AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​

ಈ ಬಾರಿಯ ಪಂಜಾಬ್​, ಗೋವಾ, ಉತ್ತರಾಖಂಡ್​ ಚುನಾವಣೆಗಳನ್ನು ಆಮ್ ಆದ್ಮಿ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಅರವಿಂದ್ ಕೇಜ್ರಿವಾಲ್​ ಈ ರಾಜ್ಯಗಳ ಪ್ರವಾಸ ಮಾಡುತ್ತಿದ್ದರು.

ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Dec 26, 2021 | 8:50 PM

Share

ಚಂಡಿಗಢ್​: ಪಂಜಾಬ್​ ವಿಧಾನಸಭೆ ಚುನಾವಣೆ(Punjab Assembly Election)ಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಇಂದು ಆಮ್​ ಆದ್ಮಿ ಪಕ್ಷ (AAP) ಬಿಡುಗಡೆ ಮಾಡಿದೆ. ಪಂಜಾಬ್​ನಲ್ಲಿ ಫೆಬ್ರವರಿ ಅಥವಾ ಮಾರ್ಚ್​ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅರವಿಂದ್ ಕೇಜ್ರಿವಾಲ್​ ನೇತೃತ್ವದ ಆಪ್​,  ಇದುವರೆಗೆ 73 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನವೆಂಬರ್ ಪ್ರಾರಂಭದಲ್ಲಿ ಬಿಡುಗಡೆ ಮಾಡಲಾಗಿತ್ತು. ಹಾಗೇ, ಎರಡೇ ದಿನಗಳ ಹಿಂದೆ 18 ಅಭ್ಯರ್ಥಿಗಳ ಹೆಸರುಳ್ಳ ಮೂರನೇ ಪಟ್ಟಿಯನ್ನು ಆಪ್​ ಬಹಿರಂಗ ಮಾಡಿತ್ತು. ಇದೀಗ 15 ಜನರ ಹೆಸರಿನ ನಾಲ್ಕನೇ ಲಿಸ್ಟ್​ ಹೊರಬಿದ್ದಿದೆ. ಆದರೆ ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ಅರವಿಂದ್ ಕೇಜ್ರಿವಾಲ್​ ತಿಳಿಸಿಲ್ಲ.  

ಇದೀಗ ಬಿಡುಗಡೆಯಾದ ಲಿಸ್ಟ್​​ನಲ್ಲಿ ರಂಜಿತ್ ಸಿಂಗ್ ರಾಣಾ, ಇಂದ್ರಜಿತ್ ಕೌರ್ ಮನ್​, ಗುರ್ಧಿಯನ್ ಸಿಂಗ್ ಮುಲ್ತಾನಿ, ಕರ್ಮವೀರ್ ಸಿಂಗ್​ ಘುಮ್ಮನ್​, ಜಸ್ವೀರ್​ ಸಿಂಗ್​ ರಾಜಾ ಗಿಲ್​, ದಿನೇಶ್​ ಘದಾ, ಲಖ್ಬೀರ್ ಸಿಂಗ್ ರೈ, ತರುಣ್​ಪ್ರೀತ್​ ಸಿಂಗ್​ ಸೋಂಧ್​, ಹಕಮ್​ ಸಿಂಗ್​ ಥೇಕೆಡಾರ್​, ದೇವಿಂದರ್​ ಸಿಂಗ್​ ಲಡ್ಡಿ ಧೋಸ್​, ಅಶು ಬಂಗೇರ್​, ಅಮಂದೀಪ್​ ಸಿಂಗ್​, ಗೋಲ್ಡಿ ಮುಸಾಫಿರ್​, ಡಾ.ವಿಜಯ್ ಸಿಂಗ್ಲಾ, ನರೀಂದರ್​ ಕೌರ್​ ಭರಾಜ್​ ಮತ್ತು ಕುಲ್​ಜಿತ್​ ಸಿಂಗ್ ರಾಂಧವಾ ಅವರ ಹೆಸರಿದೆ.

ಈ ಬಾರಿಯ ಪಂಜಾಬ್​, ಗೋವಾ, ಉತ್ತರಾಖಂಡ್​ ಚುನಾವಣೆಗಳನ್ನು ಆಮ್ ಆದ್ಮಿ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. 2017ರ ಪಂಜಾಬ್​ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟಬಹುಮತಗಳಿಸಿತ್ತು. 117 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಪಂಜಾಬ್​​ನಲ್ಲಿ ಕಾಂಗ್ರೆಸ್​ 77 ಸೀಟುಗಳನ್ನು ಗೆದ್ದುಕೊಂಡಿತ್ತು. ಆಗ ಆಪ್​ 20 ಕ್ಷೇತ್ರಗಳಲ್ಲಿ ಗೆದ್ದಿತ್ತು.  ಈಗಾಗಲೇ ಪಂಜಾಬ್​​ಗೆ ಎರಡು-ಮೂರು ಬಾರಿ ಭೇಟಿ ಕೊಟ್ಟಿರುವ ಅರವಿಂದ್ ಕೇಜ್ರಿವಾಲ್​, ತಾವು ಅಲ್ಲಿ ಅಧಿಕಾರಕ್ಕೆ ಬಂದರೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಉಚಿತ ಆರೋಗ್ಯ ಸೇವೆ, ಶಿಕ್ಷಕರ ಸಮಸ್ಯೆಗಳ ಪರಿಹಾರದ ಭರವಸೆಯನ್ನೂ ಕೊಟ್ಟಿದ್ದಾರೆ. ಅದೆಲ್ಲಕ್ಕಿಂತ ಮುಖ್ಯವಾಗಿ ಪಂಜಾಬ್​​ನಲ್ಲಿ ಆಪ್​ ಅಧಿಕಾರ ಹಿಡಿದರೆ ಪ್ರತಿತಿಂಗಳೂ ಮಹಿಳೆಯರ ಖಾತೆಗೆ 1000 ರೂಪಾಯಿ ಹಾಕುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವರ ಎಚ್ಚರಿಕೆಯ ಬೆನ್ನಲ್ಲೇ ಸನ್ನಿ ಲಿಯೋನ್​​ನ ಮಧುಬನ್ ಹಾಡಿನ ಸಾಹಿತ್ಯ ಬದಲಿಸಲು ನಿರ್ಧಾರ

Published On - 8:49 pm, Sun, 26 December 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ