AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಭಕ್ತರಿಗೆ ಗೆಲುವಿನ ಕ್ಷಣ: ನಿಷೇಧಾಜ್ಞೆ ಹಿಂಪಡೆದ ಪೊಲೀಸರ ನಿರ್ಧಾರ ಸ್ವಾಗತಿಸಿದ ಎಎಪಿ

ಲೆಫ್ಟಿನೆಂಟ್ ಗವರ್ನರ್‌ಗೆ ಇದು ಮುಜುಗರದ ಸೋಲು. ಸಾರ್ವಭೌಮ, ಮುಕ್ತ ದೇಶದಲ್ಲಿ ಇಂತಹ ‘ಅಸಂಬದ್ಧ’ ಆದೇಶಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ಅದರ ವಕೀಲರು ತಿಳಿದಿದ್ದರು,” ಎಂದು ಭಾರದ್ವಾಜ್ ಟೀಕಿಸಿದ್ದಾರೆ.ಅಲ್ಲದೆ, ಸಚಿವರು ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಿಂದೂ ಭಕ್ತರಿಗೆ ಗೆಲುವಿನ ಕ್ಷಣ: ನಿಷೇಧಾಜ್ಞೆ ಹಿಂಪಡೆದ ಪೊಲೀಸರ ನಿರ್ಧಾರ ಸ್ವಾಗತಿಸಿದ ಎಎಪಿ
ಸೌರಭ್ ಭಾರದ್ವಾಜ್
ರಶ್ಮಿ ಕಲ್ಲಕಟ್ಟ
|

Updated on:Oct 03, 2024 | 8:51 PM

Share

ದೆಹಲಿ ಅಕ್ಟೋಬರ್ 03: ದೆಹಲಿಯಲ್ಲಿ ತನ್ನ ನಿಷೇಧಾಜ್ಞೆಯನ್ನು ದೆಹಲಿ ಪೊಲೀಸರು ಹಿಂಪಡೆದಿರುವುದನ್ನು ಸ್ವಾಗತಿಸಿರುವ ಆಡಳಿತಾರೂಢ ಆಮ್ ಆದ್ಮಿ ಪಕ್ಷ (AAP) ಗುರುವಾರ ಇದನ್ನು ‘ಹಿಂದೂ ಭಕ್ತರ ವಿಜಯ’ ಎಂದು ಕರೆದಿದೆ. ಸೆಪ್ಟೆಂಬರ್ 30 ರ ಆದೇಶವು ಭಾನುವಾರದವರೆಗೆ ಜಾರಿಯಲ್ಲಿರುತ್ತದೆ, ಇದು ಒಂಬತ್ತು ದಿನಗಳ ನವರಾತ್ರಿ ಉತ್ಸವಕ್ಕೆ ಮುಂಚಿತವಾಗಿ ಹಿಂದೂಗಳಲ್ಲಿ ‘ಆಕ್ರೋಷ’ಕ್ಕೆ ಕಾರಣವಾಯಿತು ಎಂದು ದೆಹಲಿ ಸಚಿವ ಮತ್ತು ಎಎಪಿ ಸದಸ್ಯ ಸೌರಭ್ ಭಾರದ್ವಾಜ್ ಹೇಳಿದ್ದಾರೆ.

“ಇದು ದೆಹಲಿಯ ಜನರಿಗೆ, ವಿಶೇಷವಾಗಿ ಹಿಂದೂ ಭಕ್ತರಿಗೆ ವಿಜಯದ ಕ್ಷಣವಾಗಿದೆ, ಅವರು ಹಬ್ಬವನ್ನು ಹೇಗೆ ಆಚರಿಸುತ್ತಾರೆ ಎಂದು ಚಿಂತಿಸುತ್ತಿದ್ದರು” ಎಂದು ಭಾರದ್ವಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ನವರಾತ್ರಿ ಆಚರಣೆ ಗುರುವಾರ ಆರಂಭವಾಗಿದೆ.

ಏತನ್ಮಧ್ಯೆ, ಭಾರದ್ವಾಜ್ ಕೇಂದ್ರಾಡಳಿತ ಪ್ರದೇಶದ ಸಾಂವಿಧಾನಿಕ ಮುಖ್ಯಸ್ಥ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಯಾದ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಲೆಫ್ಟಿನೆಂಟ್ ಗವರ್ನರ್‌ಗೆ ಇದು ಮುಜುಗರದ ಸೋಲು. ಸಾರ್ವಭೌಮ, ಮುಕ್ತ ದೇಶದಲ್ಲಿ ಇಂತಹ ‘ಅಸಂಬದ್ಧ’ ಆದೇಶಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ಅದರ ವಕೀಲರು ತಿಳಿದಿದ್ದರು,” ಎಂದು ಭಾರದ್ವಾಜ್ ಟೀಕಿಸಿದ್ದಾರೆ. ಅಂದಹಾಗೆ ಈ ಆದೇಶವನ್ನು ಕಲ್ಕಾಜಿ ದೇವಸ್ಥಾನದ ಅರ್ಚಕರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಅಲ್ಲದೆ, ಸಚಿವರು ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಕೇಂದ್ರದಲ್ಲಿ ಸರ್ಕಾರವನ್ನು ಮುನ್ನಡೆಸುತ್ತದೆ ಮತ್ತು ದೆಹಲಿಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿದೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್ ಹಿಂದೂ ಧರ್ಮದ ರಕ್ಷಕರು” ಎಂದು ಹೇಳಿಕೊಂಡರೂ ಆದೇಶದ ವಿರುದ್ಧ ಮಾತನಾಡಲಿಲ್ಲ” ಎಂದು ಎಎಪಿ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಧಾರ್ಮಿಕ ಸ್ವಾತಂತ್ರ್ಯದ ದುರುಪಯೋಗದ ಕುರಿತು USCIRF ನ ದುರುದ್ದೇಶಪೂರಿತ ವರದಿ ತಿರಸ್ಕರಿಸಿದ ಭಾರತ

ಬುಧವಾರ ಮತ್ತು ಗುರುವಾರದ ಮಧ್ಯಂತರ ರಾತ್ರಿ ಆದೇಶವನ್ನು ನಿಲ್ಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ, ಎಂಸಿಡಿ ಸ್ಥಾಯಿ ಸಮಿತಿ ಚುನಾವಣೆ ಮತ್ತು ಬಾಕಿ ಉಳಿದಿರುವ ಡಿಯುಎಸ್‌ಯು ಚುನಾವಣಾ ಫಲಿತಾಂಶಗಳಂತಹ ಸಮಸ್ಯೆಗಳಿಂದ ದೆಹಲಿಯ ವಾತಾವರಣವು ‘ಸೂಕ್ಷ್ಮ’ವಾಗಿರುವ ಕಾರಣ ಇದನ್ನು ವಿಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:51 pm, Thu, 3 October 24

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ