AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ

ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ 2,457 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬುದು ಆಪ್​ ಆರೋಪ. ಈ ಪ್ರಕರಣದಲ್ಲಿ ಸಿಬಿಐ ತನಿಕೆ ನಡೆಯಬೇಕು ಎಂದು ಒತ್ತಾಯಿಸಲು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ
ಬಂಧಿತ ಆಫ್​ ನಾಯಕರು
ರಾಜೇಶ್ ದುಗ್ಗುಮನೆ
| Edited By: |

Updated on: Dec 13, 2020 | 5:49 PM

Share

ನವದೆಹಲಿ: ಬಿಜೆಪಿ ನಿಯಂತ್ರಣದಲ್ಲಿರುವ ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ದೊಡ್ಡ ಮಟ್ಟದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಆಪ್​ ನಾಯಕರು ಇಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹಾಗೂ ಲೆಫ್ಟಿನಂಟ್​ ಗವರ್ನರ್​ ಅನಿಲ್​ ಬಾಲಾಜಿ ನಿವಾಸದ ಎದುರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ರಾಘವ್​ ಚಡ್ಡಾ, ಆತಿಶಿ ಸೇರಿ ಹಲವಾರು ಆಪ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ₹2,457 ಕೋಟಿ ಅವ್ಯವಹಾರ ನಡೆದಿದೆ ಎಂಬುದು ಆಪ್​ ಆರೋಪ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಅಮಿತ್​ ಶಾ ಹಾಗೂ ಅನಿಲ್​ ಬಾಲಾಜಿ ಮನೆ ಎದುರು ಭಾರೀ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು. ಇದಕ್ಕೆ ಪೊಲೀಸರ ಬಳಿ ಒಪ್ಪಿಗೆ ಕೇಳಿದಾಗ, ಕೊರೊನಾ ​ ನೆಪ ಹೇಳಿ ಅವರು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಅಮಿತ್​ ಶಾ ಮನೆ ಎದುರು ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದರು. ಆದಾಗ್ಯೂ ಆಪ್​ ನಾಯಕರು ಇಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿಯಲ್ಲಿ ಆಡಳಿತದಲ್ಲಿರುವ ಆಪ್​ ಪಕ್ಷ ನಿರಂತರವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಲೇ ಬರುತ್ತಿದೆ. ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಇತ್ತೀಚೆಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದರು. ಜೊತೆಗೆ ಇದಕ್ಕೆ ದೆಹಲಿ ಪೊಲೀಸರ ಕುಮ್ಮಕ್ಕು ಕೂಡ ಇದೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದರು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಘಟನೆ ನಡೆದಿದೆ.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?