AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2022 ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್

Aam Aadmi Party: ದೆಹಲಿಯಲ್ಲಿ ವಿದ್ಯುತ್ ಉಚಿತವಾಗಿರುವಂತೆ ಇಲ್ಲಿ ಯಾಕೆ ಇಲ್ಲ ಎಂದು ಗುಜರಾತಿನ ಜನರು ಯೋಚಿಸುತ್ತಿದ್ದಾರೆ. ಇಲ್ಲಿ 70 ವರ್ಷಗಳಲ್ಲಿ ಇಲ್ಲಿನ ಆಸ್ಪತ್ರೆಯ ಪರಿಸ್ಥಿತಿ ಸುಧಾರಿಸಿಲ್ಲ. ಆದರೆ ಇನ್ನು ಮುಂದೆ ಪರಿಸ್ಥಿತಿ ಬದಲಾಗುತ್ತದೆ" ಎಂದು ಕೇಜ್ರಿವಾಲ್ ಹೇಳಿದ್ದಾರೆ

2022 ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 14, 2021 | 3:20 PM

ದೆಹಲಿ: 2022 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸಲಿದೆ ಎಂದು ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ. “ನಮ್ಮ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ” ಎಂದು ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

“ದೆಹಲಿಯಲ್ಲಿ ವಿದ್ಯುತ್ ಉಚಿತವಾಗಿರುವಂತೆ ಇಲ್ಲಿ ಯಾಕೆ ಇಲ್ಲ ಎಂದು ಗುಜರಾತಿನ ಜನರು ಯೋಚಿಸುತ್ತಿದ್ದಾರೆ. ಇಲ್ಲಿ 70 ವರ್ಷಗಳಲ್ಲಿ ಇಲ್ಲಿನ ಆಸ್ಪತ್ರೆಯ ಪರಿಸ್ಥಿತಿ ಸುಧಾರಿಸಿಲ್ಲ. ಆದರೆ ಇನ್ನು ಮುಂದೆ ಪರಿಸ್ಥಿತಿ ಬದಲಾಗುತ್ತದೆ” ಎಂದು ಅವರು ಹೇಳಿದರು.

ಹಿಂದಿನ ದಿನ, ಗುಜರಾತ್‌ನ ಹಿರಿಯ ಪತ್ರಕರ್ತ ಇಸುದಾನ್ ಗಧ್ವಿ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿಗೆ ಸೇರಿದರು.

ಕೇಜ್ರಿವಾಲ್ ಸೋಮವಾರ ರಾಜ್ಯ ಪ್ರವಾಸಕ್ಕಾಗಿ ಗುಜರಾತ್ ತಲುಪಿದ್ದಾರೆ. “ಹ್ಯಾವಿ ಬ್ಯಾಡ್ಲಾಶೆ ಗುಜರಾತ್. ಕೇಲಿ ಹನ್ ಗುಜರಾತ್ ಆವಿ ರಹಿಯೋ ಚು, ಗುಜರಾತ್ ನಾ ಭಾಯ್-ಬೆಹ್ನೋ ನೇ ಮಾಲಿಶ್ (ರಾಜ್ಯವು ಈಗ ರೂಪಾಂತರಗೊಳ್ಳುತ್ತದೆ, ನಾಳೆ ಗುಜರಾತ್‌ಗೆ ಬರುತ್ತೇನೆ ಮತ್ತು ರಾಜ್ಯದ ಜನರನ್ನು ಭೇಟಿಯಾಗುತ್ತೇನೆ), ”ಎಂದು ಕೇಜ್ರಿವಾಲ್ ಭಾನುವಾರ ತಮ್ಮ ಭೇಟಿಗೆ ಮುನ್ನ ಗುಜರಾತಿಯಲ್ಲಿ ಟ್ವೀಟ್ ಮಾಡಿದ್ದಾರೆ.

2021 ರಲ್ಲಿ ನಡೆದ ಸೂರತ್ ಮುನ್ಸಿಪಲ್ ಕಾರ್ಪೊರೇಷನ್ (ಎಸ್‌ಎಂಸಿ) ಚುನಾವಣೆಯಲ್ಲಿ 120 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದ ನಂತರ ಕೇಜ್ರಿವಾಲ್ ಗುಜರಾತ್ ಪ್ರವಾಸ ಕೈಗೊಂಡಿರುವುದು ಇದು ಎರಡನೇ ಬಾರಿ. ಕೇಜ್ರಿವಾಲ್ ನೇತೃತ್ವದ ಪಕ್ಷವು ಎಲ್ಲಾ ಸ್ಥಳೀಯ ಸಂಸ್ಥೆಗಳಾದ ಪುರಸಭೆ ನಿಗಮಗಳು, ಪುರಸಭೆಗಳು, ಜಿಲ್ಲೆ ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಆಶ್ರಮ ರಸ್ತೆಯಲ್ಲಿರುವ ಪಕ್ಷದ ಹೊಸ ರಾಜ್ಯ ಕಚೇರಿಯನ್ನು ಕೇಜ್ರಿವಾಲ್ ಉದ್ಘಾಟಿಸಲಿದ್ದಾರೆ. ನಂತರ ಸಂಜೆ ದೆಹಲಿಗೆ ತೆರಳಲಿದ್ದಾರೆ ಎಂದು ಪಕ್ಷದ ವಕ್ತಾರ ಟುಲಿ ಬ್ಯಾನರ್ಜಿ ತಿಳಿಸಿದ್ದಾರೆ.

ಪಾಟೀದಾರ್ (ಪಟೇಲ್) ಸಮುದಾಯದ ಎರಡು ಪಂಗಡಗಳಾದ ಕಡ್ವಾ ಪಟೇಲ್ ಮತ್ತು ಲ್ಯುವಾ ಪಟೇಲ್ ಅವರು ರಾಜ್‌ಕೋಟ್‌ನ ಕಾಗ್ವಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಎಪಿಯನ್ನು ಹೊಗಳಿದರ ಬೆನ್ನಲ್ಲೇ ಕೇಜ್ರಿವಾಲ್ ಗುಜರಾತಿಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಪಿಜ್ಜಾ ಹೋಮ್ ಡೆಲಿವರಿ ಮಾಡುವುದಾದರೆ ರೇಷನ್ ಯಾಕೆ ಆಗಲ್ಲ?: ಅರವಿಂದ್ ಕೇಜ್ರಿವಾಲ್

(AAP will contest on all seats in the 2022 Gujarat legislative assembly polls announces Arvind Kejriwal)