AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ: ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದ ಅಜಯ್ ಕೊಥಿಯಾಲ್ ಬಿಜೆಪಿಗೆ ಸೇರ್ಪಡೆ

ಕಳೆದ ವಾರ ಕೊಥಿಯಾಲ್ ಆಮ್ ಆದ್ಮಿ ಪಕ್ಷ ತೊರೆದಿದ್ದರು. ಎಎಪಿ ತೊರೆಯುವುದಾಗಿ ಟ್ವಿಟರ್ ನಲ್ಲಿ ಘೋಷಿಸಿದ ಕೊಥಿಯಾಲ್ ಅಲ್ಲೇ ರಾಜೀನಾಮೆ ಪತ್ರವನ್ನೂ ಟ್ವೀಟ್ ಮಾಡಿದ್ದರು

ಉತ್ತರಾಖಂಡ: ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದ ಅಜಯ್ ಕೊಥಿಯಾಲ್ ಬಿಜೆಪಿಗೆ ಸೇರ್ಪಡೆ
ಅಜಯ್ ಕೊಥಿಯಾಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:May 24, 2022 | 6:36 PM

Share

ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (AAP) ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ, ನಿವೃತ್ತ ಕರ್ನಲ್ ಅಜಯ್ ಕೊಥಿಯಾಲ್ (Ajay Kothiyal) ಅವರು ಡೆಹ್ರಾಡೂನ್‌ನಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಸಮ್ಮುಖದಲ್ಲಿ ಬಿಜೆಪಿ (BJP) ಸೇರಿದ್ದಾರೆ. ಕಳೆದ ವಾರ ಕೊಥಿಯಾಲ್ ಆಮ್ ಆದ್ಮಿ ಪಕ್ಷ ತೊರೆದಿದ್ದರು. ಎಎಪಿ ತೊರೆಯುವುದಾಗಿ ಟ್ವಿಟರ್ ನಲ್ಲಿ ಘೋಷಿಸಿದ ಕೊಥಿಯಾಲ್ ಅಲ್ಲೇ ರಾಜೀನಾಮೆ ಪತ್ರವನ್ನೂ ಟ್ವೀಟ್ ಮಾಡಿದ್ದರು. ನಾನು ಏಪ್ರಿಲ್ 19, 2021 ರಿಂದ ಮೇ 18, 2022 ರವರೆಗೆ ಆಮ್ ಆದ್ಮಿ ಪಕ್ಷದ ಸದಸ್ಯನಾಗಿದ್ದೇನೆ. ಮಾಜಿ ಸೈನಿಕರು, ಮಾಜಿ ಅರೆ ಮಿಲಿಟರಿ ಸಿಬ್ಬಂದಿ, ಹಿರಿಯರು, ಮಹಿಳೆಯರು, ಯುವಕರು ಮತ್ತು ಬುದ್ಧಿಜೀವಿಗಳ ಭಾವನೆಗಳನ್ನು ಇಟ್ಟುಕೊಂಡು ನಾನು ನಿಮಗೆ ಮೇ 18 ರಂದು ನನ್ನ ರಾಜೀನಾಮೆ ಕಳುಹಿಸುತ್ತಿದ್ದೇನೆ ಎಂದು ಕೊಥಿಯಾಲ್ ಟ್ವೀಟ್ ಮಾಡಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಆಡಳಿತಾರೂಢ ಬಿಜೆಪಿ ಉತ್ತರಾಖಂಡದಲ್ಲಿ 47 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಮರಳಿತು. ಬಿಜೆಪಿ 70 ಸ್ಥಾನಗಳ ಅಸೆಂಬ್ಲಿಯಲ್ಲಿ ಅಗತ್ಯವಿರುವ ಬಹುಮತಕ್ಕಿಂತ 11 ಹೆಚ್ಚು ಸೀಟುಗಳನ್ನು ಗಳಿಸಿತ್ತು. ಎಎಪಿಗೆ ಯಾವುದೇ ಸೀಟು ಲಭಿಸಿಲ್ಲ. ಮತ್ತೊಮ್ಮೆ ಅಧಿಕಾರಕ್ಕೇರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ 19 ಸ್ಥಾನಗಳನ್ನು ಗೆದ್ದಿದ್ದು, ಬಹುಜನ ಸಮಾಜ ಪಕ್ಷ (ಬಿಎಸ್​​ಪಿ) ಎರಡು ಕ್ಷೇತ್ರಗಳನ್ನು ಗೆದ್ದಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:34 pm, Tue, 24 May 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ