AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ-ವಾರಣಾಸಿ ಇಂಡಿಗೋ ವಿಮಾನದಲ್ಲಿ ಕೈಕೊಟ್ಟ ಎಸಿ; ಅಸ್ವಸ್ಥರಾದ ಪ್ರಯಾಣಿಕರು

ಸೆಪ್ಟೆಂಬರ್ 5, 2024 ರಂದು ದೆಹಲಿಯಿಂದ ವಾರಣಾಸಿಗೆ ಹಾರಾಟ ನಡೆಸುತ್ತಿರುವ 6E 2235 ಫ್ಲೈಟ್‌ನಲ್ಲಿ ಅನುಭವಿಸಿದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ. ಅಸ್ವಸ್ಥತೆಗೆ ಕ್ಯಾಬಿನ್ ತಾಪಮಾನದಲ್ಲಿನ ಏರಿಳಿತಗಳು ಕಾರಣವೆಂದು ಹೇಳಲಾಗಿದೆ, ಇದನ್ನು ಪ್ರಯಾಣಿಕರ ವಿನಂತಿಗಳಿಗೆ ಪ್ರತಿಕ್ರಿಯೆಯಾಗಿ ಸರಿಹೊಂದಿಸಲಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

ದೆಹಲಿ-ವಾರಣಾಸಿ ಇಂಡಿಗೋ ವಿಮಾನದಲ್ಲಿ ಕೈಕೊಟ್ಟ ಎಸಿ; ಅಸ್ವಸ್ಥರಾದ ಪ್ರಯಾಣಿಕರು
ಇಂಡಿಗೋ ಪ್ರಯಾಣಿಕರು
ರಶ್ಮಿ ಕಲ್ಲಕಟ್ಟ
|

Updated on: Sep 07, 2024 | 2:29 PM

Share

ದೆಹಲಿ ಸೆಪ್ಟೆಂಬರ್ 07: ದಿಲ್ಲಿಯಿಂದ ವಾರಣಾಸಿಗೆ (Delhi-Varanasi) ತೆರಳುತ್ತಿದ್ದ ಇಂಡಿಗೋ (Indigo) ವಿಮಾನದ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಸಮಸ್ಯೆ ತಲೆದೋರಿದ್ದು ಪ್ರಯಾಣಿಕರು ಅಸ್ವಸ್ಥರಾಗಿದ್ದಾರೆ. 6E 2235 ವಿಮಾನದಲ್ಲಿ AC ಕಾರ್ಯನಿರ್ವಹಿಸದ ಕಾರಣ ಹಲವಾರು ಪ್ರಯಾಣಿಕರು ಅಸ್ವಸ್ಥರಾಗಿದ್ದು ಉಸಿರುಗಟ್ಟುವಿಕೆಗೆ ದೂರು ನೀಡಿದರು. ಗುರುವಾರ ನಡೆದ ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಮಾನದೊಳಗೆ ಕೋಪಗೊಂಡ ಪ್ರಯಾಣಿಕರು ಪ್ರತಿಭಟನೆ ನಡೆಸುತ್ತಿರುವುದು ವಿಡಿಯೊದಲ್ಲಿದೆ. ಕೆಲವರು ಗಾಳಿ ಬೀಸಲು ವಿಮಾನದಲ್ಲಿನ ಮ್ಯಾಗಜೀನ್‌ಗಳು ಮತ್ತು ಏರ್‌ಕ್ರಾಫ್ಟ್ ಸುರಕ್ಷತಾ ಕಾರ್ಡ್‌ಗಳನ್ನು ಬಳಸುತ್ತಿದ್ದಾರೆ.

ಕೆಲವು ವರದಿಗಳ ಪ್ರಕಾರ, ಕೆಲವು ಮಹಿಳಾ ಪ್ರಯಾಣಿಕರ ಆರೋಗ್ಯ ಹದಗೆಟ್ಟಿದೆ. ಒಬ್ಬ ಮಹಿಳೆ ಮೂರ್ಛೆ ಹೋಗಿದ್ದಾರೆ. ವಾರಣಾಸಿಗೆ ಹೋಗುವ ವಿಮಾನದ ಪ್ರಯಾಣಿಕರೊಬ್ಬರು ಯಾರಿಗಾದರೂ ಏನಾದರೂ ಸಂಭವಿಸಿದರೆ ಯಾರು ಹೊಣೆಗಾರಿಕೆಯನ್ನು ತೆಗೆದುಕೊಳ್ಳುತ್ತಾರೆ ಎಂದು ಕೇಳಿದರು.ತ್ತು ಟೇಕ್-ಆಫ್ ಆಗುವ ಮೊದಲು ತಮ್ಮ ಪುನರಾವರ್ತಿತ ದೂರುಗಳ ಹೊರತಾಗಿಯೂ ಸಮಸ್ಯೆಯನ್ನು ಸರಿಪಡಿಸಲು ತಂತ್ರಜ್ಞರನ್ನು ಕರೆಯಲು ವಿಮಾನಯಾನ ಸಂಸ್ಥೆ ಕಾಳಜಿ ವಹಿಸಲಿಲ್ಲ ಎಂದು ಅವರ ದೂರಿದ್ದಾರೆ.

ಕ್ಷಮೆಯಾಚಿಸಿದ ಇಂಡಿಗೋ

ವಿಮಾನಯಾನ ಸಂಸ್ಥೆಯು ತನ್ನ ದೆಹಲಿ-ವಾರಣಾಸಿ ವಿಮಾನದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ಕ್ಷಮೆಯಾಚಿಸಿದ್ದು ಕ್ಯಾಬಿನ್ ಸಿಬ್ಬಂದಿ ತಕ್ಷಣವೇ ಪ್ರಯಾಣಿಕರಿಗೆ ಸಹಾಯವನ್ನೊದಗಿಸಿದೆ ಎಂದು ಹೇಳಿದೆ. ವಿಮಾನದ ಹವಾನಿಯಂತ್ರಣ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕ್ಯಾಬಿನ್ ತಾಪಮಾನದಲ್ಲಿನ ಏರಿಳಿತಗಳು ಉಸಿರುಗಟ್ಟುವಿಕೆಗೆ ಕಾರಣವಾಯಿತು ಎಂದು ಅದು ಹೇಳಿದೆ. “ಸೆಪ್ಟೆಂಬರ್ 5, 2024 ರಂದು ದೆಹಲಿಯಿಂದ ವಾರಣಾಸಿಗೆ ಹಾರಾಟ ನಡೆಸುತ್ತಿರುವ 6E 2235 ಫ್ಲೈಟ್‌ನಲ್ಲಿ ಅನುಭವಿಸಿದ ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ. ಅಸ್ವಸ್ಥತೆಗೆ ಕ್ಯಾಬಿನ್ ತಾಪಮಾನದಲ್ಲಿನ ಏರಿಳಿತಗಳು ಕಾರಣವೆಂದು ಹೇಳಲಾಗಿದೆ, ಇದನ್ನು ಪ್ರಯಾಣಿಕರ ವಿನಂತಿಗಳಿಗೆ ಪ್ರತಿಕ್ರಿಯೆಯಾಗಿ ಸರಿಹೊಂದಿಸಲಾಗಿದೆ. ಪರಿಸ್ಥಿತಿಯನ್ನು ಪರಿಹರಿಸಲು ನಮ್ಮ ಕ್ಯಾಬಿನ್ ಸಿಬ್ಬಂದಿ ತಕ್ಷಣವೇ ಪ್ರಯಾಣಿಕರಿಗೆ ಸಹಾಯವೊದಗಿಸಿದ್ದಾರೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಾಯತ್ತತೆಯನ್ನು ಎಂದಿಗೂ ಪುನಃಸ್ಥಾಪಿಸಲಾಗುವುದಿಲ್ಲ: ಅಮಿತ್ ಶಾ

ಜೂನ್‌ನಲ್ಲಿ, ದೆಹಲಿಯಿಂದ ಬಾಗ್ಡೋಗ್ರಾಕ್ಕೆ ಇಂಡಿಗೋ ವಿಮಾನದಲ್ಲಿ ವಿಮಾನದ ಹವಾನಿಯಂತ್ರಣವು ಒಂದು ಗಂಟೆಗಳ ಕಾಲ ಕೆಲಸ ಮಾಡುವುದನ್ನು ನಿಲ್ಲಿಸಿದಾಗ ಇದೇ ರೀತಿಯ ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡುಬಂದವು. ಅನೇಕ ಪ್ರಯಾಣಿಕರು, ಹೆಚ್ಚಾಗಿ ವಯಸ್ಸಾದವರು, ಉಸಿರಾಟದ ಸಮಸ್ಯೆ ಮತ್ತು ಉಸಿರುಗಟ್ಟುವಿಕೆ ಬಗ್ಗೆ ದೂರು ನೀಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ