AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ

ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ 2,457 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬುದು ಆಪ್​ ಆರೋಪ. ಈ ಪ್ರಕರಣದಲ್ಲಿ ಸಿಬಿಐ ತನಿಕೆ ನಡೆಯಬೇಕು ಎಂದು ಒತ್ತಾಯಿಸಲು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು.

ಅಮಿತ್​ ಶಾ ಮನೆ ಎದುರು ಪ್ರತಿಭಟನೆಗೆ ಮುಂದಾದ ಆಪ್​ ನಾಯಕರು ಪೊಲೀಸರ ವಶಕ್ಕೆ
ಬಂಧಿತ ಆಫ್​ ನಾಯಕರು
Follow us
ರಾಜೇಶ್ ದುಗ್ಗುಮನೆ
| Updated By: ರಶ್ಮಿ ಕಲ್ಲಕಟ್ಟ

Updated on: Dec 13, 2020 | 5:49 PM

ನವದೆಹಲಿ: ಬಿಜೆಪಿ ನಿಯಂತ್ರಣದಲ್ಲಿರುವ ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ದೊಡ್ಡ ಮಟ್ಟದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಆಪ್​ ನಾಯಕರು ಇಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹಾಗೂ ಲೆಫ್ಟಿನಂಟ್​ ಗವರ್ನರ್​ ಅನಿಲ್​ ಬಾಲಾಜಿ ನಿವಾಸದ ಎದುರು ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ರಾಘವ್​ ಚಡ್ಡಾ, ಆತಿಶಿ ಸೇರಿ ಹಲವಾರು ಆಪ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೆಹಲಿ ನಗರಾಡಳಿತ ಸಂಸ್ಥೆಯಲ್ಲಿ ₹2,457 ಕೋಟಿ ಅವ್ಯವಹಾರ ನಡೆದಿದೆ ಎಂಬುದು ಆಪ್​ ಆರೋಪ. ಈ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಯಬೇಕು ಎಂದು ಒತ್ತಾಯಿಸಿ ಅಮಿತ್​ ಶಾ ಹಾಗೂ ಅನಿಲ್​ ಬಾಲಾಜಿ ಮನೆ ಎದುರು ಭಾರೀ ಪ್ರತಿಭಟನೆ ನಡೆಸಲು ಆಪ್​ ನಿರ್ಧರಿಸಿತ್ತು. ಇದಕ್ಕೆ ಪೊಲೀಸರ ಬಳಿ ಒಪ್ಪಿಗೆ ಕೇಳಿದಾಗ, ಕೊರೊನಾ ​ ನೆಪ ಹೇಳಿ ಅವರು ಅನುಮತಿ ನಿರಾಕರಿಸಿದ್ದರು. ಅಲ್ಲದೆ, ಅಮಿತ್​ ಶಾ ಮನೆ ಎದುರು ಪ್ರತಿಭಟನೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದ್ದರು. ಆದಾಗ್ಯೂ ಆಪ್​ ನಾಯಕರು ಇಂದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿಯಲ್ಲಿ ಆಡಳಿತದಲ್ಲಿರುವ ಆಪ್​ ಪಕ್ಷ ನಿರಂತರವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಲೇ ಬರುತ್ತಿದೆ. ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಇತ್ತೀಚೆಗೆ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದರು. ಜೊತೆಗೆ ಇದಕ್ಕೆ ದೆಹಲಿ ಪೊಲೀಸರ ಕುಮ್ಮಕ್ಕು ಕೂಡ ಇದೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದರು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಘಟನೆ ನಡೆದಿದೆ.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!