AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Satyendar Jain: ಅನಾರೋಗ್ಯ; ತಿಹಾರ್ ಜೈಲಿನಲ್ಲಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್​​ನ್ನು ಆಸ್ಪತ್ರೆಗೆ ಕರೆತಂದ ಪೊಲೀಸ್

ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಮಾಜಿ ಸಚಿವರು 35 ಕೆಜಿ ತೂಕ ಕಳೆದುಕೊಂಡು  ಅಸ್ಥಿಪಂಜರವಾಗಿದ್ದಾರೆ. ಅವರೂ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದಿದ್ದಾರೆ.

Satyendar Jain: ಅನಾರೋಗ್ಯ; ತಿಹಾರ್ ಜೈಲಿನಲ್ಲಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್​​ನ್ನು ಆಸ್ಪತ್ರೆಗೆ ಕರೆತಂದ ಪೊಲೀಸ್
ಸತ್ಯೇಂದ್ರ ಜೈನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 22, 2023 | 1:01 PM

Share

ಹಣ ವರ್ಗಾವಣೆ ಪ್ರಕರಣಕ್ಕೆ(money-laundering case) ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಎಎಪಿ (AAP) ನಾಯಕ ಮತ್ತು ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ (Satyendar Jain) ಆರೋಗ್ಯ ಹದಗೆಟ್ಟಿದ್ದು ಅವರನ್ನು ಸೋಮವಾರ ಸಫ್ದರ್​​ಜಂಗ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಇತ್ತೀಚೆಗಷ್ಟೇ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಉಲ್ಲೇಖಿಸಿ ಜಾಮೀನು ಕೋರಿದ್ದರು ಜೈನ್. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅವರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಸತ್ಯೇಂದ್ರ ಜೈನ್ ಅವರ ವಕೀಲರು ತಮ್ಮ ಕಕ್ಷಿದಾರರು ತೀವ್ರ ಆರೋಗ್ಯ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದಾರೆ. ಅವರು ಅಸ್ಥಿಪಂಜರವಾಗಿ ಮಾರ್ಪಟ್ಟಿದ್ದಾರೆ ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಮಾಜಿ ಸಚಿವರು 35 ಕೆಜಿ ತೂಕ ಕಳೆದುಕೊಂಡು  ಅಸ್ಥಿಪಂಜರವಾಗಿದ್ದಾರೆ. ಅವರೂ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದಿದ್ದಾರೆ.

ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಇಡಿಗೆ ನೋಟಿಸ್ ಜಾರಿ ಮಾಡಿದ್ದು, ಪರಿಹಾರಕ್ಕಾಗಿ ರಜಾ ಪೀಠದ ಮುಂದೆ ಹೋಗಲು ಜೈನ್‌ಗೆ ಅನುಮತಿ ನೀಡಿತ್ತು.

ಇದಕ್ಕೂ ಮೊದಲು, ಏಪ್ರಿಲ್ 6 ರಂದು, ದೆಹಲಿ ಹೈಕೋರ್ಟ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೈನ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, ಅವರು ಆಪಾದಿತ ಅಪರಾಧದ ಪರಿಕಲ್ಪನೆ, ಪ್ರಾರಂಭಿಕ ಮತ್ತು ನಿಧಿ ಪೂರೈಕೆದಾರರು ಎಂಬ ಸಾಕ್ಷಿಗಳ ಹೇಳಿಕೆಯನ್ನು ಗಮನಿಸಿತ್ತು.

ಇದನ್ನೂ ಓದಿ:  ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುಸ್ಲಿಂ ಹುಡುಗನ ಹೆಸರು, ಗಲಾಟೆ, ಕೊನೆಗೆ ಮಗಳ ಮದುವೆಯನ್ನೇ ರದ್ದು ಮಾಡಿದ ಬಿಜೆಪಿ ನಾಯಕ

ಎಎಪಿಯ ಹಿರಿಯ ನಾಯಕ ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷ್ಯಗಳನ್ನು ತಿರುಚುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೈಕೋರ್ಟ್ ಹೇಳಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017 ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿದ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರನ್ನು ಇಡಿ ಬಂಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್