AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​

ಈ ಬಾರಿಯ ಪಂಜಾಬ್​, ಗೋವಾ, ಉತ್ತರಾಖಂಡ್​ ಚುನಾವಣೆಗಳನ್ನು ಆಮ್ ಆದ್ಮಿ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಅರವಿಂದ್ ಕೇಜ್ರಿವಾಲ್​ ಈ ರಾಜ್ಯಗಳ ಪ್ರವಾಸ ಮಾಡುತ್ತಿದ್ದರು.

ಪಂಜಾಬ್​ ವಿಧಾನಸಭಾ ಚುನಾವಣೆ; 15 ಅಭ್ಯರ್ಥಿಗಳ ಹೆಸರುಳ್ಳ 4ನೇ ಪಟ್ಟಿ ಬಿಡುಗಡೆ ಮಾಡಿದ ಆಪ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Dec 26, 2021 | 8:50 PM

Share

ಚಂಡಿಗಢ್​: ಪಂಜಾಬ್​ ವಿಧಾನಸಭೆ ಚುನಾವಣೆ(Punjab Assembly Election)ಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಇಂದು ಆಮ್​ ಆದ್ಮಿ ಪಕ್ಷ (AAP) ಬಿಡುಗಡೆ ಮಾಡಿದೆ. ಪಂಜಾಬ್​ನಲ್ಲಿ ಫೆಬ್ರವರಿ ಅಥವಾ ಮಾರ್ಚ್​ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅರವಿಂದ್ ಕೇಜ್ರಿವಾಲ್​ ನೇತೃತ್ವದ ಆಪ್​,  ಇದುವರೆಗೆ 73 ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನವೆಂಬರ್ ಪ್ರಾರಂಭದಲ್ಲಿ ಬಿಡುಗಡೆ ಮಾಡಲಾಗಿತ್ತು. ಹಾಗೇ, ಎರಡೇ ದಿನಗಳ ಹಿಂದೆ 18 ಅಭ್ಯರ್ಥಿಗಳ ಹೆಸರುಳ್ಳ ಮೂರನೇ ಪಟ್ಟಿಯನ್ನು ಆಪ್​ ಬಹಿರಂಗ ಮಾಡಿತ್ತು. ಇದೀಗ 15 ಜನರ ಹೆಸರಿನ ನಾಲ್ಕನೇ ಲಿಸ್ಟ್​ ಹೊರಬಿದ್ದಿದೆ. ಆದರೆ ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ಅರವಿಂದ್ ಕೇಜ್ರಿವಾಲ್​ ತಿಳಿಸಿಲ್ಲ.  

ಇದೀಗ ಬಿಡುಗಡೆಯಾದ ಲಿಸ್ಟ್​​ನಲ್ಲಿ ರಂಜಿತ್ ಸಿಂಗ್ ರಾಣಾ, ಇಂದ್ರಜಿತ್ ಕೌರ್ ಮನ್​, ಗುರ್ಧಿಯನ್ ಸಿಂಗ್ ಮುಲ್ತಾನಿ, ಕರ್ಮವೀರ್ ಸಿಂಗ್​ ಘುಮ್ಮನ್​, ಜಸ್ವೀರ್​ ಸಿಂಗ್​ ರಾಜಾ ಗಿಲ್​, ದಿನೇಶ್​ ಘದಾ, ಲಖ್ಬೀರ್ ಸಿಂಗ್ ರೈ, ತರುಣ್​ಪ್ರೀತ್​ ಸಿಂಗ್​ ಸೋಂಧ್​, ಹಕಮ್​ ಸಿಂಗ್​ ಥೇಕೆಡಾರ್​, ದೇವಿಂದರ್​ ಸಿಂಗ್​ ಲಡ್ಡಿ ಧೋಸ್​, ಅಶು ಬಂಗೇರ್​, ಅಮಂದೀಪ್​ ಸಿಂಗ್​, ಗೋಲ್ಡಿ ಮುಸಾಫಿರ್​, ಡಾ.ವಿಜಯ್ ಸಿಂಗ್ಲಾ, ನರೀಂದರ್​ ಕೌರ್​ ಭರಾಜ್​ ಮತ್ತು ಕುಲ್​ಜಿತ್​ ಸಿಂಗ್ ರಾಂಧವಾ ಅವರ ಹೆಸರಿದೆ.

ಈ ಬಾರಿಯ ಪಂಜಾಬ್​, ಗೋವಾ, ಉತ್ತರಾಖಂಡ್​ ಚುನಾವಣೆಗಳನ್ನು ಆಮ್ ಆದ್ಮಿ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. 2017ರ ಪಂಜಾಬ್​ ಚುನಾವಣೆಯಲ್ಲಿ ಕಾಂಗ್ರೆಸ್​ ಸ್ಪಷ್ಟಬಹುಮತಗಳಿಸಿತ್ತು. 117 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಪಂಜಾಬ್​​ನಲ್ಲಿ ಕಾಂಗ್ರೆಸ್​ 77 ಸೀಟುಗಳನ್ನು ಗೆದ್ದುಕೊಂಡಿತ್ತು. ಆಗ ಆಪ್​ 20 ಕ್ಷೇತ್ರಗಳಲ್ಲಿ ಗೆದ್ದಿತ್ತು.  ಈಗಾಗಲೇ ಪಂಜಾಬ್​​ಗೆ ಎರಡು-ಮೂರು ಬಾರಿ ಭೇಟಿ ಕೊಟ್ಟಿರುವ ಅರವಿಂದ್ ಕೇಜ್ರಿವಾಲ್​, ತಾವು ಅಲ್ಲಿ ಅಧಿಕಾರಕ್ಕೆ ಬಂದರೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲ, ಉಚಿತ ಆರೋಗ್ಯ ಸೇವೆ, ಶಿಕ್ಷಕರ ಸಮಸ್ಯೆಗಳ ಪರಿಹಾರದ ಭರವಸೆಯನ್ನೂ ಕೊಟ್ಟಿದ್ದಾರೆ. ಅದೆಲ್ಲಕ್ಕಿಂತ ಮುಖ್ಯವಾಗಿ ಪಂಜಾಬ್​​ನಲ್ಲಿ ಆಪ್​ ಅಧಿಕಾರ ಹಿಡಿದರೆ ಪ್ರತಿತಿಂಗಳೂ ಮಹಿಳೆಯರ ಖಾತೆಗೆ 1000 ರೂಪಾಯಿ ಹಾಕುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಚಿವರ ಎಚ್ಚರಿಕೆಯ ಬೆನ್ನಲ್ಲೇ ಸನ್ನಿ ಲಿಯೋನ್​​ನ ಮಧುಬನ್ ಹಾಡಿನ ಸಾಹಿತ್ಯ ಬದಲಿಸಲು ನಿರ್ಧಾರ

Published On - 8:49 pm, Sun, 26 December 21

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ