AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಾಲ್ಯಾಂಡ್‌ನಲ್ಲಿ ಸಾಧ್ಯವಾದಷ್ಟು ಸ್ಥಾನಗಳಲ್ಲಿ ಸ್ಪರ್ಧೆ, ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ: ಎಎಪಿ

60 ಸದಸ್ಯರ ವಿಧಾನಸಭೆಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ನಾವು ಸಾಧ್ಯವಾದಷ್ಟು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ. ಚುನಾವಣಾ ಪೂರ್ವ ಮೈತ್ರಿ ಇರುವುದಿಲ್ಲ" ಎಂದು ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ

ನಾಗಾಲ್ಯಾಂಡ್‌ನಲ್ಲಿ ಸಾಧ್ಯವಾದಷ್ಟು ಸ್ಥಾನಗಳಲ್ಲಿ ಸ್ಪರ್ಧೆ, ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ: ಎಎಪಿ
ಕೇಜ್ರಿವಾಲ್ ಜತೆ ಆಸು ಕೀಹೋ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 26, 2023 | 1:39 PM

Share

ಕೊಹಿಮಾ: ಮುಂಬರುವ ನಾಗಾಲ್ಯಾಂಡ್ (Nagaland) ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (Aam Aadmi Party) ಸಾಧ್ಯವಾದಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಅದರ ಈಶಾನ್ಯ ಉಸ್ತುವಾರಿ ರಾಜೇಶ್ ಶರ್ಮಾ (Rajesh Sharma) ಹೇಳಿದ್ದಾರೆ. ಮಾಜಿ ಶಾಸಕ ಆಸು ಕೀಹೋ ಅವರನ್ನು ಎಎಪಿಯ ನಾಗಾಲ್ಯಾಂಡ್ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಅವರು ಹೇಳಿದರು. 60 ಸದಸ್ಯರ ವಿಧಾನಸಭೆಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ. ನಾವು ಸಾಧ್ಯವಾದಷ್ಟು ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ.  ಚುನಾವಣಾ ಪೂರ್ವ ಮೈತ್ರಿ ಇರುವುದಿಲ್ಲ” ಎಂದು ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಉತ್ತಮ ಆಡಳಿತ, ಪ್ರಾಮಾಣಿಕ ರಾಜಕೀಯ ಮತ್ತು ಭ್ರಷ್ಟಾಚಾರ ನಿರ್ಮೂಲನೆಯೊಂದಿಗೆ ರಾಜ್ಯದ ಒಟ್ಟಾರೆ ಅಭಿವೃದ್ಧಿಗಾಗಿ ನಾಗಾಲ್ಯಾಂಡ್ ಜನರು ಮತ ಚಲಾಯಿಸುವ ಸಮಯ ಬಂದಿದೆ ಎಂದು ಅವರು ಹೇಳಿದ್ದಾರೆ.

ನಾಗಾಲ್ಯಾಂಡ್‌ನ ರಾಜಕೀಯ ಸನ್ನಿವೇಶದಲ್ಲಿ ಅಗತ್ಯವಾದ ಬದಲಾವಣೆಯನ್ನು ತರಲು ಪಕ್ಷ ಎಲ್ಲ ಹಂತದವರನ್ನು ತಲುಪುತ್ತದೆ ಎಂದು ಶರ್ಮಾ ಭರವಸೆ ವ್ಯಕ್ತಪಡಿಸಿದರು.

ಈಶಾನ್ಯ ರಾಜ್ಯದ ಜನರು ಎಎಪಿ ಸರ್ಕಾರವನ್ನು ಬಯಸುತ್ತಾರೆ.ದೆಹಲಿಯಲ್ಲಿರುವ ನಾಗಾಗಳು, ಓದುತ್ತಿರಲಿ ಅಥವಾ ಕೆಲಸ ಮಾಡುತ್ತಿರಲಿ, ಅಲ್ಲಿನ ಅರವಿಂದ್ ಕೇಜ್ರಿವಾಲ್ ಸರ್ಕಾರದ ಅಡಿಯಲ್ಲಿ ಉತ್ತಮ ಆಡಳಿತ ಮತ್ತು ಭರವಸೆಗಳ ಈಡೇರಿಕೆಗೆ ಸಾಕ್ಷಿಯಾಗಿದ್ದಾರೆ ಎಂದು ಎಂದು ಕೀಹೋ ಹೇಳಿದರು.

ಇದನ್ನೂ ಓದಿ: ಟಿಎಂಸಿ ನಾಯಕ ಸಾಕೇತ್ ಗೋಖಲೆ ಕ್ರೌಡ್ ಫಂಡಿಂಗ್ ಮೂಲಕ ಸಂಗ್ರಹಿಸಿದ ದುಡ್ಡನ್ನು ದುಂದುವೆಚ್ಚ ಮಾಡಿದ್ದಾರೆ: ಇಡಿ

2018ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಿ ವಿಫಲವಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Thu, 26 January 23

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್