Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ರಾಜ್ಯ ಅಧಿಕಾರಿಗಳ ಜೊತೆ ಕೇಜ್ರಿವಾಲ್ ಭೇಟಿ; ಎಎಪಿ ವಿರುದ್ಧ ವಿರೋಧ ಪಕ್ಷಗಳ ಟೀಕಾ ಪ್ರಹಾರ

ಸೋಮವಾರ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯ ಕಾರ್ಯದರ್ಶಿ, ಕಾರ್ಯದರ್ಶಿ (ವಿದ್ಯುತ್) ಮತ್ತು ರಾಜ್ಯ ವಿದ್ಯುತ್ ಉಪಯುಕ್ತತೆಯ ಅಧ್ಯಕ್ಷರೊಂದಿಗೆ ವಿದ್ಯುತ್ ಸಂಬಂಧಿತ ವಿಷಯದ ಬಗ್ಗೆ ದೆಹಲಿಯಲ್ಲಿ ಸಭೆ ನಡೆಸಿದರು.ಭಗವಂತ್ ಮಾನ್ ಅವರು ಸಭೆಯಲ್ಲಿ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಪಂಜಾಬ್: ರಾಜ್ಯ ಅಧಿಕಾರಿಗಳ ಜೊತೆ ಕೇಜ್ರಿವಾಲ್ ಭೇಟಿ; ಎಎಪಿ ವಿರುದ್ಧ ವಿರೋಧ ಪಕ್ಷಗಳ ಟೀಕಾ ಪ್ರಹಾರ
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Apr 12, 2022 | 10:38 PM

ಚಂಡೀಗಢ: ದೆಹಲಿಯಿಂದ “ರಿಮೋಟ್ ಕಂಟ್ರೋಲ್” ಮೂಲಕ ನಡೆಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಪಂಜಾಬ್‌ನಲ್ಲಿ ಹೊಸದಾಗಿ ಚುನಾಯಿತವಾದ ಎಎಪಿ (AAP) ಸರ್ಕಾರವನ್ನು ಟೀಕಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್  (Arvind Kejriwal) ಸಿಎಂ ಭಗವಂತ್ ಮಾನ್ (Bhagwant Mann) ಅನುಪಸ್ಥಿತಿಯಲ್ಲಿ ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಕ್ಕೆ ವಿಪಕ್ಷಗಳು ಟೀಕಾ ಪ್ರಹಾರ ಮಾಡಿವೆ.  ರಾಜ್ಯದಲ್ಲಿ 300 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಪಕ್ಷದ ಭರವಸೆಯನ್ನು ಅನುಷ್ಠಾನಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಲು ಕೇಜ್ರಿವಾಲ್ ಸೋಮವಾರ ಪಂಜಾಬ್‌ನ “ಉನ್ನತ ಅಧಿಕಾರಿಗಳೊಂದಿಗೆ” ಸಭೆ ನಡೆಸಿದರು ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಭಗವಂತ್ ಮಾನ್ ಅವರನ್ನು “ರಬ್ಬರ್ ಸ್ಟಾಂಪ್” ಎಂದು ಕರೆದರೆ, ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಇದು “ಫೆಡರಲಿಸಂನ ಉಲ್ಲಂಘನೆ” ಎಂದು ಆರೋಪಿಸಿದರು.  ಪಂಜಾಬ್‌ನ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರು ದೆಹಲಿಯಿಂದ “ರಿಮೋಟ್ ಕಂಟ್ರೋಲ್” ಆಗಬೇಕಾದ ಸರ್ಕಾರಕ್ಕೆ ರಾಜ್ಯದ ಜನರು ಮತ ಹಾಕಲಿಲ್ಲ ಎಂದು ಹೇಳಿದ್ದಾರೆ.  ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಕೂಡ ಕೇಜ್ರಿವಾಲ್ ಅವರ ಸಭೆಯನ್ನು “ಅಸಂವಿಧಾನಿಕ ಮತ್ತು ಸ್ವೀಕಾರಾರ್ಹವಲ್ಲ” ಎಂದು ಬಣ್ಣಿಸಿದ್ದಾರೆ.

ಆದರೆ, ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಿಂದ ವಿವಾದದ ಬಗ್ಗೆ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ. ಸೋಮವಾರ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯ ಕಾರ್ಯದರ್ಶಿ, ಕಾರ್ಯದರ್ಶಿ (ವಿದ್ಯುತ್) ಮತ್ತು ರಾಜ್ಯ ವಿದ್ಯುತ್ ಉಪಯುಕ್ತತೆಯ ಅಧ್ಯಕ್ಷರೊಂದಿಗೆ ವಿದ್ಯುತ್ ಸಂಬಂಧಿತ ವಿಷಯದ ಬಗ್ಗೆ ದೆಹಲಿಯಲ್ಲಿ ಸಭೆ ನಡೆಸಿದರು.ಭಗವಂತ್ ಮಾನ್ ಅವರು ಸಭೆಯಲ್ಲಿ ಇರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ದೆಹಲಿಯಲ್ಲಿ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ಮಾನ್, ಪಂಜಾಬಿ ಮತ್ತು ಹಿಂದಿಯಲ್ಲಿ ಟ್ವೀಟ್ ಮಾಡಿ, “ನಮ್ಮ ನಾಯಕ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರೊಂದಿಗೆ ಉತ್ತಮ ಸಭೆ ನಡೆಸಿದ್ದೇವೆ. ಪಂಜಾಬ್ ಜನರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ ನೀಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಕೇಜ್ರಿವಾಲ್ ಅವರು ಮಾನ್ ಅವರ ಟ್ವೀಟ್ ಅನ್ನು ಮರುಟ್ವೀಟ್ ಮಾಡಿ, “ನಾವು ಒಟ್ಟಾಗಿ ದೆಹಲಿ, ಪಂಜಾಬ್ ಮತ್ತು ಇಡೀ ದೇಶವನ್ನು ಬದಲಾಯಿಸುತ್ತೇವೆ. ಜನರು ತುಂಬಾ ದುಃಖ ಮತ್ತು ಸಂಕಷ್ಟದಲ್ಲಿದ್ದಾರೆ. ಅವರು ರಾಜಕಾರಣಿಗಳು ಮತ್ತು ಪಕ್ಷಗಳ ಕೊಳಕು ಮತ್ತು ಭ್ರಷ್ಟ ರಾಜಕಾರಣದಿಂದ ಬೇಸತ್ತಿದ್ದಾರೆ. ನಾವು ಜನರಿಗಾಗಿ ಹಗಲಿರುಳು ಶ್ರಮಿಸಬೇಕು ಎಂದಿದ್ದಾರೆ.

ಸಭೆಯ ಬಗ್ಗೆ ಕೇಳಿದಾಗ, ಪಂಜಾಬ್ ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್, ಕೇಜ್ರಿವಾಲ್ ಅವರು ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿದ್ದಾರೆ ಮತ್ತು ಅವರು ಸಭೆ ನಡೆಸಿದ್ದರೂ ಅದು ದೊಡ್ಡ ವಿಷಯವಾಗಬಾರದು ಎಂದು ಹೇಳಿದರು.

ಪಂಜಾಬ್‌ನ ಎಎಪಿ ವಕ್ತಾರ ಮಲ್ವಿಂದರ್ ಕಾಂಗ್, “ಕೇಜ್ರಿವಾಲ್ ಮಾದರಿಯ ಆಡಳಿತವನ್ನು ನೋಡಲು ಜನರು ದೂರದೂರುಗಳಿಂದ ಬರುತ್ತಾರೆ, ಅವರು ಪಂಜಾಬ್ ಜನರ ಅನುಕೂಲಕ್ಕಾಗಿ ಅನೌಪಚಾರಿಕ ಸಭೆ ನಡೆಸಿದ್ದರೆ ಅದನ್ನು ಸ್ವಾಗತಿಸಬೇಕು” ಎಂದು ಹೇಳಿದರು.  ಸಭೆಯ ಬಗ್ಗೆ ಕಾಂಗ್ರೆಸ್ ಶಾಸಕ ಪರತಾಪ್ ಬಜ್ವಾ ಸಿಎಂ ಮಾನ್ ಅವರನ್ನು ಪ್ರಶ್ನಿಸಿದ್ದಾರೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಜಿ ಅವರು ದೆಹಲಿ ಸಿಎಂ ಮತ್ತು ಮಂತ್ರಿಗಳು ಸಿಎಂ ಮತ್ತು ಪಂಜಾಬ್ ಮಂತ್ರಿಗಳ ಅನುಪಸ್ಥಿತಿಯಲ್ಲಿ ನಮ್ಮ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆ ಎಂದು ನಮಗೆ ತಿಳಿಸಬೇಕು. ಹಾಗಿದ್ದಲ್ಲಿ ಇದು ರಾಜ್ಯವಾಗಿ ನಮ್ಮ ಹಕ್ಕುಗಳ ಭೀಕರ ಉಲ್ಲಂಘನೆಯಾಗಿದೆ. ಪಂಜಾಬ್ ಜನರು ದೆಹಲಿಯಿಂದ ರಿಮೋಟ್ ಕಂಟ್ರೋಲ್ ಮಾಡಲು ಸರ್ಕಾರಕ್ಕೆ ಮತ ಹಾಕಲಿಲ್ಲ” ಎಂದು ಬಜ್ವಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮನೆ ಮೇಲಿನ ದಾಳಿ ಬಿಜೆಪಿ ಗೂಂಡಾಗಿರಿ; ಕಾಶ್ಮೀರದಲ್ಲಿ ಹತ್ಯಾಕಾಂಡ ನಡೆದಾಗ ಬಿಜೆಪಿ ಸರ್ಕಾರವಿತ್ತು, ಯಾಕೆ ಪುನರ್ವಸತಿ ಕಲ್ಪಿಸಿಲ್ಲ?: ಕೇಜ್ರಿವಾಲ್

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ