AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಪೌರ ಕಾರ್ಮಿಕರ ಮೇಲೆ ಬಿಜೆಪಿ ಶಾಸಕ ಹಲ್ಲೆ ನಡೆಸಿರುವುದಾಗಿ ಎಎಪಿ ಆರೋಪ, ವಿಡಿಯೊ ಬಿಡುಗಡೆ

ನೈರ್ಮಲ್ಯದ ವಿಷಯವಾಗಿ ಇತ್ತೀಚೆಗೆ ನಡೆದ ಪೌರ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಸೋತಿರುವ ತನ್ನ ಹತಾಶೆಯನ್ನು ಹೊರಹಾಕುತ್ತಿದೆ ಎಂದು ಎಎಪಿ ಹೇಳಿದೆ.

ದೆಹಲಿಯಲ್ಲಿ ಪೌರ ಕಾರ್ಮಿಕರ ಮೇಲೆ ಬಿಜೆಪಿ ಶಾಸಕ ಹಲ್ಲೆ ನಡೆಸಿರುವುದಾಗಿ ಎಎಪಿ ಆರೋಪ, ವಿಡಿಯೊ ಬಿಡುಗಡೆ
ಪೌರ ಕಾರ್ಮಿಕರ ಮೇಲೆ ಹಲ್ಲೆ (ವಿಡಿಯೊ ಚಿತ್ರ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 29, 2022 | 8:55 PM

ದೆಹಲಿ: ಬಿಜೆಪಿ ಶಾಸಕ ಅಭಯ್ ವರ್ಮಾ(Abhay Verma) ದೆಹಲಿಯಲ್ಲಿ ಪೌರ ಕಾರ್ಮಿಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (AAP) ಗುರುವಾರ ಆರೋಪಿಸಿದೆ, ಆದರೆ ಶಾಸಕರು ಈ ಆರೋಪ ನಿರಾಕರಿಸಿದ್ದು ಸಾರ್ವಜನಿಕ ಶೌಚಾಲಯಕ್ಕೆ ಏಕೆ ಬೀಗ ಹಾಕಿದ್ದೀರಿ ಎಂದು ಮಾತ್ರ ಕೇಳಿದ್ದೇನೆ ಎಂದಿದ್ದಾರೆ. ಎಎಪಿ ಶಾಸಕ ಕುಲದೀಪ್ ಕುಮಾರ್ (Kuldeep Kumar) ವಿಡಿಯೊವನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಮತ್ತು ಎಎಪಿ ಪರಸ್ಪರ ಜಗಳವಾಡಿದೆ. ಶಾಸಕರು ಕೆಲಸಗಾರನನ್ನು ನಿಂದಿಸಿದ್ದಾರೆ ಮತ್ತು ಕಪಾಳಮೋಕ್ಷ ಮಾಡಿದ್ದಾರೆ ಎಂದು ಎಎಪಿ ಆರೋಪಿಸಿದೆ. ಪೌರ ಕಾರ್ಮಿಕರನ್ನು ಕೆಲವರು ತಳ್ಳಿ ಕಪಾಳಮೋಕ್ಷ ಮಾಡಿರುವುದು ವಿಡಿಯೊದಲ್ಲಿದೆ. ನೈರ್ಮಲ್ಯದ ವಿಷಯವಾಗಿ ಇತ್ತೀಚೆಗೆ ನಡೆದ ಪೌರ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಸೋತಿರುವ ತನ್ನ ಹತಾಶೆಯನ್ನು ಹೊರಹಾಕುತ್ತಿದೆ ಎಂದು ಎಎಪಿ ಹೇಳಿದೆ. ಎಎಪಿಯ ಹಿರಿಯ ನಾಯಕಿ ರಾಖಿ ಬಿರ್ಲಾ ಮಾತನಾಡಿ, ಕಾರ್ಮಿಕರ ಸುರಕ್ಷತೆಗೆ ಆಗ್ರಹಿಸಿ ದೆಹಲಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗುವುದು. ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರುವುದಾಗಿ ಹೇಳಿದ್ದಾರೆ. ಬಿಜೆಪಿಯ ಕ್ರಮಗಳು ಅವರ ಮನಸ್ಥಿತಿಯನ್ನು ಬಿಂಬಿಸುತ್ತವೆ. ಇದು ಯಾವಾಗಲೂ ದಲಿತ ವಿರೋಧಿಯಾಗಿದೆ. ಅವರನ್ನು ಕೇವಲ ‘ವೋಟ್ ಬ್ಯಾಂಕ್’ ಎಂದು ನೋಡುತ್ತದೆ” ಎಂದು ರಾಖಿ ಬಿರ್ಲಾ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.

ಆದರೆ ಬಿಜೆಪಿ ಶಾಸಕ ಅಭಯ್ ವರ್ಮಾ ಅವರು ಪ್ರತ್ಯಾರೋಪಗಳೊಂದಿಗೆ ಪ್ರತಿಕ್ರಿಯಿಸಿದ್ದು, ನನ್ನ ಸಮ್ಮುಖದಲ್ಲಿ ಜಗಳ ನಡೆದಿಲ್ಲ ಎಂದಿದ್ದಾರೆ. ನಾನು ಈ ಪ್ರದೇಶಕ್ಕೆ ಭೇಟಿ ನೀಡಿದಾಗ ಸ್ಲಂ ನಿವಾಸಿಗಳಿಗೆ ಮೀಸಲಾದ ಶೌಚಾಲಯಕ್ಕೆ ಬೀಗ ಹಾಕಲಾಗಿದೆ ಎಂಬ ದೂರು ಬಂದಿದ್ದು, ನಾನು ಕೆಲಸಗಾರನನ್ನು ಕೇಳಿದಾಗ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಆರೋಪಕ್ಕೆ ಕಾರ್ಮಿಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

”ಮೊದಲು ತನ್ನ ಬಳಿ ಕೀ ಇಲ್ಲ ಎಂದಿದ್ದರು. ಆದರೆ ನಾನು ಮತ್ತು ಸ್ಥಳೀಯರು ಒತ್ತಡ ಹೇರಿದಾಗ ಕೀ ತಂದು ಶೌಚಾಲಯ ತೆರೆದರು. ಇಲ್ಲಿ ಮದ್ಯವನ್ನೂ ಸಂಗ್ರಹಿಸಲಾಗಿದೆ’ ಎಂದು ಸ್ಥಳೀಯರು ಹೇಳಿದ್ದರು ಎಂದು ಶಾಸಕರು ಹೇಳಿದ್ದಾರೆ. ‘ಇಂತಹ ಸಾರ್ವಜನಿಕ ಸೌಲಭ್ಯವನ್ನು ಏಕೆ ಮುಚ್ಚಿಟ್ಟಿದ್ದೀರಿ ಎಂದು ಕೇಳುವುದು ಒಬ್ಬ ಜನಪ್ರತಿನಿಧಿಯಾಗಿ ನನ್ನ ಹಕ್ಕು, ಮುಂದೆಯೂ ಶೌಚಾಲಯಕ್ಕೆ ಬೀಗ ಹಾಕಿದರೆ ಖಂಡಿತ ಮತ್ತೊಮ್ಮೆ ಅಲ್ಲಿಗೆ ಹೋಗುತ್ತೇನೆ’ ಎಂದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ