ಆಪ್ ನಾಯಕ ಹುಸೇನ್ ಮನೆಯಲ್ಲಿ ಬಾಂಬ್ ಪತ್ತೆ, IB ಅಧಿಕಾರಿ ಹತ್ಯೆಗೆ ಕುಮ್ಮಕ್ಕು ಅರೋಪ

ದೆಹಲಿ: ಪೌರತ್ವ ಕಾಯ್ದೆ ಪರ-ವಿರೋಧ ಕಿಚ್ಚು ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದೆ. ಇದರಿಂದಾಗಿ ಈಗಾಗಲೇ 34 ಮಂದಿ ಮೃತಪಟ್ಟಿದ್ದಾರೆ ಹಾಗೂ 200 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಹಿಂಸಾಚಾರಕ್ಕೆ ಮುಖ್ಯ ಕಾರಣವೇನು. ಇದರ ಹಿಂದಿರುವವರ್ಯಾರು, ಕಿಚ್ಚನ್ನು ಹೊತ್ತಿಸುತ್ತಿರುವವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಾಷ್ಟ್ರ ರಾಜಧಾನಿ ದೆಹಲಿ ಗಲಭೆಯ ಕರಾಳ ಮುಖ ಬಯಲು! ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿಂದೆ ಇಂದು ಕರಾಳ ಮುಖವಿದೆ ಎಂಬುದು ಈಗ ಬಯಲಾಗಿದೆ. ಈ ದಳ್ಳುರಿ ನಡೆಯುವ ಮೊದಲೇ ಬಿಗ್ ಸ್ಕೆಚ್ […]

ಆಪ್ ನಾಯಕ ಹುಸೇನ್ ಮನೆಯಲ್ಲಿ ಬಾಂಬ್ ಪತ್ತೆ, IB ಅಧಿಕಾರಿ ಹತ್ಯೆಗೆ ಕುಮ್ಮಕ್ಕು ಅರೋಪ
ಸಾಧು ಶ್ರೀನಾಥ್​

Updated on: Feb 27, 2020 | 1:15 PM

ದೆಹಲಿ: ಪೌರತ್ವ ಕಾಯ್ದೆ ಪರ-ವಿರೋಧ ಕಿಚ್ಚು ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದೆ. ಇದರಿಂದಾಗಿ ಈಗಾಗಲೇ 34 ಮಂದಿ ಮೃತಪಟ್ಟಿದ್ದಾರೆ ಹಾಗೂ 200 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಹಿಂಸಾಚಾರಕ್ಕೆ ಮುಖ್ಯ ಕಾರಣವೇನು. ಇದರ ಹಿಂದಿರುವವರ್ಯಾರು, ಕಿಚ್ಚನ್ನು ಹೊತ್ತಿಸುತ್ತಿರುವವರ್ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ರಾಷ್ಟ್ರ ರಾಜಧಾನಿ ದೆಹಲಿ ಗಲಭೆಯ ಕರಾಳ ಮುಖ ಬಯಲು!
ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಹಿಂದೆ ಇಂದು ಕರಾಳ ಮುಖವಿದೆ ಎಂಬುದು ಈಗ ಬಯಲಾಗಿದೆ. ಈ ದಳ್ಳುರಿ ನಡೆಯುವ ಮೊದಲೇ ಬಿಗ್ ಸ್ಕೆಚ್ ಹಾಕಲಾಗಿತ್ತು ಎಂದು ಹೇಳಲಾಗುತ್ತಿದೆ. ಇದರ ಸಾಕ್ಷಿಯಂತೆ ಆಪ್ ನಾಯಕನಿಗೆ ಸೇರಿದ ಕಟ್ಟದಲ್ಲಿ ಭಾರಿ ಪ್ರಮಾಣದ ಪೆಟ್ರೋಲ್ ಬಾಂಬ್ ಕಲ್ಲು ಪತ್ತೆಯಾಗಿದೆ. ಆಮ್ ಆದ್ಮಿ ಪಕ್ಷದ ನಾಯಕ ತಾಹೀರ್ ಹುಸೇನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ಕಲ್ಲು ಪತ್ತೆಯಾಗಿದ್ದು, ಗಲಭೆಕೋರರು ಹುಸೇನ್ ಮನೆಯ ಮೇಲಿಂದಲೇ ದಾಳಿ ಮಾಡುತ್ತಿದ್ದರು.

ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿರುವ ಗಲಭೆಯಲ್ಲಿ ದುಷ್ಕರ್ಮಿಗಳು ಇದೇ ಮನೆಯಿಂದ ಪೆಟ್ರೋಲ್ ಬಾಂಬ್, ಕಲ್ಲು, ಬಾಟಲ್ ತೂರಾಟ ಮಾಡುತ್ತಿದ್ದರು ಎನ್ನಲಾಗಿದೆ. ಅಲ್ಲದೆ ಗಲಭೆ ವೇಳೆ ಚಾಂದ್​ಬಾಗ್​ನಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಬರ್ಬರ ಹತ್ಯೆಯ ಹಿಂದೆ ಆಪ್ ನಾಯಕನ ಕೈವಾಡ ಇದೆ. ಹಾಗೂ ಗಲಭೆಕೋರರಿಗೆ ತಾಹೀರ್ ಹುಸೇನ್ ನೆರವು ನೀಡುತ್ತಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿದೆ. ಆದರೆ ಈ ಎಲ್ಲಾ ಆರೋಪಗಳನ್ನು ಆಪ್ ನಾಯಕ ತಾಹೀರ್ ಹುಸೇನ್ ತಳ್ಳಿ ಹಾಕಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us