AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ರಾಮನಿಗೆ ಉಡುಗೊರೆಗಳ ಮಹಾಪೂರ: ರಾಮ ಲಲ್ಲಾಗೆ ಅತಿದೊಡ್ಡ ಗಿಫ್ಟ್ ಕೊಟ್ಟಿದ್ಯಾರು ಗೊತ್ತಾ?

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾಗಿದ್ದು, ಭಕ್ತರ ದರ್ಶನಕ್ಕೆ ಮಂದಿರ ಮುಕ್ತವಾಗಿದೆ. ರಾಮ ಮಂದಿರ ಭವ್ಯವಾಗಿ ತಲೆಯೆತ್ತುವಂತಾಗಲು ಅನೇಕರು ಕೊಡುಗೆ ನೀಡಿದ್ದಾರೆ. ಆದರೆ, ಅತಿ ಹೆಚ್ಚಿನ ಮೊತ್ತ ದೇಣಿಗೆ ನೀಡಿದವರು ಯಾರು ಎಂಬ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ. ಆ ವಿವರ ಇಲ್ಲಿದೆ.

ಅಯೋಧ್ಯೆಯ ರಾಮನಿಗೆ ಉಡುಗೊರೆಗಳ ಮಹಾಪೂರ: ರಾಮ ಲಲ್ಲಾಗೆ ಅತಿದೊಡ್ಡ ಗಿಫ್ಟ್ ಕೊಟ್ಟಿದ್ಯಾರು ಗೊತ್ತಾ?
ಅಯೋಧ್ಯೆಯ ರಾಮಮಂದಿರ
ಗಣಪತಿ ಶರ್ಮಾ
|

Updated on: Jan 24, 2024 | 6:51 AM

Share

ಅಯೋಧ್ಯೆ, ಜನವರಿ 24: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಶತಶತಮಾನಗಳ ಭಾರತೀಯರ ಕನಸು. ರಾಮಮಂದಿರ ನಿರ್ಮಾಣಕ್ಕಾಗಿ ದೇಶದ ಮೂಲೆ ಮೂಲೆಯಿಂದಲೂ ಭಕ್ತರು ತಮ್ಮ ಶಕ್ತ್ಯಾನುಸಾರ ಕಾಣಿಕೆ ಅರ್ಪಿಸಿದ್ದಾರೆ. ಹಣ ಮಾತ್ರವಲ್ಲ ಕಬ್ಬಿಣ, ಇಟ್ಟಿಗೆ ಹೀಗೆ ಅನೇಕ ವಸ್ತುಗಳನ್ನು ಸಮರ್ಪಿಸಿದ್ದಾರೆ. ಈಗ ಭವ್ಯ ರಾಮಮಂದಿರ ತಲೆ ಎತ್ತಿ ನಿಂತಿದೆ. ಈ ರಾಮಮಂದಿರಕ್ಕೆ ಅತಿಹೆಚ್ಚು ದೇಣಿಗೆ ನೀಡಿದವರು, ಅತಿದೊಡ್ಡ ಕಾಣಿಕೆ ನೀಡಿದರು ಯಾರು ಎಂದರೆ, ಭಾರತದ ಶ್ರೀಮಂತ ಉದ್ಯಮಿ ಅಂಬಾನಿಯೋ, ಟಾಟಾ ಬಿರ್ಲಾ ಅವರೋ? ಯಾರೂ ಅಲ್ಲ. ಗುಜರಾತ್‌ನ ಖ್ಯಾತ ವಜ್ರದ ವ್ಯಾಪಾರಿ ದಿಲೀಪ್ ಕುಮಾರ್ ವಿ ಲಖಿ ಎಂಬವರು.

ರಾಮನಿಗೆ 101 ಕೆಜಿ ಚಿನ್ನ ಅರ್ಪಣೆ

ದಿಲೀಪ್ ಕುಮಾರ್ ವಿ ಲಖಿ ಉದಾತ್ತ ಮನಸ್ಸಿನಿಂದ ರಾಮನ ಸೇವೆಗಾಗಿ ಬರೋಬ್ಬರಿ 101 ಕೆಜಿ ಚಿನ್ನವನ್ನು ಸಮರ್ಪಿಸಿದ್ದಾರೆ. ಗುಜರಾತ್‌ ದಿಲೀಪ್ ಕುಮಾರ ವಿ ಲಖಿ ಅವರದ್ದು ವಜ್ರ ವ್ಯಾಪಾರದ ಕುಟುಂಬ. ರಾಮನ ಪರಮಭಕ್ತರಾಗಿರುವ ಅವರು 101 ಕೆಜಿ ಚಿನ್ನವನ್ನ ಕಾಣಿಕೆಯಾಗಿ ನೀಡಿದ್ದಾರೆ. ಸದ್ಯ 10 ಗ್ರಾಮ್ ಚಿನ್ನಕ್ಕೆ 68 ಸಾವಿರ ರೂಪಾಯಿ ಇದ್ದು, 101 ಕೆಜಿಗೆ ಅಂದಾಜು 68 ಕೋಟಿ ರೂಪಾಯಿಗಳಷ್ಟು ಆಗುತ್ತದೆ.

ದಿಲೀಪ್ ಕೊಟ್ಟ ಚಿನ್ನವನ್ನು ಯಾವುದಕ್ಕೆಲ್ಲ ಬಳಕೆ?

ವಜ್ರದ ವ್ಯಾಪಾರಿ ದಿಲೀಪ್ ಕುಮಾರ್ ಕೊಟ್ಟಿರುವ 101 ಕೆಜಿ ಬಂಗಾರವನ್ನು ರಾಮಮಂದಿರದ ಬಾಗಿಲುಗಳಿಗೆ ಬಳಸಿಕೊಳ್ಳಲಾಗಿದೆ. ಗರ್ಭಗುಡಿಗೆ ಬಳಸಿಕೊಳ್ಳಲಾಗಿದೆ. ಚಿನ್ನದ ತ್ರಿಶೂಲ, ಚಿನ್ನ ಢಮರುಗ, ಹಾಗೇ ಗರ್ಭಗುಡಿ ಮುಂಭಾಗದ ಸ್ತಂಭಗಳಿಗೆ ಈ ಚಿನ್ನವನ್ನು ಬಳಸಿಕೊಳ್ಳಲಾಗಿದೆ.

ಹೆಚ್ಚುವರಿಯಾಗಿ, ಸೂರತ್‌ನ ಮತ್ತೊಬ್ಬ ವಜ್ರದ ಉದ್ಯಮಿ ಗೋವಿಂದಭಾಯ್ ಧೋಲಾಕಿಯಾ ಅವರು 11 ಕೋಟಿ ರೂ. ನೀಡಿದ್ದಾರೆ. ಧೋಲಾಕಿಯಾ ಅವರು ಶ್ರೀ ರಾಮಕೃಷ್ಣ ಎಕ್ಸ್‌ಪೋರ್ಟ್ಸ್ ಸ್ಥಾಪಕರು.

ಬಾಲರಾಮನಿಗೆ 11ಕೋಟಿ ರೂ.ನ ವಜ್ರ ಖಚಿತ ಕಿರೀಟ

ಗುಜರಾತ್‌ನ ಮತ್ತೊಬ್ಬ ವಜ್ರದ ವ್ಯಾಪಾರಿ ಮುಖೇಶ್ ಪಟೇಲ್ ಎಂಬವರು 11 ಕೋಟಿ ರೂಪಾಯಿ ಬೆಲೆಬಾಳುವ 6 ಕೆಿಜಿ ತೂಕದ ವಜ್ರಖಚಿತ ಕಿರೀಟವನ್ನು ಬಾಲರಾಮನಿಗೆ ಅರ್ಪಿಸಿದ್ದಾರೆ. ಬಂಗಾರ, ವಜ್ರ, ಅಮೂಲ್ಯ ರತ್ನದ ಕಲ್ಲುಗಳನ್ನು ಈ ಕಿರೀಟ ಒಳಗೊಂಡಿದೆ.

ಇದನ್ನೂ ಓದಿ: ಅಯೋಧ್ಯೆಯ ರಾಮಲಲ್ಲಾಗೆ 11 ಕೋಟಿ ರೂ. ಮೌಲ್ಯದ ವಜ್ರದ ಕಿರೀಟ ದಾನ ಮಾಡಿದ ಗುಜರಾತ್​ನ ವಜ್ರ ವ್ಯಾಪಾರಿ

ರಾಮಾಯಣ ಪ್ರಚಾರಕನಿಂದ 18.3 ಕೋಟಿ ರೂಪಾಯಿ ದೇಣಿಗೆ

ಕಳೆದ 6 ದಶಕಗಳಿಂದ ದೇಶ, ವಿದೇಶದಲ್ಲಿ ರಾಮಾಯಣ ಪ್ರಚಾರದಲ್ಲಿ ತಮ್ಮ ತೊಡಗಿಸಿಕೊಂಡಿರುವ ಮೊರಾರಿ ಬಾಪು ಎಂಬವರು ರಾಮಮಂದಿರ ನಿರ್ಮಾಣ ಕಾರ್ಯಕ್ಕೆ 18.3 ಕೋಟಿ ರೂಪಾಯಿ ಸಂಗ್ರಹಿಸಿ ಕೊಟ್ಟಿದ್ದಾರೆ.

Abundance of gifts to Ram Lalla in Ayodhya: Do you know who gave the biggest gift to Lord Ram? See details here in Kannada

ಅಯೋಧ್ಯೆಯ ರಾಮ ಮಂದಿರ ಗರ್ಭಗುಡಿಯ ಚಿನ್ನಲೇಪಿತ ದ್ವಾರ

ಅಮೆರಿಕ, ಬ್ರಿಟನ್, ಯುರೋಪ್, ಕೆನಡಾ ಹೀಗೆ ವಿವಿಧ ದೇಶಗಳಲ್ಲಿ ಕಾರ್ಯಕ್ರಮ ನೀಡಿ ಈ ದೇಣಿಗೆ ಸಂಗ್ರಹಿಸಿದ್ದಾರೆ. ಈಗಾಗಲೇ 11.30ಕೋಟಿ ರೂಪಾಯಿಯನ್ನು ಅಯೋಧ್ಯೆ ಟ್ರಸ್ಟ್‌ಗೆ ಹಸ್ತಾಂತರಿಸಿದ್ದು, ಉಳಿದ ಹಣವನ್ನು ಫೆಬ್ರವರಿಯನ್ನು ನೀಡುವುದಾಗಿ ಹೇಳಿದ್ದಾರೆ.

ವಿದೇಶಗಳಿಂದ ರಾಮನಿಗೆ ಹರಿದು ಬಂತು 8 ಕೋಟಿ ರೂ.

ಸೋಮವಾರ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ರಾಮಮಂದಿರಕ್ಕೆ 2.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಇನ್ನು ಅಮೆರಿಕ, ಕೆನಡಾ, ಬ್ರಿಟನ್ ಸೇರಿ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರು, ರಾಮನ ಭಕ್ತರು 8 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆಯನ್ನು ರಾಮಮಂದಿರಕ್ಕೆ ಸಮರ್ಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ