AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ

ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ 2,457 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬುದು ಆಪ್​ ಆರೋಪ. ಈ ಪ್ರಕರಣದಲ್ಲಿ ಸಿಬಿಐ ತನಿಕೆ ನಡೆಯಬೇಕು ಎಂದು ಒತ್ತಾಯಿಸಲು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ
ಬಂಧಿತ ಆಫ್​ ನಾಯಕರು
ರಾಜೇಶ್ ದುಗ್ಗುಮನೆ
| Edited By: |

Updated on: Dec 13, 2020 | 5:49 PM

Share

ನವದೆಹಲಿ: ಬಿಜೆಪಿ ನಿಯಂತ್ರಣದಲ್ಲಿರುವ ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ದೊಡ್ಡ ಮಟ್ಟದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಆಪ್​ ನಾಯಕರು ಇಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹಾಗೂ ಲೆಫ್ಟಿನಂಟ್​ ಗವರ್ನರ್​ ಅನಿಲ್​ ಬಾಲಾಜಿ ನಿವಾಸದ ಎದುರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ರಾಘವ್​ ಚಡ್ಡಾ, ಆತಿಶಿ ಸೇರಿ ಹಲವಾರು ಆಪ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ₹2,457 ಕೋಟಿ ಅವ್ಯವಹಾರ ನಡೆದಿದೆ ಎಂಬುದು ಆಪ್​ ಆರೋಪ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಅಮಿತ್​ ಶಾ ಹಾಗೂ ಅನಿಲ್​ ಬಾಲಾಜಿ ಮನೆ ಎದುರು ಭಾರೀ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು. ಇದಕ್ಕೆ ಪೊಲೀಸರ ಬಳಿ ಒಪ್ಪಿಗೆ ಕೇಳಿದಾಗ, ಕೊರೊನಾ ​ ನೆಪ ಹೇಳಿ ಅವರು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಅಮಿತ್​ ಶಾ ಮನೆ ಎದುರು ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದರು. ಆದಾಗ್ಯೂ ಆಪ್​ ನಾಯಕರು ಇಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿಯಲ್ಲಿ ಆಡಳಿತದಲ್ಲಿರುವ ಆಪ್​ ಪಕ್ಷ ನಿರಂತರವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಲೇ ಬರುತ್ತಿದೆ. ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಇತ್ತೀಚೆಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದರು. ಜೊತೆಗೆ ಇದಕ್ಕೆ ದೆಹಲಿ ಪೊಲೀಸರ ಕುಮ್ಮಕ್ಕು ಕೂಡ ಇದೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದರು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಘಟನೆ ನಡೆದಿದೆ.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ