AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​

Arvind Kejriwal: ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ.

‘ಉತ್ತರಾಖಂಡ ರಾಜ್ಯದ ಜನರಿಗಾಗಿ ನಾಳೆ ಬಹುದೊಡ್ಡ ಘೋಷಣೆ ಮಾಡಲಿದ್ದೇನೆ’ -ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಟ್ವೀಟ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on: Aug 16, 2021 | 9:55 PM

Share

ದೆಹಲಿ: ಆಪ್​ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ (Arvind Kejriwal) ಇಂದು ಕುತೂಹಲ ಹುಟ್ಟಿಸುವ ಟ್ವೀಟ್​ವೊಂದನ್ನು ಮಾಡಿದ್ದಾರೆ. ನಾವು ಉತ್ತರಾಖಂಡ (Uttarakhand) ರಾಜ್ಯದ ಜನರಿಗಾಗಿ ಒಂದು ಬಹುದೊಡ್ಡ ಘೋಷಣೆಯನ್ನು ಮಾಡಲಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್​ ಇಂದು ಹೇಳಿದ್ದಾರೆ. ನಮ್ಮ ಪಕ್ಷದಿಂದ ಆಗಸ್ಟ್​ 17ರಂದು ಈ ಘೋಷಣೆ ಮಾಡಲಿದ್ದೇವೆ. ಹಾಗೇ ಅಂದು ನಾನೂ ಕೂಡ ಅಲ್ಲಿಗೆ ಭೇಟಿ ನೀಡುತ್ತೇನೆ ಎಂದೂ ತಿಳಿಸಿದ್ದಾರೆ.

ನಾನು ನಾಳೆ (ಆಗಸ್ಟ್​ 17) ಉತ್ತರಾಖಂಡಕ್ಕೆ ತೆರಳುತ್ತಿದ್ದೇನೆ. ನಮ್ಮ ಆಮ್​ ಆದ್ಮಿ ಪಕ್ಷದಿಂದ ಬಹುಮುಖ್ಯವಾದ ಘೋಷಣೆಯೊಂದನ್ನು ಆ ರಾಜ್ಯದ ಜನರಿಗಾಗಿ ಮಾಡಲಿದ್ದೇವೆ. ನಾವು ಮಾಡುವ ಆ ಘೋಷಣೆ ಉತ್ತರಾಖಂಡ್​ನ ಅಭಿವೃದ್ಧಿ, ಬೆಳವಣಿಗೆಯ ಮೈಲಿಗಲ್ಲಿಗೆ ಸಾಕ್ಷಿಯಾಗಲಿದೆ ಎಂದು ಅರವಿಂದ್ ಕೇಜ್ರಿವಾಲ್​ ಹೇಳಿದ್ದಾರೆ.

ಉತ್ತರಾಖಂಡ್​​ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅಲ್ಲಿ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಆಮ್​ ಆದ್ಮಿ ಪಕ್ಷ ಈಗಿನಿಂದಲೇ ಶುರು ಮಾಡಿಕೊಂಡಿದೆ. ನಾವು ಉತ್ತರಾಖಂಡ್​​ನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಮತ್ತು ಇಲ್ಲಿನ ಅಭಿವೃದ್ಧಿ ಸಂಬಂಧಿತ ಕುಂದು-ಕೊರತೆಗಳ ಬಗ್ಗೆ ನಮ್ಮ ಚುನಾವಣಾ ಪ್ರಚಾರದಲ್ಲಿ ಎತ್ತಿ ಹಿಡಿಯುತ್ತೇವೆ ಎಂದು ಆಮ್​ ಆದ್ಮಿ ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ತುರ್ತುಸಭೆ: ಭಯೋತ್ಪಾದನೆ ಬಗ್ಗೆ ಆತಂಕ

ಶಾಸಕರು, ಸಂಸದರ ವಿರುದ್ಧದ ಎಷ್ಟು ಪ್ರಕರಣಗಳನ್ನು ಹಿಂಪಡೆದಿದ್ದೀರಿ? ಹೈಕೋರ್ಟ್ ಪ್ರಶ್ನೆ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!