AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​

ಈ ಬಾರಿಯ ಪಂಜಾಬ್​, ಗೋವಾ, ಉತ್ತರಾಖಂಡ್​ ಚುನಾವಣೆಗಳನ್ನು ಆಮ್ ಆದ್ಮಿ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಅರವಿಂದ್ ಕೇಜ್ರಿವಾಲ್​ ಈ ರಾಜ್ಯಗಳ ಪ್ರವಾಸ ಮಾಡುತ್ತಿದ್ದರು.

ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Dec 26, 2021 | 8:50 PM

Share

ಚಂಡಿಗಢ್​: ಪಂಜಾಬ್​ ವಿಧಾನಸಭೆ ಚುನಾವಣೆ(Punjab Assembly Election)ಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಇಂದು ಆಮ್​ ಆದ್ಮಿ ಪಕ್ಷ (AAP) ಬಿಡುಗಡೆ ಮಾಡಿದೆ. ಪಂಜಾಬ್​ನಲ್ಲಿ ಫೆಬ್ರವರಿ ಅಥವಾ ಮಾರ್ಚ್​ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅರವಿಂದ್ ಕೇಜ್ರಿವಾಲ್​ ನೇತೃತ್ವದ ಆಪ್​,  ಇದುವರೆಗೆ 73 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನವೆಂಬರ್ ಪ್ರಾರಂಭದಲ್ಲಿ ಬಿಡುಗಡೆ ಮಾಡಲಾಗಿತ್ತು. ಹಾಗೇ, ಎರಡೇ ದಿನಗಳ ಹಿಂದೆ 18 ಅಭ್ಯರ್ಥಿಗಳ ಹೆಸರುಳ್ಳ ಮೂರನೇ ಪಟ್ಟಿಯನ್ನು ಆಪ್​ ಬಹಿರಂಗ ಮಾಡಿತ್ತು. ಇದೀಗ 15 ಜನರ ಹೆಸರಿನ ನಾಲ್ಕನೇ ಲಿಸ್ಟ್​ ಹೊರಬಿದ್ದಿದೆ. ಆದರೆ ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ಅರವಿಂದ್ ಕೇಜ್ರಿವಾಲ್​ ತಿಳಿಸಿಲ್ಲ.  

ಇದೀಗ ಬಿಡುಗಡೆಯಾದ ಲಿಸ್ಟ್​​ನಲ್ಲಿ ರಂಜಿತ್ ಸಿಂಗ್ ರಾಣಾ, ಇಂದ್ರಜಿತ್ ಕೌರ್ ಮನ್​, ಗುರ್ಧಿಯನ್ ಸಿಂಗ್ ಮುಲ್ತಾನಿ, ಕರ್ಮವೀರ್ ಸಿಂಗ್​ ಘುಮ್ಮನ್​, ಜಸ್ವೀರ್​ ಸಿಂಗ್​ ರಾಜಾ ಗಿಲ್​, ದಿನೇಶ್​ ಘದಾ, ಲಖ್ಬೀರ್ ಸಿಂಗ್ ರೈ, ತರುಣ್​ಪ್ರೀತ್​ ಸಿಂಗ್​ ಸೋಂಧ್​, ಹಕಮ್​ ಸಿಂಗ್​ ಥೇಕೆಡಾರ್​, ದೇವಿಂದರ್​ ಸಿಂಗ್​ ಲಡ್ಡಿ ಧೋಸ್​, ಅಶು ಬಂಗೇರ್​, ಅಮಂದೀಪ್​ ಸಿಂಗ್​, ಗೋಲ್ಡಿ ಮುಸಾಫಿರ್​, ಡಾ.ವಿಜಯ್ ಸಿಂಗ್ಲಾ, ನರೀಂದರ್​ ಕೌರ್​ ಭರಾಜ್​ ಮತ್ತು ಕುಲ್​ಜಿತ್​ ಸಿಂಗ್ ರಾಂಧವಾ ಅವರ ಹೆಸರಿದೆ.

ಈ ಬಾರಿಯ ಪಂಜಾಬ್​, ಗೋವಾ, ಉತ್ತರಾಖಂಡ್​ ಚುನಾವಣೆಗಳನ್ನು ಆಮ್ ಆದ್ಮಿ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. 2017ರ ಪಂಜಾಬ್​ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟಬಹುಮತಗಳಿಸಿತ್ತು. 117 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಪಂಜಾಬ್​​ನಲ್ಲಿ ಕಾಂಗ್ರೆಸ್​ 77 ಸೀಟುಗಳನ್ನು ಗೆದ್ದುಕೊಂಡಿತ್ತು. ಆಗ ಆಪ್​ 20 ಕ್ಷೇತ್ರಗಳಲ್ಲಿ ಗೆದ್ದಿತ್ತು.  ಈಗಾಗಲೇ ಪಂಜಾಬ್​​ಗೆ ಎರಡು-ಮೂರು ಬಾರಿ ಭೇಟಿ ಕೊಟ್ಟಿರುವ ಅರವಿಂದ್ ಕೇಜ್ರಿವಾಲ್​, ತಾವು ಅಲ್ಲಿ ಅಧಿಕಾರಕ್ಕೆ ಬಂದರೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಉಚಿತ ಆರೋಗ್ಯ ಸೇವೆ, ಶಿಕ್ಷಕರ ಸಮಸ್ಯೆಗಳ ಪರಿಹಾರದ ಭರವಸೆಯನ್ನೂ ಕೊಟ್ಟಿದ್ದಾರೆ. ಅದೆಲ್ಲಕ್ಕಿಂತ ಮುಖ್ಯವಾಗಿ ಪಂಜಾಬ್​​ನಲ್ಲಿ ಆಪ್​ ಅಧಿಕಾರ ಹಿಡಿದರೆ ಪ್ರತಿತಿಂಗಳೂ ಮಹಿಳೆಯರ ಖಾತೆಗೆ 1000 ರೂಪಾಯಿ ಹಾಕುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವರ ಎಚ್ಚರಿಕೆಯ ಬೆನ್ನಲ್ಲೇ ಸನ್ನಿ ಲಿಯೋನ್​​ನ ಮಧುಬನ್ ಹಾಡಿನ ಸಾಹಿತ್ಯ ಬದಲಿಸಲು ನಿರ್ಧಾರ

Published On - 8:49 pm, Sun, 26 December 21

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್