AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು, 7 ಜನರ ಸ್ಥಿತಿ ಗಂಭೀರ

ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಶುಕ್ರವಾರ (ಡಿಸೆಂಬರ್ 01) ಬೆಳಗ್ಗೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಗಂಜಾಂನ ದಿಗಪಹಂಡಿ ನಿವಾಸಿಗಳು.

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ, 8 ಮಂದಿ ಸಾವು, 7 ಜನರ ಸ್ಥಿತಿ ಗಂಭೀರ
ಒಡಿಶಾ ಅಪಘಾತ
ನಯನಾ ರಾಜೀವ್
|

Updated on: Dec 01, 2023 | 10:39 AM

Share

ಒಡಿಶಾದ ಕಿಯೋಂಜಾರ್ ಜಿಲ್ಲೆಯ NH-20 ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ(Accident)ದಲ್ಲಿ 8 ಜನರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ತುಂಬಿದ್ದ ವ್ಯಾನ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಶುಕ್ರವಾರ (ಡಿಸೆಂಬರ್ 01) ಬೆಳಗ್ಗೆ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಗಂಜಾಂನ ದಿಗಪಹಂಡಿ ನಿವಾಸಿಗಳು.

ಪೊದಮರಿ ಗ್ರಾಮದ 20 ಮಂದಿ ಜಿಲ್ಲೆಯ ಮಾ ತಾರಿಣಿ ದೇವಸ್ಥಾನಕ್ಕೆ ವ್ಯಾನ್‌ನಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಘಾಟಗಾಂವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಆರಂಭದಲ್ಲಿ ಗಾಯಾಳುಗಳನ್ನು ಘಾಟ್‌ಗಾಂವ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ನಂತರ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಯಿತು. ಈ ಅವಘಡ ಎಷ್ಟು ಭೀಕರವಾಗಿತ್ತೆಂದರೆ ವ್ಯಾನ್ ಹಾರಿ ಹೋಗಿದೆ.

ಮಾಹಿತಿ ಪಡೆದ ಬಲಿಜೋಡಿ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಮತ್ತಷ್ಟು ಓದಿ: ಕಲಬುರಗಿ: ಕೆಟ್ಟು ನಿಂತಿದ್ದ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಅಪಘಾತದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಕಿಯೋಂಜಾರ್ ಎಸ್ಪಿ ಕುಸಲ್ಕರ್ ನಿತಿನ್ ದಗುಡು ಮಾತನಾಡಿ, 20 ಮಂದಿ ತುಂಬಿದ್ದ ವ್ಯಾನ್ ಅತಿವೇಗದಲ್ಲಿ ಹೋಗುತ್ತಿದ್ದು, ಈ ವೇಳೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ, ಮಂಜು ಇದ್ದ ಕಾರಣ ವ್ಯಾನ್ ಅಪಘಾತಕ್ಕೆ ಈಡಾಗಿರಬಹುದು ಎಂದು ಅಂದಾಜಿಸಲಾಗಿದೆ.

ಪೊಲೀಸರ ಪ್ರಕಾರ, ಈ ವ್ಯಾನ್‌ನಲ್ಲಿದ್ದ ಎರಡು ಕುಟುಂಬಗಳು ಮತ್ತು ಅಕ್ಕಪಕ್ಕದ ಮನೆಯವರೆಲ್ಲಾ ಸೇರಿ ಮಾ ತಾರಿಣಿಯ ದರ್ಶನಕ್ಕಾಗಿ ಹೊರಟಿದ್ದರು. ಶುಕ್ರವಾರ (ಡಿಸೆಂಬರ್ 01) ಮುಂಜಾನೆ 5 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ