AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ; ಕಂದಕಕ್ಕೆ ಬಿದ್ದ ವಾಹನ, 9 ಮಂದಿ ದುರ್ಮರಣ

ವಾಹನದಲ್ಲಿ ಒಟ್ಟು 13 ಮಂದಿ ಪ್ರಯಾಣ ಮಾಡುತ್ತಿದ್ದರು. ಕಂದಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದ್ದಾರೆ. ಅದಾದ ನಂತರ ಪೊಲೀಸರು, ಆರೋಗ್ಯ ಸಿಬ್ಬಂದಿ ಆಗಮಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭೀಕರ ದುರಂತ; ಕಂದಕಕ್ಕೆ ಬಿದ್ದ ವಾಹನ, 9 ಮಂದಿ ದುರ್ಮರಣ
ಜಮ್ಮು-ಕಾಶ್ಮೀರದಲ್ಲಿ ಅಪಘಾತ
TV9 Web
| Edited By: |

Updated on: Apr 01, 2022 | 8:48 AM

Share

ಜಮ್ಮು-ಕಾಶ್ಮೀರದ (Jammu Kashmir) ಪೂಂಚ್​ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಇದರಲ್ಲಿ 9 ಮಂದಿ ಮೃತಪಟ್ಟಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂಂಚ್​​ನ ಬುಫಲಿಯಾಜ್​ ಎಂಬಲ್ಲಿ ದುರ್ಘಟನೆ ನಡೆದಿದ್ದು, ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ಎಲ್ಲ ರೀತಿಯ ನೆರವುಗಳನ್ನೂ ನೀಡುತ್ತಿರುವುದಾಗಿ ಸ್ಥಳೀಯ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇವರೆಲ್ಲ ಸುರಾನ್​ಕೋಟೆ ಉಪ ವಿಭಾಗಕ್ಕೆ ಸೇರಿದ ಮರಹಾ ಎಂಬ ಗ್ರಾಮದಲ್ಲಿ ಮದುವೆ ಮುಗಿಸಿ, ವಾಪಸ್​ ಬರುತ್ತಿದ್ದರು. ಮರಹಾ-ಬುಫಲಿಯಾಜ್​ ರಸ್ತೆಯಲ್ಲಿ, ತರರಾನಿ ವಾಲಿ ಗಲಿ ಎಂಬಲ್ಲಿ  ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಬಿದ್ದಿದೆ.  

ವಾಹನದಲ್ಲಿ ಒಟ್ಟು 13 ಮಂದಿ ಪ್ರಯಾಣ ಮಾಡುತ್ತಿದ್ದರು. ಕಂದಕ್ಕೆ ಬೀಳುತ್ತಿದ್ದಂತೆ ಸ್ಥಳೀಯರು ಕೂಡಲೇ ಸಹಾಯಕ್ಕೆ ಧಾವಿಸಿದ್ದಾರೆ. ಅದಾದ ನಂತರ ಪೊಲೀಸರು, ಆರೋಗ್ಯ ಸಿಬ್ಬಂದಿ ಆಗಮಿಸಿದ್ದಾರೆ. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಉಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಇಬ್ಬರು ಬದುಕುಳಿಯಲಿಲ್ಲ. ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ವಾಹನದಲ್ಲಿ ಮಹಿಳೆಯರು, ಮಕ್ಕಳೂ ಇದ್ದರು. ಸದ್ಯ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಹೋಟೆಲ್ ತಿಂಡಿ ದುಬಾರಿ: ಖಾದ್ಯತೈಲ, ಸಿಲಿಂಡರ್ ಬೆಲೆ ಏರಿಕೆಯ ಹೊರೆ ಗ್ರಾಹಕರಿಗೆ ವರ್ಗಾಯಿಸಲು ಚಿಂತನೆ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ