಳಿದ್ದಾರೆ.

ಕೇಜ್ರಿವಾಲ್​ ಮತ್ತು ಭಗವಂತ್ ಮಾನ್ ಇಬ್ಬರೂ ಇಂದು ಮೊದಲು ಸಬರಮತಿ ಆಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಂದ 2 ಕಿಮೀ ದೂರದವರೆಗೆ ರೋಡ್ ಶೋ ನಡೆಸಲಿದ್ದಾರೆ. ಇದಕ್ಕೆ ಪಕ್ಷ ತಿರಂಗ ಯಾತ್ರಾ ಎಂದು ಹೆಸರಿಟ್ಟುಕೊಂಡಿದೆ. ಬಳಿಕ ಭಾನುವಾರ ಇವರಿಬ್ಬರೂ ಅಹ್ಮದಾಬಾದ್​​ನ ಸ್ವಾಮಿನಾರಾಯಣ್​ ದೇಗುಲಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸುವರು. ಗುಜರಾತ್​ನಲ್ಲಿ 2017ರ ವಿಧಾನಸಭೆ ಚುನಾವಣೆಯಲ್ಲಿಯೂ ಆಪ್​ ಪಕ್ಷ ಸ್ಪರ್ಧಿಸಿತ್ತು. ಆದರೆ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಲೂ ವಿಫಲವಾಗಿತ್ತು. ಒಟ್ಟು 29 ಕ್ಷೇತ್ರಗಳು ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದರು. ಎಲ್ಲರೂ ಸೋತಿದ್ದರು. ಆದರೆ ಈ ಬಾರಿ ಅರವಿಂದ್ ಕೇಜ್ರಿವಾಲ್​ ತುಂಬ ಮುಂಚಿನಿಂದಲೇ ಪಕ್ಷವನ್ನು ಪ್ರಬಲ ಗೊಳಿಸಲು ಪ್ರಾರಂಭಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್​ ಅವರು ದಿ ಕಾಶ್ಮೀರ್​ ಫೈಲ್ಸ್​ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಅವರ ದೆಹಲಿಯ ನಿವಾಸದ ಎದುರು ಪ್ರತಿಭಟನೆ ನಡೆಯುತ್ತಿದೆ. ಹೀಗಾಗಿ ಇಂದು ಗುಜರಾತ್​​ನಲ್ಲಿ ಅವರಿಗೆ ಬಿಗಿ ಭದ್ರತೆ ಕಲ್ಪಿಸುವಂತೆ ಆಪ್​ ಗುಜರಾತ್​ ಘಟಕ ಅಹ್ಮದಾಬಾದ್ ಪೊಲೀಸರಲ್ಲಿ ಮನವಿ ಮಾಡಿತ್ತು. ಆಪ್​ ಈ ಬಾರಿ ಗುಜರಾತ್​ನಲ್ಲಿ ಎಲ್ಲ 182 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಅರವಿಂದ್ ಕೇಜ್ರಿವಾಲ್​ ಕಳೆದವರ್ಷವೇ ಘೋಷಣೆ ಮಾಡಿದ್ದಾರೆ. ಈ ಪಕ್ಷ ಗುಜರಾತ್​​ನಲ್ಲಿ ಹಿಂದೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೂಡ ಒಳ್ಳೆಯ ಸಾಧನೆಯನ್ನೇ ಮಾಡಿದೆ. ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್​​ಗಿಂತಲೂ ಆಮ್ ಆದ್ಮಿ ಪಕ್ಷವೇ ಬಿಜೆಪಿಗೆ ಪ್ರಬಲ ಪ್ರತಿಸ್ಫರ್ಧಿ ಎಂಬುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ಮಾಪಕರ ಹೊಸ ಚಿತ್ರ ಅನೌನ್ಸ್​; ಮತ್ತೆ ನೈಜ ಘಟನೆ ಆಧಾರಿತ ಸಿನಿಮಾಗೆ ಬಂಡವಾಳ

Published On - 8:16 am, Sat, 2 April 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್