AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ

ಹಿರಿಯ ವಕೀಲ ಶೇಖರ್ ನಾಫಡೆ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಉಲ್ಲೇಖಿಸಿ ಪ್ರಕರಣದ ವಿಚಾರಣೆಯನ್ನು ಕೋರಿದರು.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ
ಸುಪ್ರೀಂಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Apr 25, 2022 | 1:51 PM

Share

ದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu And Kashmir) ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು (Article 370) ರದ್ದುಗೊಳಿಸಿದ ಪ್ರಕರಣವನ್ನು ಸೋಮವಾರ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಎನ್‌ವಿ ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು. ಹಿರಿಯ ವಕೀಲ ಶೇಖರ್ ನಾಫಡೆ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಉಲ್ಲೇಖಿಸಿ ಪ್ರಕರಣದ ವಿಚಾರಣೆಯನ್ನು ಕೋರಿದರು. ಪೀಠದ ರಚನೆಯಲ್ಲಿ ಕೆಲವು ಸಮಸ್ಯೆಗಳಿವೆ ಎಂದು ಹೇಳುವ ಮೂಲಕ ಪ್ರಕರಣವನ್ನು ವಿಚಾರಣೆ ಮಾಡಲು ಪರಿಗಣಿಸುವುದಾಗಿ ಸಿಜೆಐ ಹೇಳಿದ್ದಾರೆ. “ಇದು 5 ನ್ಯಾಯಾಧೀಶರ ಪೀಠದ ಮುಂದೆ ಇದೆ. ವಿವರಗಳನ್ನು ನೀಡಿ ನಾವು ಅದನ್ನು ವಿಚಾರಣೆ ಮಾಡುತ್ತೇವೆ. ನ್ಯಾಯಾಧೀಶರು ಮತ್ತು ಪೀಠದ ಸಂಯೋಜನೆಯಲ್ಲಿ ಕೆಲವು ಸಮಸ್ಯೆಗಳಿವೆ” ಎಂದು ಸಿಜೆಐ ಹೇಳಿದರು. ಸಂವಾದದವರು, ರಾಧಾ ಕುಮಾರ್, ಕಪಿಲ್ ಕಾಕ್ ಮತ್ತಿತರರ ಪರ ಹಿರಿಯ ವಕೀಲ ನಾಫಡೆ ವಾದ ಮಂಡಿಸಿದರು. ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019 ರ ನಿರ್ಧಾರವನ್ನು ಪ್ರಶ್ನಿಸಿ 20 ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.

ಆರ್ಟಿಕಲ್ 370 ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳನ್ನು ಬೇಸಿಗೆ ರಜೆಯ ನಂತರ ಇತರ ನ್ಯಾಯಾಧೀಶರೊಂದಿಗೆ ಚರ್ಚಿಸಿ ವಿಚಾರಣೆಗೆ ಪರಿಗಣಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ. ರಜೆಯ ನಂತರ ನಾನು ನೋಡೋಣ… ಇದು ಐವರು ನ್ಯಾಯಾಧೀಶರ ಪೀಠದ ಪ್ರಕರಣ.ನಾನು ಇತರ ನ್ಯಾಯಾಧೀಶರನ್ನು ಸಹ ಕೇಳುತ್ತೇನೆ ಎಂದು ಸಿಜೆಐ ಅವರು ಪಿ. ಚಿದಂಬರಂ, ಕಪಿಲ್ ಸಿಬಲ್ ಮತ್ತು ಶೇಖರ್ ನಾಫಡೆ ಸೇರಿದಂತೆ ಹಿರಿಯ ವಕೀಲರ ಗುಂಪನ್ನು ಉದ್ದೇಶಿಸಿ ಹೇಳಿದರು.

ಬೇಸಿಗೆ ರಜೆಗಳು ಮೇ 23 ರಿಂದ ಪ್ರಾರಂಭವಾಗುತ್ತವೆ ಮತ್ತು ಜುಲೈ 11 ರಂದು ನ್ಯಾಯಾಲಯವು ಪುನರಾರಂಭವಾಗುತ್ತದೆ. ಮುಖ್ಯ ನ್ಯಾಯಮೂರ್ತಿ ರಮಣ ಆಗಸ್ಟ್ 26 ರಂದು ನಿವೃತ್ತರಾಗಲಿದ್ದಾರೆ.

ಮಾರ್ಚ್ 2020 ರಲ್ಲಿ, ಸುಪ್ರೀಂಕೋರ್ಟ್‌ನ 5 ನ್ಯಾಯಾಧೀಶರ ಸಂವಿಧಾನ ಪೀಠವು 370 ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ರೆಫರ್ ಮಾಡುವ ಅಗತ್ಯವಿಲ್ಲ ಎಂದು ಹೇಳಿತ್ತು.

ಸುಪ್ರೀಂಕೋರ್ಟ್‌ನ ಎರಡು ತೀರ್ಪುಗಳಾದ ಪ್ರೇಮ್ ನಾಥ್ ಕೌಲ್ ವರ್ಸಸ್ ಸ್ಟೇಟ್ ಆಫ್ ಜಮ್ಮು ಮತ್ತು ಕಾಶ್ಮೀರ ಮತ್ತು ಸಂಪತ್ ಪ್ರಕಾಶ್ ವರ್ಸಸ್ ಸ್ಟೇಟ್ ಆಫ್ ಸ್ಟೇಟ್‌ಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಕೆಲವು ಅರ್ಜಿದಾರರು ಪ್ರಕರಣದ ಉಲ್ಲೇಖವನ್ನು ಕೋರಿದ ನಂತರ ಈ ತೀರ್ಪು ಬಂದಿದೆ. ಜಮ್ಮು ಮತ್ತು ಕಾಶ್ಮೀರ ಈ ಎರಡೂ ತೀರ್ಪುಗಳನ್ನು 5 ನ್ಯಾಯಾಧೀಶರ ಪೀಠಗಳು ಸಲ್ಲಿಸಿದವು ಮತ್ತು 370 ನೇ ವಿಧಿಯ ವ್ಯಾಖ್ಯಾನದೊಂದಿಗೆ ವ್ಯವಹರಿಸಲಾಯಿತು. ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ದೊಡ್ಡ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರಧಾನಿ ನಿವಾಸದ ಎದುರು ನಮಾಜ್​ ಮಾಡುತ್ತೇನೆ ಅನುಮತಿ ಕೊಡಿ ಎಂದು ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದ ಎನ್​ಸಿಪಿ ನಾಯಕಿ

Published On - 1:47 pm, Mon, 25 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!