AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮುನಾ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್​ಗೆ ಸಮನ್ಸ್ ಜಾರಿ

ಹರಿಯಾಣದಿಂದ ದೆಹಲಿಗೆ ಬಿಡುತ್ತಿರುವ ಯಮುನಾ ನದಿ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಫೆಬ್ರವರಿ 17ರಂದು ಅರವಿಂದ್ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಹರಿಯಾಣ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿರುವುದರಿಂದ ನ್ಯಾಯಾಲಯವು ಈಗ ಔಪಚಾರಿಕವಾಗಿ ದೆಹಲಿ ನಾಯಕನನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಯಮುನಾ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್​ಗೆ ಸಮನ್ಸ್ ಜಾರಿ
Aap Kejriwal
ಸುಷ್ಮಾ ಚಕ್ರೆ
|

Updated on:Jan 29, 2025 | 9:51 PM

Share

ನವದೆಹಲಿ: ಹರಿಯಾಣ ಸರ್ಕಾರ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಫೆಬ್ರವರಿ 17ರಂದು ತನ್ನ ಮುಂದೆ ಹಾಜರಾಗುವಂತೆ ಹರಿಯಾಣ ನ್ಯಾಯಾಲಯ ನಿರ್ದೇಶಿಸಿದೆ. ದೆಹಲಿಗೆ ಸರಬರಾಜು ಮಾಡುವ ನೀರಿನ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೋರ್ಟ್ ಈ ಆದೇಶ ನೀಡಿದೆ. ದೆಹಲಿಗೆ ನೀರು ಸರಬರಾಜು ಮಾಡುವ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಗಾಗಿ ಹರಿಯಾಣ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದೆ. ಹರಿಯಾಣದ ಕಂದಾಯ ಸಚಿವ ವಿಪುಲ್ ಗೋಯಲ್ ಅವರು ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ಬೇಜವಾಬ್ದಾರಿತನದ ಹೇಳಿಕೆ ಎಂದು ಟೀಕಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳು ದಾರಿತಪ್ಪಿಸುವಂತಿದೆ ಎಂದು ಹರಿಯಾಣ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡುವಾಗ ಅರವಿಂದ್ ಕೇಜ್ರಿವಾಲ್ ಹರಿಯಾಣದ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹರಿಯಾಣ ಸರ್ಕಾರ ಯಮುನಾ ನದಿಗೆ ವಿಷ ಬೆರೆಸಿದೆ. ಈ ಮೂಲಕ ಸಾಮೂಹಿಕ ನರಮೇಧಕ್ಕೆ ಮುಂದಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು.

ಇದನ್ನೂ ಓದಿ: ನಾನೂ ಅದೇ ನೀರು ಕುಡಿದಿದ್ದೇನೆ; ಯಮುನಾ ನದಿ ಕುರಿತ ಕೇಜ್ರಿವಾಲ್ ಆರೋಪಕ್ಕೆ ಪ್ರಧಾನಿ ಮೋದಿ ಆಕ್ರೋಶ

ದೆಹಲಿಗೆ ಸರಬರಾಜು ಮಾಡುವ ನೀರನ್ನು ವಿಷಪೂರಿತಗೊಳಿಸಲಾಗಿದೆ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗೆ ಈ ಪ್ರಕರಣ ಸಂಬಂಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Wed, 29 January 25

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ