AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಸೆಟ್​ಗೆ ಹಾಕಿದ್ದ ಜನರೇಟರ್ ವೈರಿಂಗ್ ಅವ್ಯವಸ್ಥೆ: ವಿದ್ಯುತ್ ಶಾಕ್​ಗೆ ಪಿಕಪ್ ವಾಹನದಲ್ಲಿದ್ದ 10 ಮಂದಿ ಸಾವು

ಘಟನೆಗೆ ಜನರೇಟರ್​ನ ವೈರಿಂಗ್ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ. ಜನರೇಟರ್ ಅನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿತ್ತು.

ಡಿಜೆ ಸೆಟ್​ಗೆ ಹಾಕಿದ್ದ ಜನರೇಟರ್ ವೈರಿಂಗ್ ಅವ್ಯವಸ್ಥೆ: ವಿದ್ಯುತ್ ಶಾಕ್​ಗೆ ಪಿಕಪ್ ವಾಹನದಲ್ಲಿದ್ದ 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 01, 2022 | 6:49 AM

ಕೂಚ್ ಬೆಹಾರ್: ಪಶ್ಚಿಮ ಬಂಗಾಳದ (West Bengal) ಕೂಚ್​ ಬೆಹಾರ್ ಜಿಲ್ಲೆಯಲ್ಲಿ ಜಲ್ಪೇಶ್​ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಪ್ರವಹಿಸಿ (Electrocution) ಅದರಲ್ಲಿ 10 ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಇತರ 16 ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಜಲ್​ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಡು ಹಾಕಲೆಂದು ಪಿಕಪ್ ವಾಹನಕ್ಕೆ ಡಿಜೆ ಸಿಸ್ಟಮ್​ ಅಳವಡಿಸಲಾಗಿತ್ತು. ಡಿಜೆ ಸಿಸ್ಟಮ್​ಗಾಗಿ ಬಳಸುತ್ತಿದ್ದ ಜನರೇಟರ್​ನ ವೈರಿಂಗ್​ನಲ್ಲಿ ಉಂಟಾದ ಸಮಸ್ಯೆಯೇ ವಿದ್ಯುತ್ ಪ್ರವಹಿಸಲು ಮುಖ್ಯ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

‘ಮಧ್ಯರಾತ್ರಿ 12 ಗಂಟೆ ವೇಳೆಯಲ್ಲಿ ಮೆಖ್ಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಲ್ಪೇಶ್​ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಪ್ರವಹಿಸಿದೆ. ಘಟನೆಗೆ ಜನರೇಟರ್​ನ ವೈರಿಂಗ್ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ. ಜನರೇಟರ್ ಅನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿತ್ತು’ ಎಂದು ಮಾತಭಂಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವರ್ಮಾ ಹೇಳಿದರು.

ಗಾಯಾಳುಗಳನ್ನು ತಕ್ಷಣವೇ ಚಂದ್ರಬಂಧಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಪ್ರಾಥಮಿಕ ಚಿಕಿತ್ಸೆ ಕೊಟ್ಟ ಸ್ಥಾನಿಕ ವೈದ್ಯಾಧಿಕಾರಿಯು ಅವರನ್ನು ಜಲ್​ಪೈಗುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಶಿಫಾರಸು ಮಾಡಿದರು. ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ 10 ಮಂದಿ ಮೃತಪಟ್ಟಿದ್ದರು ಎಂದು ವೈದ್ಯರು ಹೇಳಿದ್ದಾರೆ. ಘಟನೆಗೆ ಕಾರಣವಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಪರಾರಿಯಾಗಿದ್ದಾನೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಸಿತಾಲ್​ಕುಚಿ ಪ್ರದೇಶಕ್ಕೆ ಸೇರಿದವರು. ಎಲ್ಲರ ಕುಟುಂಬಗಳಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 6:49 am, Mon, 1 August 22

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್