AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಕುಂಭ ಮೇಳದಿಂದ ಹಿಂದಿರುಗುವಾಗ ಅಪಘಾತ, ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವು

ಕುಂಭ ಮೇಳದಿಂದ ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ನಾಲ್ವರು ಸೇರಿ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಇಂದೋರ್​ನಲ್ಲಿ ಘಟನೆ ನಡೆದಿದೆ. ಮನ್ಪುರ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಘಟನೆ ಬೆಳಗಿನ ಜಾವ 2:30 ಕ್ಕೆ ನಡೆದಿದೆ. ಅಪಘಾತಕ್ಕೀಡಾದ ಟೆಂಪೋ ಟ್ರಾವೆಲರ್‌ನಲ್ಲಿದ್ದ ಪ್ರಯಾಣಿಕರು ಕರ್ನಾಟಕದ ನಿವಾಸಿಗಳು. ಮಾನ್ಪುರ ಭೈರವ ಘಾಟ್‌ನಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಮುಂದೆ ಚಲಿಸುತ್ತಿದ್ದ ಟ್ಯಾಂಕರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.

ಮಧ್ಯಪ್ರದೇಶ: ಕುಂಭ ಮೇಳದಿಂದ ಹಿಂದಿರುಗುವಾಗ ಅಪಘಾತ, ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವು
ಆಸ್ಪತ್ರೆImage Credit source: ANI
ನಯನಾ ರಾಜೀವ್
|

Updated on:Feb 07, 2025 | 2:33 PM

Share

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಹಿಂದಿರುಗುತ್ತಿದ್ದಾಗ ಮಧ್ಯಪ್ರದೇಶದ ಇಂದೋರ್​ ಬಳಿ ವಾಹನ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಮೂಲದ ನಾಲ್ವರು ಸೇರಿ ಒಟ್ಟು 6 ಮಂದಿ ಪ್ರಾಣಕಳೆದುಕೊಂಡಿದ್ದಾರೆ.ಟಿಟಿ ವಾಹನದಲ್ಲಿ 19 ಮಂದಿ ವಾಪಸಾಗುತ್ತಿದ್ದರು ಆಗ ಲಾರಿಗೆ ವಾಹನ ಡಿಕ್ಕಿ ಹೊಡೆದಿದೆ.

ಬೆಳಗಾವಿಯ ನಾಲ್ವರು ಇಂದೋರ್​ನ ಇಬ್ಬರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ಪುರ ಪೊಲೀಸ್ ಠಾಣೆಯ ಪೊಲೀಸ್ ತಂಡ ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಘಟನೆ ಬೆಳಗಿನ ಜಾವ 2:30 ಕ್ಕೆ ನಡೆದಿದೆ. ಅಪಘಾತಕ್ಕೀಡಾದ ಟೆಂಪೋ ಟ್ರಾವೆಲರ್‌ನಲ್ಲಿದ್ದ ಪ್ರಯಾಣಿಕರು ಕರ್ನಾಟಕದ ನಿವಾಸಿಗಳು. ಮಾನ್ಪುರ ಭೈರವ ಘಾಟ್‌ನಲ್ಲಿ ಬೆಳಗಿನ ಜಾವ 2.30 ರ ಸುಮಾರಿಗೆ ಮುಂದೆ ಚಲಿಸುತ್ತಿದ್ದ ಟ್ಯಾಂಕರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.

ಮತ್ತಷ್ಟು ಓದಿ: Uttar Pradesh Accident : ಮಹಾಕುಂಭಕ್ಕೆ ತೆರಳುವ ಮಾರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತ, ಮೂವರು ಸಾವು, 40 ಮಂದಿಗೆ ಗಾಯ

ಆ ಮೂಲಕ ಹಾದುಹೋಗುತ್ತಿದ್ದ ಇಬ್ಬರು ಬೈಕ್ ಸವಾರರು ಸಹ ಡಿಕ್ಕಿ ಹೊಡೆದು ಸಾವನ್ನಪ್ಪಿದರು, ನಾಲ್ವರು ಮೃತರನ್ನು ಇನ್ನೂ ಗುರುತಿಸಲಾಗಿಲ್ಲ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಪ್ರಯಾಣಿಕರ ವಾಹನವು ಚೂರುಚೂರಾಗಿತ್ತು. ಮೃತ ಬೈಕ್ ಸವಾರರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರನ್ನು ಬೆಳಗಾವಿಯ ಶಹಾಪುರ ನಿವಾಸಿ ಡ್ರೈವರ್ ಸಾಗರ್(55), ಗಣೇಶಪುರ ನಿವಾಸಿ ನಿತಿ ಪಾಟೀಲ್(50) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಇಂದೋರ್‌ನ ಎಂವೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸಂಪೂರ್ಣ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಯಾಣಿಕರು ಉಜ್ಜಯಿನಿಯ ಪ್ರಸಿದ್ಧ ಮಹಾಕಾಳ ದೇವಸ್ಥಾನಕ್ಕೆ ಭೇಟಿ ನೀಡಿ ಕರ್ನಾಟಕದ ಬೆಳಗಾವಿಗೆ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:58 pm, Fri, 7 February 25

Follow Us
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​