AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digital India: ಆರೋಗ್ಯ ಸೇತು, ಕೊವಿನ್ ಆ್ಯಪ್​ಗಳು ಡಿಜಿಟಲ್​ ಇಂಡಿಯಾದ ಹೆಗ್ಗಳಿಕೆ..ಜಗತ್ತಿನ ಗಮನ ಸೆಳೆದಿವೆ: ಪ್ರಧಾನಿ ಮೋದಿ

ವಿಶ್ವಸಂಸ್ಥೆಯ ಇಂಟರ್​ನ್ಯಾಷನಲ್ ಟೆಲಿಕಮ್ಯೂನಿಕೇಶನ್​ ಯೂನಿಯನ್​, ಸೈಬರ್​ ಸುರಕ್ಷತೆಯಲ್ಲಿ ಮುಂದುವರಿದಿರುವ ವಿಶ್ವದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತ 10ನೇ ಸ್ಥಾನದಲ್ಲಿದೆ.

Digital India: ಆರೋಗ್ಯ ಸೇತು, ಕೊವಿನ್ ಆ್ಯಪ್​ಗಳು ಡಿಜಿಟಲ್​ ಇಂಡಿಯಾದ ಹೆಗ್ಗಳಿಕೆ..ಜಗತ್ತಿನ ಗಮನ ಸೆಳೆದಿವೆ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Jul 01, 2021 | 3:25 PM

Share

ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಡಿಜಿಟಲ್​ ಇಂಡಿಯಾ ಮಿಷನ್​​ನಿಂದ ಒನ್​ ನೇಶನ್​, ಒನ್​ ರೇಶನ್​ ಕಾರ್ಡ್​​ನಂತಹ ಸ್ಕೀಮ್​​ಗಳನ್ನು ಹೊರತರಲು ಸಹಾಯವಾಗುತ್ತಿದೆ. ಕೊವಿಡ್​ 19 ಸಂಕಷ್ಟದ ಸಂದರ್ಭದಲ್ಲಿ ಲಕ್ಷಾಂತರ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಇದು ಸಹಕಾರಿಯಾಯಿತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಡಿಜಿಟಲ್​ ಇಂಡಿಯಾ ಮಿಷನ್​ ಆರುವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಅದರ ಫಲಾನುಭವಿಗಳೊಂದಿಗೆ ಇಂದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಇವತ್ತು ಡಿಜಿಟಲ್​ ಇಂಡಿಯಾದಿಂದಾಗಿ ಕೋಟ್ಯಂತರ ಜನರಿಗೆ ಹಣ ವರ್ಗಾವಣೆ ಮಾಡಲು ಸುಲಭವಾಗಿದೆ. ದೇಶದಲ್ಲಿ ಒಂದು ದಿನಕ್ಕೆ ಯುಪಿಐ ಮೂಲಕ ಏನಿಲ್ಲವೆಂದರೂ 5 ಲಕ್ಷ ರೂಪಾಯಿ ಹಣ ವರ್ಗಾವಣೆ ಆಗುತ್ತದೆ ಎಂದು ಹೇಳಿದರು.

ಹಾಗೇ ಡಿಜಿಟಲ್​ ಇಂಡಿಯಾ ಮಿಷನ್​ನ ಪ್ರಮುಖ ಯೋಜನೆಯಾದ ಒನ್​ ನೇಶನ್​, ಒನ್​ ರೇಶನ್​ ವ್ಯವಸ್ಥೆಯಿಂದ ವಲಸಿಗರಿಗೆ ತುಂಬ ಸಹಾಯವಾಗುತ್ತದೆ ಎಂದು ಹೇಳಿದ ಮೋದಿಯವರು, ಕನಿಷ್ಠ ಸರ್ಕಾರ, ಗರಿಷ್ಠ ಆಡಳಿತಕ್ಕೆ ಡಿಜಿಟಲ್​ ಮೀಡಿಯಾ ಅತ್ಯುತ್ತಮ ಉದಾಹರಣೆಯಾಗಿದ್ದು, ಜನರ ಕೈಯನ್ನು ಇದು ಬಲಪಡಿಸಿದೆ. ಈ ಯೋಜನೆಯಡಿಯಲ್ಲೇ ಕೊವಿಡ್​ 19 ಟ್ರೇಸಿಂಗ್ ಆ್ಯಪ್​ ಆದ ಆರೋಗ್ಯ ಸೇತು ಆ್ಯಪ್​ ಅಭಿವೃದ್ಧಿಪಡಿಸಲಾಯಿತು ಎಂದು ತಿಳಿಸಿದರು. ಹಾಗೇ, ನಮ್ಮಲ್ಲಿ ಕೊವಿಡ್​ 19 ಲಸಿಕೆ ನೋಂದಣಿಗಾಗಿ ಅಭಿವೃದ್ಧಿಪಡಿಸಲಾದ ಕೊವಿನ್ ಆ್ಯಪ್​ ಜಗತ್ತಿನ ಹಲವು ದೇಶಗಳ ಗಮನ ಸೆಳೆದಿದೆ. ತಮ್ಮಲ್ಲೂ ಈ ವ್ಯವಸ್ಥೆ ಅಳವಡಿಸಿಕೊಳ್ಳಲು ಅವರು ಮುಂದಾಗಿದ್ದಾರೆ ಎಂದು ಹೇಳಿದರು.

ಭಾರತದಲ್ಲಿ ಸೈಬರ್ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ. ಇತ್ತೀಚೆಗೆ ವಿಶ್ವಸಂಸ್ಥೆಯ ಇಂಟರ್​ನ್ಯಾಷನಲ್ ಟೆಲಿಕಮ್ಯೂನಿಕೇಶನ್​ ಯೂನಿಯನ್​, ಸೈಬರ್​ ಸುರಕ್ಷತೆಯಲ್ಲಿ ಮುಂದುವರಿದಿರುವ ವಿಶ್ವದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಾರತ 10ನೇ ಸ್ಥಾನದಲ್ಲಿದೆ ಎಂದು ನರೇಂದ್ರ ಮೋದಿ ತಿಳಿಸಿದರು. ಅಲ್ಲದೆ ಇಂದು ಕೋಟ್ಯಂತರ ಜನರು ಡಿಜಿಟಲ್​ ವ್ಯವಸ್ಥೆಯ ಅನುಕೂಲ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು ಆನ್​ಲೈನ್​ ಮೂಲಕ ಶಿಕ್ಷಣ ಪಡೆಯುವಂತಾಗಿದೆ. ವೈದ್ಯಕೀಯ ಔಷಧಗಳನ್ನೂ ಆನ್​ಲೈನ್​ನಲ್ಲೇ ಒದಗಿಸುವಷ್ಟು ಮುಂದುವರಿದಿದ್ದೇವೆ. ಇದಕ್ಕಿಂತ ಸಂತೋಷ ಇನ್ನೇನು ಬೇಕು ಎಂದು ಹೇಳಿದರು.

ಸದ್ಯ ಒನ್​ ನೇಶನ್​ ಒನ್​ ರೇಶನ್​ ದೇಶದಲ್ಲಿ ಇನ್ನೂ ಸಂಪೂರ್ಣವಾಗಿ ಜಾರಿಯಾಗಿಲ್ಲ. ಆದರೆ ಜುಲೈ 31ರೊಳಗೆ ಎಲ್ಲ ರಾಜ್ಯಸರ್ಕಾರಗಳೂ ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಆ ಮೂಲಕ ಅಸಂಘಟಿತ ವಲಯಗಳ ವಲಸೆ ಕಾರ್ಮಿಕರ ಹಿತರಕ್ಷಣೆ ಮಾಡಬೇಕು ಎಂದು ನಿನ್ನೆ (ಜೂನ್​30) ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ: ಗಂಭೀರ ಅಪಘಾತವಾದರೂ ಜಗ್ಗೇಶ್ ಮಗ ಯತಿರಾಜ್ ಪಾರಾಗಿದ್ದು ಹೇಗೆ? ಪ್ರತಿಕ್ರಿಯಿಸಿದ ನವರಸ ನಾಯಕ

Aarogya Setu developed Under digital India scheam playing key role in the battle of Covid 19 said PM Modi

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..