AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ

ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಆರೋಪಿಗಳು ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ನೃತ್ಯಗಾರ್ತಿಯರನ್ನು ಹಣೆಗೆ ಬಂದೂಕಿಟ್ಟು ಅಪಹರಿಸಿ 10 ಕಿ.ಮೀ ದೂರಕ್ಕೆ ಕರೆದೊಯ್ದಿದ್ದಾರೆ.

ಬರ್ತ್​ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ನೃತ್ಯಗಾರ್ತಿಯರ ಮೇಲೆ ಸಾಮೂಹಿಕ ಅತ್ಯಾಚಾರ
ಪೊಲೀಸ್ Image Credit source: Amarujala.com
ನಯನಾ ರಾಜೀವ್
|

Updated on: Sep 11, 2024 | 9:12 AM

Share

ಬರ್ತ್​ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ. ಆರೋಪಿಗಳು ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ನೃತ್ಯಗಾರ್ತಿಯರನ್ನು ಹಣೆಗೆ ಬಂದೂಕಿಟ್ಟು ಅಪಹರಿಸಿ 10 ಕಿ.ಮೀ ದೂರಕ್ಕೆ ಕರೆದೊಯ್ದಿದ್ದಾರೆ.

ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದಿದ್ದಾರೆ, ಬರ್ತ್​ ಡೇ ಪಾರ್ಟಿಯಲ್ಲಿ ನೃತ್ಯ ಮಾಡುವಂತೆ ಆ ಇಬ್ಬರು ಯುವತಿಯರ ಬಳಿ ಕೇಳಿದ್ದಾರೆ. ಆದರೆ ಅವರು ನಿರಾಕರಿಸಿದ್ದಕ್ಕೆ ಕುಡಿದ ಮತ್ತಿನಲ್ಲಿ ಇಬ್ಬರ ಮೇಲೆ 8 ಮಂದಿ ಅತ್ಯಾಚಾರವೆಸಗಿದ್ದಾರೆ.

ಇದೀಗ ಪೊಲೀಸರು ಅಪರಾಧಕ್ಕೆ ಬಳಸಿದ್ದ ಎರಡು ಎಸ್‌ಯುವಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲಾ ಎಂಟು ಆರೋಪಿಗಳ ವಯಸ್ಸು 30 ವರ್ಷಕ್ಕಿಂತ ಕಡಿಮೆ. ಆರೋಪಿಗಳನ್ನು ಖುಷಿನಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಯುವತಿಯರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು ವರದಿಗಾಗಿ ಕಾಯಲಾಗುತ್ತಿದೆ.

ಮತ್ತಷ್ಟು ಓದಿ:

ಸೆಪ್ಟೆಂಬರ್ 8ರ ರಾತ್ರಿ ಘಟನೆ ಕುರಿತು ಪೊಲೀಸರಿಗೆ ದೂರು ಬಂದಿತ್ತು.ರೋಪಿಗಳನ್ನು ನಾಗೇಂದ್ರ ಯಾದವ್, ಅಸನ್ ಸಿಂಗ್, ಕ್ರಿಶ್ ತಿವಾರಿ, ಅರ್ಥಕ್ ಸಿಂಗ್, ಅಜಿತ್ ಸಿಂಗ್ ಮತ್ತು ವಿವೇಕ್ ಸೇಠ್ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಆರೋಪಿಗಳು – ನಿಸಾರ್ ಅನ್ಸಾರಿ ಮತ್ತು ಆದಿತ್ಯ ಸಾಹ್ನಿ, ಸೆಪ್ಟೆಂಬರ್ 10 ರಂದು ಪೊಲೀಸರು ನಡೆಸಿದ ಎನ್​ಕೌಂಟರ್​ನಲ್ಲಿ ಸಿಕ್ಕಿಬಿದ್ದಿದ್ದರು.

ಇಬ್ಬರ ಕಾಲಿಗೆ ಗುಂಡು ತಗುಲಿದ್ದು, ಪ್ರಥಮ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ವಿಚಾರಣೆ ವೇಳೆ ಆರೋಪಿಗಳು ತಮ್ಮ ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ತಡರಾತ್ರಿಯಾಗಿದ್ದರಿಂದ ಯುವತಿಯರು ನೃತ್ಯ ಮಾಡಲು ನಿರಾಕರಿಸಿದ್ದರು. ಬಂದೂಕು ತೋರಿಸಿ ಅಪಹರಿಸಿ ಅಪಹರಿಸಿದ್ದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ