AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಾಕೋಟ್ ವಾಯುದಾಳಿಯ ಹೀರೊ ಅಭಿನಂದನ್​ ವರ್ಧಮಾನ್ ಇನ್ನು ಗ್ರೂಪ್​ ಕ್ಯಾಪ್ಟನ್

ರಷ್ಯಾ ನಿರ್ಮಿತ ಮಿಗ್-21 ಯುದ್ಧವಿಮಾನದಿಂದ ಅಮೆರಿಕ ನಿರ್ಮಿತ ಎಫ್​-16 ಯುದ್ಧವಿಮಾನ ಹೊಡೆದುರುಳಿಸಿದ ವಿಶ್ವದ ಮೊದಲ ಮೊದಲ ಪೈಲಟ್ ಎಂಬ ಶ್ರೇಯಕ್ಕೂ ಅಭಿನಂದನ್ ಪಾತ್ರರಾಗಿದ್ದಾರೆ.

ಬಾಲಾಕೋಟ್ ವಾಯುದಾಳಿಯ ಹೀರೊ ಅಭಿನಂದನ್​ ವರ್ಧಮಾನ್ ಇನ್ನು ಗ್ರೂಪ್​ ಕ್ಯಾಪ್ಟನ್
ಭಾರತೀಯ ವಾಯುಪಡೆಯ ಗ್ರೂಪ್​ ಕ್ಯಾಪ್ಟನ್ ಆಗಿ ಬಡ್ತಿ ಪಡೆದ ಅಭಿನಂದನ್ ವರ್ಧಮಾನ್
TV9 Web
| Edited By: |

Updated on: Nov 03, 2021 | 5:50 PM

Share

ದೆಹಲಿ: ಬಾಲಾಕೋಟ್​ ವಾಯುದಾಳಿಯ ಹೀರೊ ಅಭಿನಂದನ್ ವರ್ಧಮಾನ್ ಅವರಿಗೆ ವಾಯುಪಡೆಯು ಗ್ರೂಪ್​ ಕ್ಯಾಪ್ಟನ್ ಹುದ್ದೆಗೆ ಬಡ್ತಿ ನೀಡಿದೆ. ರಷ್ಯಾ ನಿರ್ಮಿತ ಮಿಗ್-21 ಯುದ್ಧವಿಮಾನದಿಂದ ಅಮೆರಿಕ ನಿರ್ಮಿತ ಎಫ್​-16 ಯುದ್ಧವಿಮಾನ ಹೊಡೆದುರುಳಿಸಿದ ವಿಶ್ವದ ಮೊದಲ ಮೊದಲ ಪೈಲಟ್ ಎಂಬ ಶ್ರೇಯಕ್ಕೂ ಅಭಿನಂದನ್ ಪಾತ್ರರಾಗಿದ್ದಾರೆ. 2019ರ ಫೆಬ್ರುವರಿ ತಿಂಗಳಲ್ಲಿ ನಡೆದಿದ್ದ ವಾಯುದಾಳಿಯಲ್ಲಿ ನಿರ್ವಹಿಸಿದ ಪಾತ್ರಕ್ಕಾಗಿ ಅಭಿನಂದನ್ ಅವರಿಗೆ ಈ ಹಿಂದೆ ಶೌರ್ಯಚಕ್ರ ನೀಡಿ ಗೌರವಿಸಲಾಗಿತ್ತು.

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಅಭಿನಂದನ್ ಪಾಕಿಸ್ತಾನದ ಎಫ್​-16 ಯುದ್ಧ ವಿಮಾನ ಹೊಡೆದುರುಳಿಸಿದ್ದರು. ಆದರೆ ಅವರಿದ್ದ ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಜನರಿಗೆ ಸಿಕ್ಕಿಬಿದ್ದಿದ್ದರು. ನಂತರ ಪಾಕ್ ಯೋಧರು ಅವರನ್ನು ಬೇರೆಡೆಗೆ ಕರೆದೊಯ್ದಿದ್ದರು.

ಬಂಧನದ ಅವಧಿಯಲ್ಲಿಯೂ ಅವರು ಆತ್ಮಗೌರವ ಕಾಪಾಡಿಕೊಂಡ ರೀತಿ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ತಲೆ ಎತ್ತಿಯೇ ಗರ್ವದಿಂದ ಎಲ್ಲೆಡೆ ನಡೆಯುತ್ತಿದ್ದ ವೈಖರಿಯನ್ನೂ ಜನರು ಮೆಚ್ಚಿಕೊಂಡಿದ್ದರು.

ಅಭಿನಂದನ್ ಅವರಿದ್ದ ವಾಯುಪಡೆಯ 51ನೇ ಸ್ಕ್ವಾರ್ಡನ್​ಗೂ ಭಾರತ ಸರ್ಕಾರದಿಂದ ವಿಶೇಷ ಮಾನ್ಯತೆ ಸಿಕ್ಕಿತ್ತು. ಪಾಕಿಸ್ತಾನ ವಾಯುಪಡೆಯು ಫೆಬ್ರುವರಿ 27, 2019ರಂದು ಭಾರತದ ಮೇಲೆ ದಾಳಿ ನಡೆಸಲು ಮಾಡಿದ ಪ್ರಯತ್ನವನ್ನು ಹಿಮ್ಮೆಟ್ಟಿಸುವಲ್ಲಿ ಈ ತುಕಡಿಯ ಕಾರ್ಯಕ್ಷಮತೆ ಪರಿಣಾಮಕಾರಿಯಾಗಿತ್ತು. ಕೇಂದ್ರೀಯ ಮೀಸಲು ಪೊಲೀಸ್ ಸಿಬ್ಬಂದಿ ಇದ್ದ ಬಸ್ ಒಂದರ ಮೇಲೆ ಉಗ್ರರು ನಡೆಸಿದ ಬಾಂಬ್​ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತವು ಬಾಲಾಕೋಟ್​ನಲ್ಲಿದ್ದ ಉಗ್ರಗಾಮಿ ಶಿಬಿರಗಳ ಮೇಲೆ ದಾಳಿ ನಡೆಸಿತ್ತು.

ಇದನ್ನೂ ಓದಿ: Balakot Lessons: ಅಂದು ಪಾಕ್ ಯುದ್ಧವಿಮಾನಗಳು ಭಾರತದತ್ತ ಬಾರದಿದ್ದರೆ ಈಗ ಲಡಾಖ್ ಸಂಘರ್ಷ ಇಷ್ಟು ಬೇಗ ಕೊನೆಯಾಗುತ್ತಿತ್ತೇ? ಇದನ್ನೂ ಓದಿ: ಬಾಲಾಕೋಟ್‌ನಲ್ಲಿ ಭಾರತ ಸೇನಾ ದಾಳಿ ನಡೆಸಿದ್ದು ನಿಜ; ಸರ್ಜಿಕಲ್ ಸ್ಟ್ರೈಕ್‌ ಬಗ್ಗೆ ಅಧಿಕೃತವಾಗಿ ಒಪ್ಪಿಕೊಂಡ ಪಾಕ್‌

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’