Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಮುನಾ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್​ಗೆ ಸಮನ್ಸ್ ಜಾರಿ

ಹರಿಯಾಣದಿಂದ ದೆಹಲಿಗೆ ಬಿಡುತ್ತಿರುವ ಯಮುನಾ ನದಿ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಫೆಬ್ರವರಿ 17ರಂದು ಅರವಿಂದ್ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಹರಿಯಾಣ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿರುವುದರಿಂದ ನ್ಯಾಯಾಲಯವು ಈಗ ಔಪಚಾರಿಕವಾಗಿ ದೆಹಲಿ ನಾಯಕನನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಯಮುನಾ ನೀರು ವಿಷಪೂರಿತವಾಗಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್​ಗೆ ಸಮನ್ಸ್ ಜಾರಿ
Aap Kejriwal
Follow us
ಸುಷ್ಮಾ ಚಕ್ರೆ
|

Updated on:Jan 29, 2025 | 9:51 PM

ನವದೆಹಲಿ: ಹರಿಯಾಣ ಸರ್ಕಾರ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಫೆಬ್ರವರಿ 17ರಂದು ತನ್ನ ಮುಂದೆ ಹಾಜರಾಗುವಂತೆ ಹರಿಯಾಣ ನ್ಯಾಯಾಲಯ ನಿರ್ದೇಶಿಸಿದೆ. ದೆಹಲಿಗೆ ಸರಬರಾಜು ಮಾಡುವ ನೀರಿನ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೋರ್ಟ್ ಈ ಆದೇಶ ನೀಡಿದೆ. ದೆಹಲಿಗೆ ನೀರು ಸರಬರಾಜು ಮಾಡುವ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಗಾಗಿ ಹರಿಯಾಣ ಸರ್ಕಾರ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದೆ. ಹರಿಯಾಣದ ಕಂದಾಯ ಸಚಿವ ವಿಪುಲ್ ಗೋಯಲ್ ಅವರು ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ಬೇಜವಾಬ್ದಾರಿತನದ ಹೇಳಿಕೆ ಎಂದು ಟೀಕಿಸಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗಳು ದಾರಿತಪ್ಪಿಸುವಂತಿದೆ ಎಂದು ಹರಿಯಾಣ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡುವಾಗ ಅರವಿಂದ್ ಕೇಜ್ರಿವಾಲ್ ಹರಿಯಾಣದ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹರಿಯಾಣ ಸರ್ಕಾರ ಯಮುನಾ ನದಿಗೆ ವಿಷ ಬೆರೆಸಿದೆ. ಈ ಮೂಲಕ ಸಾಮೂಹಿಕ ನರಮೇಧಕ್ಕೆ ಮುಂದಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದರು.

ಇದನ್ನೂ ಓದಿ: ನಾನೂ ಅದೇ ನೀರು ಕುಡಿದಿದ್ದೇನೆ; ಯಮುನಾ ನದಿ ಕುರಿತ ಕೇಜ್ರಿವಾಲ್ ಆರೋಪಕ್ಕೆ ಪ್ರಧಾನಿ ಮೋದಿ ಆಕ್ರೋಶ

ದೆಹಲಿಗೆ ಸರಬರಾಜು ಮಾಡುವ ನೀರನ್ನು ವಿಷಪೂರಿತಗೊಳಿಸಲಾಗಿದೆ ಎಂಬ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಗೆ ಈ ಪ್ರಕರಣ ಸಂಬಂಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Wed, 29 January 25

Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ವಿಶ್ರಾಂತಿ ತ್ಯಜಿಸಿ ಡಾಲಿಯ ಮದುವೆಗೆ ಬಂದ ‘ಟಗರು’ ಶಿವಣ್ಣ
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ