AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜಕೀಯ ತೊರೆಯುತ್ತೇವೆ; ಅರವಿಂದ್ ಕೇಜ್ರಿವಾಲ್ ಸವಾಲು

ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಎಂದು ಹೇಳುತ್ತದೆ. ಆದರೆ ಸಣ್ಣ ಪಕ್ಷವಾದ ಆಪ್ ಮತ್ತು ಸಣ್ಣ ಚುನಾವಣೆಗೆ ಅದು ಹೆದರುತ್ತಿದೆ ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

Arvind Kejriwal: ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜಕೀಯ ತೊರೆಯುತ್ತೇವೆ; ಅರವಿಂದ್ ಕೇಜ್ರಿವಾಲ್ ಸವಾಲು
ಅರವಿಂದ್ ಕೇಜ್ರಿವಾಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Mar 23, 2022 | 4:12 PM

ನವದೆಹಲಿ: ಮುನಿಸಿಪಲ್ ಚುನಾವಣೆ ಮುಂದೂಡಿಕೆ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal), ಈ ಚುನಾವಣೆಗಳನ್ನು ಸರಿಯಾಗಿ ನಡೆಸಿ, ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಾರ್ಟಿ (AAP) ರಾಜಕೀಯದಿಂದ ದೂರ ಸರಿಯಲಿದೆ ಎಂದು ಸವಾಲು ಹಾಕಿದ್ದಾರೆ. ದೆಹಲಿಯಲ್ಲಿ ಮೂರು ನಾಗರಿಕ ಸಂಸ್ಥೆಗಳಾದ ಉತ್ತರ, ಪೂರ್ವ ಮತ್ತು ದಕ್ಷಿಣವನ್ನು ಏಕೀಕರಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಈ ಹೇಳಿಕೆಗಳನ್ನು ನೀಡಿದ್ದಾರೆ.

“ಬಿಜೆಪಿ ಎಂಸಿಡಿ ಚುನಾವಣೆಯನ್ನು ಸಕಾಲಿಕದಲ್ಲಿ ನಡೆಸಿ, ಗೆದ್ದರೆ ನಾವು (ಎಎಪಿ) ರಾಜಕೀಯವನ್ನು ತೊರೆಯುತ್ತೇವೆ” ಎಂದು ಕೇಜ್ರಿವಾಲ್ ಮಾಧ್ಯಮಗಳ ಮುಂದೆ ಸವಾಲು ಹಾಕಿದ್ದಾರೆ. ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಎಂದು ಹೇಳುತ್ತದೆ. ಆದರೆ ಸಣ್ಣ ಪಕ್ಷವಾದ ಆಪ್ ಮತ್ತು ಸಣ್ಣ ಚುನಾವಣೆಗೆ ಅದು ಹೆದರುತ್ತಿದೆ ಎಂದು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯನ್ನು ಬಿಜೆಪಿ ಮುಂದೂಡಿರುವುದು ಬ್ರಿಟಿಷರನ್ನು ದೇಶದಿಂದ ಓಡಿಸಿ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪಿಸಲು ತ್ಯಾಗ ಬಲಿದಾನ ಮಾಡಿದ ಹುತಾತ್ಮರಿಗೆ ಮಾಡಿದ ಅವಮಾನ. ಇಂದು ಬಿಜೆಪಿಯವರು ಸೋಲಿನ ಭಯದಿಂದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯನ್ನು ಮುಂದೂಡುತ್ತಿದ್ದಾರೆ. ನಾಳೆ ಅವರು ರಾಜ್ಯಗಳು ಮತ್ತು ದೇಶದ ಚುನಾವಣೆಗಳನ್ನು ಕೂಡ ಮುಂದೂಡುತ್ತಾರೆ ”ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಂಜಾಬ್​ನ ಅಮೃತಸರದಲ್ಲಿ ಇಂದು ಆಪ್ ವಿಜಯಯಾತ್ರೆ: ಭಗವಂತ್ ಮಾನ್, ಅರವಿಂದ್ ಕೇಜ್ರಿವಾಲ್ ಭಾಗಿ

ನಾನು ಸತ್ಯವನ್ನಷ್ಟೇ ಹೇಳುತ್ತೇನೆ, ಸುಳ್ಳು ಕೇಳಬೇಕೆಂದರೆ ಪ್ರಧಾನಿ ಮೋದಿ, ಅರವಿಂದ್ ಕೇಜ್ರಿವಾಲ್ ಭಾಷಣ ಕೇಳಿ: ರಾಹುಲ್ ಗಾಂಧಿ

Published On - 4:11 pm, Wed, 23 March 22

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್