AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡಾಯ ಸಂಸದರ ವಿರುದ್ಧ ಕಾನೂನು ಸಮರಕ್ಕಿಳಿದ ಟಿಎಂಸಿ; 20 ರೆಬೆಲ್​ಗಳ ಅನರ್ಹತೆಗೆ ಸ್ಪೀಕರ್​ಗೆ ಮನವಿ

ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಹೈಡ್ರಾಮಾ ಮುಂದುವರಿದಿದ್ದು, ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಬಂಡಾಯ ಸಂಸದರ ವಿರುದ್ಧ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ತೀವ್ರ ವಾಗ್ದಾಳಿ ನಡೆಸಿದೆ. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿರುವ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಪಕ್ಷಾಂತರ ಮಾಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಒತ್ತಾಯಿಸಿದ್ದಾರೆ. ಈ ಮೂಲಕ ಬಂಡಾಯ ಸಂಸದರ ವಿರುದ್ಧ ಕಾನೂನು ಕ್ರಮಕ್ಕೆ ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ.

ಬಂಡಾಯ ಸಂಸದರ ವಿರುದ್ಧ ಕಾನೂನು ಸಮರಕ್ಕಿಳಿದ ಟಿಎಂಸಿ; 20 ರೆಬೆಲ್​ಗಳ ಅನರ್ಹತೆಗೆ ಸ್ಪೀಕರ್​ಗೆ ಮನವಿ
Abhishek Banerjee Met SpeakerImage Credit source: ANI
ಸುಷ್ಮಾ ಚಕ್ರೆ
|

Updated on: Jun 19, 2026 | 8:18 PM

Share

ನವದೆಹಲಿ, ಜೂನ್ 19: ಪಶ್ಚಿಮ ಬಂಗಾಳದ ಸಾರ್ವತ್ರಿಕ ಚುನಾವಣೆಗಳ ಬೆನ್ನಲ್ಲೇ ಟಿಎಂಸಿ (TMC) ಪಕ್ಷದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಕ್ಷದ ನಿಲುವಿಗೆ ವಿರುದ್ಧವಾಗಿ ಬಂಡಾಯ ಎದ್ದು, ಬೇರೆ ಪಕ್ಷದೊಂದಿಗೆ ವಿಲೀನ ಪ್ರಕ್ರಿಯೆಗೆ ಮುಂದಾಗಿರುವ 20 ಸಂಸದರ ವಿರುದ್ಧ ಟಿಎಂಸಿ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ನವದೆಹಲಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿರುವ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಆ ಎಲ್ಲಾ 20 ಬಂಡಾಯ ಸಂಸದರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಲಿಖಿತ ಮನವಿ ಸಲ್ಲಿಸಿದ್ದಾರೆ.

ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಟಿಎಂಸಿ ಪಕ್ಷದ ಸುಮಾರು 20 ಸಂಸದರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಬಣ ರಚಿಸಿಕೊಂಡಿದ್ದರು. ಈ ಬಣವು ಮತ್ತೊಂದು ಪ್ರಮುಖ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ಮಾತುಕತೆ ನಡೆಸಿತ್ತು. ಸಂಸತ್ತಿನಲ್ಲಿ ಪಕ್ಷಾಂತರ ನಿರೋಧಕ ಕಾಯ್ದೆಯಿಂದ ಬಚಾವಾಗಲು 2/3ರಷ್ಟು ಬಹುಮತದ ಅಗತ್ಯವಿದ್ದು, ಈ ಸಂಸದರು ಆ ತಾಂತ್ರಿಕತೆಯನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದ ಟಿಎಂಸಿ ಉನ್ನತ ಮಟ್ಟದ ನಿಯೋಗವು ಇಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಯಿತು. ಪಕ್ಷದ 20 ಬಂಡಾಯ ಸಂಸದರು ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷದೊಂದಿಗೆ ವಿಲೀನಗೊಂಡಿದ್ದೇವೆ ಎಂದು ಮಾಡಿರುವ ದಾವೆಯನ್ನು ನಿಯೋಗವು ಕಟ್ಟುನಿಟ್ಟಾಗಿ ವಿರೋಧಿಸಿತು. ಈ ನಿಯೋಗದಲ್ಲಿ ಟಿಎಂಸಿ ಹಿರಿಯ ನಾಯಕರಾದ ಕಲ್ಯಾಣ್ ಬ್ಯಾನರ್ಜಿ, ಡೆರೆಕ್ ಒಬ್ರಿಯಾನ್, ಮಹುವಾ ಮೊಯಿತ್ರಾ ಮತ್ತು ಸೌಗತಾ ರಾಯ್ ಇದ್ದರು.

ಇದನ್ನೂ ಓದಿ: ಎನ್‌ಸಿಪಿಐಗೆ ಹೊಸ ಅಧ್ಯಕ್ಷರ ನೇಮಕ: ಟಿಎಂಸಿ ಬಂಡಾಯ ಸಂಸದರ ಅರ್ಜಿ ಸ್ವೀಕರಿಸುತ್ತಾರಾ ಸ್ಪೀಕರ್ ಓಂ ಬಿರ್ಲಾ?

ಲೋಕಸಭೆಯಲ್ಲಿ ಟಿಎಂಸಿ ಪಕ್ಷದ ಸಂಸದೀಯ ನಾಯಕರೂ ಆಗಿರುವ ಅಭಿಷೇಕ್ ಬ್ಯಾನರ್ಜಿ ದೆಹಲಿಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು. ಸಂವಿಧಾನದ 10ನೇ ಶೆಡ್ಯೂಲ್ (ಪಕ್ಷಾಂತರ ನಿರೋಧಕ ಕಾಯ್ದೆ) ಅಡಿಯಲ್ಲಿ ಈ 20 ಸಂಸದರು ಮೂಲ ಪಕ್ಷದ ವಿಪ್​ಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಆದ್ದರಿಂದ ಇವರ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು ಲೋಕಸಭೆಯಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಎನ್‌ಸಿಪಿಐ ಜೊತೆಗಿನ ವಿಲೀನದ ನಂತರ ತಮಗೆ ಪ್ರತ್ಯೇಕ ಗುಂಪಾಗಿ ಮಾನ್ಯತೆ ನೀಡಬೇಕೆಂದು ಕೋರಿ 20 ಬಂಡಾಯ ಸಂಸದರು ಸಲ್ಲಿಸಿದ್ದ ಮನವಿಯ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ, ಲೋಕಸಭೆಯ ಟಿಎಂಸಿ ನಾಯಕರಾಗಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಪಕ್ಷದ ನಿಲುವನ್ನು ಮಂಡಿಸಲು ಸ್ಪೀಕರ್ ಓಂ ಬಿರ್ಲಾ ಆಹ್ವಾನ ನೀಡಿದ್ದರು. ಕಳೆದ ವಾರವಷ್ಟೇ ಬ್ಯಾನರ್ಜಿ ಅವರು ಸ್ಪೀಕರ್ ಅವರಿಗೆ ಪತ್ರ ಬರೆದು, ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ನ ಪ್ರತ್ಯೇಕ ಬಣ ಎಂದು ಹೇಳಿಕೊಳ್ಳುವ ಯಾವುದೇ ಗುಂಪಿಗೆ ಯಾವುದೇ ರೀತಿಯ ಮಾನ್ಯತೆ, ಸ್ಥಾನಮಾನ ಅಥವಾ ಸಂಸದೀಯ ಸೌಲಭ್ಯಗಳನ್ನು ನೀಡದಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಎನ್‌ಸಿಪಿಐ’ ಜೊತೆ 20 ಟಿಎಂಸಿ ಬಂಡಾಯ ಸಂಸದರ ವಿಲೀನ, ಸಂಸತ್ತಿನಲ್ಲಿ ಹೊಸ ಬಣದ ಉದಯ

ಬಂಡಾಯ ಸಂಸದರ ವಿರುದ್ಧ ಕೇವಲ ರಾಜಕೀಯವಾಗಿ ಮಾತ್ರವಲ್ಲದೆ, ಕಾನೂನಾತ್ಮಕವಾಗಿಯೂ ಹೋರಾಡಲು ಮಮತಾ ಬ್ಯಾನರ್ಜಿ ಬ್ಲೂಪ್ರಿಂಟ್ ಸಿದ್ಧಪಡಿಸಿದ್ದಾರೆ. ಒಂದು ವೇಳೆ ಲೋಕಸಭಾ ಸ್ಪೀಕರ್ ಕಡೆಯಿಂದ ಕ್ರಮ ಕೈಗೊಳ್ಳಲು ವಿಳಂಬವಾದರೆ, ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೂಡ ಟಿಎಂಸಿ ಸಿದ್ಧತೆ ನಡೆಸಿದೆ. ಸದ್ಯಕ್ಕೆ ಓಂ ಬಿರ್ಲಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದರ ಬಗ್ಗೆ ಎಲ್ಲರ ಗಮನ ನೆಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!