AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abu Salem: ಅಬು ಸಲೇಂ ಜೀವಾವಧಿ ಶಿಕ್ಷೆಯಲ್ಲಿ ಕಡಿತ ಸಾಧ್ಯವಿಲ್ಲ; ಸುಪ್ರೀಂಕೋರ್ಟ್ ತೀರ್ಪು

1993 Mumbai Blasts: ಭೂಗತ ಪಾತಕಿ ಅಬು ಸಲೇಂಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಸ್ಪಷ್ಟಪಡಿಸಿದೆ.

Abu Salem: ಅಬು ಸಲೇಂ ಜೀವಾವಧಿ ಶಿಕ್ಷೆಯಲ್ಲಿ ಕಡಿತ ಸಾಧ್ಯವಿಲ್ಲ; ಸುಪ್ರೀಂಕೋರ್ಟ್ ತೀರ್ಪು
TV9 Web
| Edited By: |

Updated on:Jul 11, 2022 | 12:21 PM

Share

ನವದೆಹಲಿ: ಮುಂಬೈ ಬಾಂಬ್ ಸ್ಫೋಟ (Mumbai Blast) ಸೇರಿದಂತೆ ಹಲವು ದುಷ್ಕೃತ್ಯಗಳಲ್ಲಿ ಶಾಮೀಲಾಗಿರುವ ಆರೋಪ ಹೊತ್ತಿರುವ ಭೂಗತ ಪಾತಕಿ ಅಬು ಸಲೇಂಗೆ (Abu Salem) ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು (Life Sentence) ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್​ ಸ್ಪಷ್ಟಪಡಿಸಿದೆ. ಪೋರ್ಚುಗಲ್ ಜೈಲಿನಲ್ಲಿ ಅಬು ಸಲೇಂ ಕಳೆದ ಅವಧಿಯನ್ನು ಶಿಕ್ಷಯ ಭಾಗ ಎಂದು ಪರಿಗಣಿಸಲು ಆಗುವುದಿಲ್ಲ. ಕೇಂದ್ರ ಸರ್ಕಾರವು ಪೋರ್ಚುಗಲ್ ಸರ್ಕಾರಕ್ಕೆ ನೀಡಿದ್ದ ಭರವಸೆಯನ್ನು ಈಡೇರಿಸಬೇಕಾಗುತ್ತದೆ ಎಂದು ಹೇಳಿತು.

1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಗ್ಯಾಂಗ್​ಸ್ಟರ್​ ಅಬು ಸಲೇಂ ದಲ್ಲಿ ತನ್ನ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಆತನ ಶಿಕ್ಷೆಯ ಅವಧಿಯನ್ನು ತಗ್ಗಿಸಲು ಸಾಧ್ಯವಿಲ್ಲ ಎಂದು ಘೋಷಿಸಿದೆ. ತನ್ನ ಹಸ್ತಾಂತರಕ್ಕಾಗಿ 2002ರಲ್ಲಿ ಪೋರ್ಚುಗಲ್‌ಗೆ ಭಾರತ ನೀಡಿದ ಭರವಸೆಯ ಅಡಿಯಲ್ಲಿ 25 ವರ್ಷಕ್ಕೂ ಹೆಚ್ಚು ಕಾಲ ತನಗೆ ಶಿಕ್ಷೆಯನ್ನು ನೀಡಬಾರದು ಎಂಬ ಆಧಾರದ ಮೇಲೆ ಅಬು ಸಲೇಂ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮುಂಬೈ ಸರಣಿ ಸ್ಫೋಟದ ಆರೋಪಿ, ದಾವೂದ್ ಇಬ್ರಾಹಿಂ ಆಪ್ತ ಅಬು ಬಕರ್​ ಯುಎಇಯಲ್ಲಿ ಬಂಧನ; ಶೀಘ್ರವೇ ಭಾರತಕ್ಕೆ ಕರೆತಂದು ವಿಚಾರಣೆ

ಪೋರ್ಚುಗಲ್‌ಗೆ ನೀಡಿದ ಭರವಸೆಯನ್ನು ಗೌರವಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. 1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ 25 ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಗ್ಯಾಂಗ್‌ಸ್ಟರ್ ಅಬು ಸಲೇಂನನ್ನು ಬಿಡುಗಡೆ ಮಾಡಲು ಕೇಂದ್ರವು ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರ ಪೀಠವು ಈ ಬಗ್ಗೆ ತೀರ್ಪು ನೀಡಿದ್ದು, “ಅಬು ಸಲೇಂ ಶಿಕ್ಷೆ 25 ವರ್ಷಗಳು ಪೂರ್ಣಗೊಂಡ ಒಂದು ತಿಂಗಳೊಳಗೆ ಅಗತ್ಯ ದಾಖಲೆಗಳನ್ನು ರವಾನಿಸಲಾಗುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ದಾವೂದ್ ಇಬ್ರಾಹಿಂ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಮುಂಬೈ ಸ್ಫೋಟದ ಪ್ರಮುಖ ಆರೋಪಿ

1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಅಬು ಸಲೇಂನನ್ನು ಸುದೀರ್ಘ ಕಾನೂನು ಹೋರಾಟದ ನಂತರ 2005ರ ನವೆಂಬರ್ 11ರಂದು ಪೋರ್ಚುಗಲ್‌ನಿಂದ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. 2017ರ ಜೂನ್ ತಿಂಗಳಲ್ಲಿ ಮುಂಬೈನಲ್ಲಿ 1993ರ ಸರಣಿ ಸ್ಫೋಟದ ಪ್ರಕರಣದಲ್ಲಿ 257 ಮಂದಿ ಸಾವನ್ನಪ್ಪಿದ್ದರು, 713 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ಅಬು ಸಲೇಂ ಅಪರಾಧಿ ಎಂದು ಆದೇಶಿಸಲಾಗಿತ್ತು. ನಂತರ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು.

Published On - 11:52 am, Mon, 11 July 22

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್