AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜಕೀಯ ತೊರೆಯುತ್ತೇವೆ; ಅರವಿಂದ್ ಕೇಜ್ರಿವಾಲ್ ಸವಾಲು

ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಎಂದು ಹೇಳುತ್ತದೆ. ಆದರೆ ಸಣ್ಣ ಪಕ್ಷವಾದ ಆಪ್ ಮತ್ತು ಸಣ್ಣ ಚುನಾವಣೆಗೆ ಅದು ಹೆದರುತ್ತಿದೆ ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

Arvind Kejriwal: ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜಕೀಯ ತೊರೆಯುತ್ತೇವೆ; ಅರವಿಂದ್ ಕೇಜ್ರಿವಾಲ್ ಸವಾಲು
ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Mar 23, 2022 | 4:12 PM

Share

ನವದೆಹಲಿ: ಮುನಿಸಿಪಲ್ ಚುನಾವಣೆ ಮುಂದೂಡಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal), ಈ ಚುನಾವಣೆಗಳನ್ನು ಸರಿಯಾಗಿ ನಡೆಸಿ, ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಾರ್ಟಿ (AAP) ರಾಜಕೀಯದಿಂದ ದೂರ ಸರಿಯಲಿದೆ ಎಂದು ಸವಾಲು ಹಾಕಿದ್ದಾರೆ. ದೆಹಲಿಯಲ್ಲಿ ಮೂರು ನಾಗರಿಕ ಸಂಸ್ಥೆಗಳಾದ ಉತ್ತರ, ಪೂರ್ವ ಮತ್ತು ದಕ್ಷಿಣವನ್ನು ಏಕೀಕರಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಈ ಹೇಳಿಕೆಗಳನ್ನು ನೀಡಿದ್ದಾರೆ.

“ಬಿಜೆಪಿ ಎಂಸಿಡಿ ಚುನಾವಣೆಯನ್ನು ಸಕಾಲಿಕದಲ್ಲಿ ನಡೆಸಿ, ಗೆದ್ದರೆ ನಾವು (ಎಎಪಿ) ರಾಜಕೀಯವನ್ನು ತೊರೆಯುತ್ತೇವೆ” ಎಂದು ಕೇಜ್ರಿವಾಲ್ ಮಾಧ್ಯಮಗಳ ಮುಂದೆ ಸವಾಲು ಹಾಕಿದ್ದಾರೆ. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಎಂದು ಹೇಳುತ್ತದೆ. ಆದರೆ ಸಣ್ಣ ಪಕ್ಷವಾದ ಆಪ್ ಮತ್ತು ಸಣ್ಣ ಚುನಾವಣೆಗೆ ಅದು ಹೆದರುತ್ತಿದೆ ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ಮುಂದೂಡಿರುವುದು ಬ್ರಿಟಿಷರನ್ನು ದೇಶದಿಂದ ಓಡಿಸಿ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪಿಸಲು ತ್ಯಾಗ ಬಲಿದಾನ ಮಾಡಿದ ಹುತಾತ್ಮರಿಗೆ ಮಾಡಿದ ಅವಮಾನ. ಇಂದು ಬಿಜೆಪಿಯವರು ಸೋಲಿನ ಭಯದಿಂದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯನ್ನು ಮುಂದೂಡುತ್ತಿದ್ದಾರೆ. ನಾಳೆ ಅವರು ರಾಜ್ಯಗಳು ಮತ್ತು ದೇಶದ ಚುನಾವಣೆಗಳನ್ನು ಕೂಡ ಮುಂದೂಡುತ್ತಾರೆ ”ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಂಜಾಬ್​ನ ಅಮೃತಸರದಲ್ಲಿ ಇಂದು ಆಪ್ ವಿಜಯಯಾತ್ರೆ: ಭಗವಂತ್ ಮಾನ್, ಅರವಿಂದ್ ಕೇಜ್ರಿವಾಲ್ ಭಾಗಿ

ನಾನು ಸತ್ಯವನ್ನಷ್ಟೇ ಹೇಳುತ್ತೇನೆ, ಸುಳ್ಳು ಕೇಳಬೇಕೆಂದರೆ ಪ್ರಧಾನಿ ಮೋದಿ, ಅರವಿಂದ್ ಕೇಜ್ರಿವಾಲ್ ಭಾಷಣ ಕೇಳಿ: ರಾಹುಲ್ ಗಾಂಧಿ

Published On - 4:11 pm, Wed, 23 March 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ