AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಸೆಟ್​ಗೆ ಹಾಕಿದ್ದ ಜನರೇಟರ್ ವೈರಿಂಗ್ ಅವ್ಯವಸ್ಥೆ: ವಿದ್ಯುತ್ ಶಾಕ್​ಗೆ ಪಿಕಪ್ ವಾಹನದಲ್ಲಿದ್ದ 10 ಮಂದಿ ಸಾವು

ಘಟನೆಗೆ ಜನರೇಟರ್​ನ ವೈರಿಂಗ್ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ. ಜನರೇಟರ್ ಅನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿತ್ತು.

ಡಿಜೆ ಸೆಟ್​ಗೆ ಹಾಕಿದ್ದ ಜನರೇಟರ್ ವೈರಿಂಗ್ ಅವ್ಯವಸ್ಥೆ: ವಿದ್ಯುತ್ ಶಾಕ್​ಗೆ ಪಿಕಪ್ ವಾಹನದಲ್ಲಿದ್ದ 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 01, 2022 | 6:49 AM

Share

ಕೂಚ್ ಬೆಹಾರ್: ಪಶ್ಚಿಮ ಬಂಗಾಳದ (West Bengal) ಕೂಚ್​ ಬೆಹಾರ್ ಜಿಲ್ಲೆಯಲ್ಲಿ ಜಲ್ಪೇಶ್​ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಪ್ರವಹಿಸಿ (Electrocution) ಅದರಲ್ಲಿ 10 ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಇತರ 16 ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಜಲ್​ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಡು ಹಾಕಲೆಂದು ಪಿಕಪ್ ವಾಹನಕ್ಕೆ ಡಿಜೆ ಸಿಸ್ಟಮ್​ ಅಳವಡಿಸಲಾಗಿತ್ತು. ಡಿಜೆ ಸಿಸ್ಟಮ್​ಗಾಗಿ ಬಳಸುತ್ತಿದ್ದ ಜನರೇಟರ್​ನ ವೈರಿಂಗ್​ನಲ್ಲಿ ಉಂಟಾದ ಸಮಸ್ಯೆಯೇ ವಿದ್ಯುತ್ ಪ್ರವಹಿಸಲು ಮುಖ್ಯ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

‘ಮಧ್ಯರಾತ್ರಿ 12 ಗಂಟೆ ವೇಳೆಯಲ್ಲಿ ಮೆಖ್ಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಲ್ಪೇಶ್​ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಪ್ರವಹಿಸಿದೆ. ಘಟನೆಗೆ ಜನರೇಟರ್​ನ ವೈರಿಂಗ್ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ. ಜನರೇಟರ್ ಅನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿತ್ತು’ ಎಂದು ಮಾತಭಂಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವರ್ಮಾ ಹೇಳಿದರು.

ಗಾಯಾಳುಗಳನ್ನು ತಕ್ಷಣವೇ ಚಂದ್ರಬಂಧಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಪ್ರಾಥಮಿಕ ಚಿಕಿತ್ಸೆ ಕೊಟ್ಟ ಸ್ಥಾನಿಕ ವೈದ್ಯಾಧಿಕಾರಿಯು ಅವರನ್ನು ಜಲ್​ಪೈಗುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಶಿಫಾರಸು ಮಾಡಿದರು. ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ 10 ಮಂದಿ ಮೃತಪಟ್ಟಿದ್ದರು ಎಂದು ವೈದ್ಯರು ಹೇಳಿದ್ದಾರೆ. ಘಟನೆಗೆ ಕಾರಣವಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಪರಾರಿಯಾಗಿದ್ದಾನೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಸಿತಾಲ್​ಕುಚಿ ಪ್ರದೇಶಕ್ಕೆ ಸೇರಿದವರು. ಎಲ್ಲರ ಕುಟುಂಬಗಳಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 6:49 am, Mon, 1 August 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್