AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AAP Protest: ದೇಶದಾದ್ಯಂತ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿದ ಎಎಪಿ

ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ ಉರ್ದು, ಪಂಜಾಬಿ, ಗುಜರಾತಿ, ತೆಲುಗು, ಬೆಂಗಾಲಿ, ಒಡಿಯಾ, ಕನ್ನಡ, ಮಲಯಾಳಂ ಮತ್ತು ಮರಾಠಿ ಭಾಷೆಗಳಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ.

AAP Protest: ದೇಶದಾದ್ಯಂತ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿದ ಎಎಪಿ
ಪೋಸ್ಟರ್​​ನೊಂದಿಗೆ ಎಎಪಿ ನಾಯಕರು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 30, 2023 | 8:00 AM

Share

ಮುಖ್ಯಾಂಶಗಳು

  • ದೇಶಾದ್ಯಂತ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ ಎಎಪಿ
  • 11 ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮೋದಿ ಹಠಾವೋ , ದೇಶ್ ಬಚಾವೋ ಪೋಸ್ಟರ್
  • ಕಳೆದ ವಾರ ದೆಹಲಿಯ ಗೋಡೆ ಮತ್ತು ವಿದ್ಯುತ್ ಕಂಬಗಳ ಮೇಲೆ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ಕಾಣಿಸಿಕೊಂಡಿತ್ತು

ದೆಹಲಿ: ಆಮ್ ಆದ್ಮಿ ಪಕ್ಷ  (Aam Aadmi Party) ಇಂದು (ಮಾರ್ಚ್ 30ರಂದು) ದೇಶದಾದ್ಯಂತ 11 ಭಾಷೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಪೋಸ್ಟರ್‌ಗಳನ್ನು ಪ್ರದರ್ಶಿಸಲಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಗೋಪಾಲ್ ರಾಯ್ (Gopal Rai) ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಮಾರ್ಚ್ 30 ರಂದು ದೇಶಾದ್ಯಂತ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಪ್ರದರ್ಶಿಸುತ್ತದೆ. ಪಕ್ಷದ ಎಲ್ಲಾ ರಾಜ್ಯ ಘಟಕಗಳಲ್ಲಿ ತಮ್ಮ ರಾಜ್ಯಗಳಲ್ಲಿ ಪೋಸ್ಟರ್‌ಗಳನ್ನು ಅಂಟಿಸಲು ಕೇಳಲಾಗಿದೆ. ಪೋಸ್ಟರ್‌ಗಳನ್ನು 11 ಭಾಷೆಗಳಲ್ಲಿ ಮುದ್ರಿಸಲಾಗಿದೆ ಎಂದು ದೆಹಲಿ ಎಎಪಿ ಮುಖ್ಯಸ್ಥ ಮತ್ತು ಪರಿಸರ ಸಚಿವ ರಾಯ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಹಿಂದಿ ಮತ್ತು ಇಂಗ್ಲಿಷ್ ಅಲ್ಲದೆ ಉರ್ದು, ಪಂಜಾಬಿ, ಗುಜರಾತಿ, ತೆಲುಗು, ಬೆಂಗಾಲಿ, ಒಡಿಯಾ, ಕನ್ನಡ, ಮಲಯಾಳಂ ಮತ್ತು ಮರಾಠಿ ಭಾಷೆಗಳಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ.

ಕಳೆದ ವಾರ ದೆಹಲಿಯ ಗೋಡೆ ಮತ್ತು ವಿದ್ಯುತ್ ಕಂಬಗಳ ಮೇಲೆ “ಮೋದಿ ಹಠಾವೋ, ದೇಶ್ ಬಚಾವೋ” (ಮೋದಿ ತೆಗೆದುಹಾಕಿ, ಭಾರತವನ್ನು ಉಳಿಸಿ) ಎಂಬ ಪೋಸ್ಟರ್‌ಗಳು ಕಾಣಿಸಿಕೊಂಡಿತ್ತು. ನಂತರ ಪೊಲೀಸರು ಆರು ಜನರನ್ನು ಬಂಧಿಸಿ 49 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ ರಾಷ್ಟ್ರ ರಾಜಧಾನಿಯಾದ್ಯಂತ “ಕೇಜ್ರಿವಾಲ್ ಹಠಾವೋ, ದೆಹಲಿ ಬಚಾವೋ” (ಕೇಜ್ರಿವಾಲ್ ತೆಗೆದುಹಾಕಿ, ದೆಹಲಿಯನ್ನು ಉಳಿಸಿ) ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಬಿಜೆಪಿ ಪ್ರತೀಕಾರ ತೀರಿಸಿತ್ತು.

ಪೋಸ್ಟರ್ ಅಂಟಿಸಿದ್ದಕ್ಕೆ ಆರು ಮಂದಿಯನ್ನು ಬಂಧಿಸಿದ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಧಾನಿ ಮೋದಿ ನೇತೃತ್ವದ ಆಡಳಿತವನ್ನು ತರಾಟೆಗೆ ತೆಗೆದುಕೊಂಡರು. “ಏನಾಗುತ್ತಿದೆ ಇಲ್ಲಿ? ಕಳೆದ 24 ಗಂಟೆಗಳಲ್ಲಿ ಆರು ಜನರನ್ನು ಬಂಧಿಸಲಾಗಿದೆ. ಒಬ್ಬ ಪ್ರಿಂಟರ್ ಮತ್ತು ಇತರ ಆರು ಬಡವರು ಪೋಸ್ಟರ್ ಹಾಕುತ್ತಿದ್ದರು. ಒಬ್ಬ ಪ್ರಿಂಟರ್ ಮತ್ತು ಇತರ ಆರು ಜನರ ಬಂಧನದ ಹಿಂದೆ ನಮ್ಮ ದೇಶದ ಪ್ರಧಾನಿ ಇದ್ದಾರೆ. ಪ್ರಧಾನಿ ಆರೋಗ್ಯ ಸರಿ ಇದೆಯೇ ಎಂದು ಕೇಳಿದ್ದರು.

ಇದನ್ನೂ ಓದಿ:ದೀದಿ ಓ ದೀದಿ ಎಂದು ಕರೆದ ಮೋದಿಯನ್ನೇಕೆ ಅನರ್ಹ ಮಾಡಿಲ್ಲ?, ಅವರಿಗೇನು ಬೇರೆ ಕಾನೂನು ಇದೆಯೇ?: ಟಿಎಂಸಿ

ಅದೇ ವೇಳೆ ತಮ್ಮ ವಿರುದ್ಧದ ಪೋಸ್ಟರ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಇದರಲ್ಲಿ ನನಗೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ, ಸಾರ್ವಜನಿಕರಿಗೆ ತಮ್ಮ ನಾಯಕನ ಪರವಾಗಿ ಅಥವಾ ವಿರುದ್ಧವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಎಲ್ಲಾ ಹಕ್ಕುಗಳಿವೆ. ನನ್ನ ವಿರುದ್ಧ ಪೋಸ್ಟರ್ ಹಾಕುವವರನ್ನು ಬಂಧಿಸಬಾರದು ಎಂದು ಅವರು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’