AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಸೆಟ್​ಗೆ ಹಾಕಿದ್ದ ಜನರೇಟರ್ ವೈರಿಂಗ್ ಅವ್ಯವಸ್ಥೆ: ವಿದ್ಯುತ್ ಶಾಕ್​ಗೆ ಪಿಕಪ್ ವಾಹನದಲ್ಲಿದ್ದ 10 ಮಂದಿ ಸಾವು

ಘಟನೆಗೆ ಜನರೇಟರ್​ನ ವೈರಿಂಗ್ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ. ಜನರೇಟರ್ ಅನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿತ್ತು.

ಡಿಜೆ ಸೆಟ್​ಗೆ ಹಾಕಿದ್ದ ಜನರೇಟರ್ ವೈರಿಂಗ್ ಅವ್ಯವಸ್ಥೆ: ವಿದ್ಯುತ್ ಶಾಕ್​ಗೆ ಪಿಕಪ್ ವಾಹನದಲ್ಲಿದ್ದ 10 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 01, 2022 | 6:49 AM

Share

ಕೂಚ್ ಬೆಹಾರ್: ಪಶ್ಚಿಮ ಬಂಗಾಳದ (West Bengal) ಕೂಚ್​ ಬೆಹಾರ್ ಜಿಲ್ಲೆಯಲ್ಲಿ ಜಲ್ಪೇಶ್​ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಪ್ರವಹಿಸಿ (Electrocution) ಅದರಲ್ಲಿ 10 ಮಂದಿ ಸ್ಥಳದಲ್ಲಿಯೇ ಮೃತಪಟ್ಟು, ಇತರ 16 ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಜಲ್​ಪೈಗುರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಡು ಹಾಕಲೆಂದು ಪಿಕಪ್ ವಾಹನಕ್ಕೆ ಡಿಜೆ ಸಿಸ್ಟಮ್​ ಅಳವಡಿಸಲಾಗಿತ್ತು. ಡಿಜೆ ಸಿಸ್ಟಮ್​ಗಾಗಿ ಬಳಸುತ್ತಿದ್ದ ಜನರೇಟರ್​ನ ವೈರಿಂಗ್​ನಲ್ಲಿ ಉಂಟಾದ ಸಮಸ್ಯೆಯೇ ವಿದ್ಯುತ್ ಪ್ರವಹಿಸಲು ಮುಖ್ಯ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

‘ಮಧ್ಯರಾತ್ರಿ 12 ಗಂಟೆ ವೇಳೆಯಲ್ಲಿ ಮೆಖ್ಲಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಜಲ್ಪೇಶ್​ಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಪಿಕಪ್ ವಾಹನಕ್ಕೆ ವಿದ್ಯುತ್ ಪ್ರವಹಿಸಿದೆ. ಘಟನೆಗೆ ಜನರೇಟರ್​ನ ವೈರಿಂಗ್ ಸಮಸ್ಯೆ ಕಾರಣ ಎಂದು ಶಂಕಿಸಲಾಗಿದೆ. ಜನರೇಟರ್ ಅನ್ನು ವಾಹನದ ಹಿಂಭಾಗದಲ್ಲಿ ಅಳವಡಿಸಲಾಗಿತ್ತು’ ಎಂದು ಮಾತಭಂಗದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ವರ್ಮಾ ಹೇಳಿದರು.

ಗಾಯಾಳುಗಳನ್ನು ತಕ್ಷಣವೇ ಚಂದ್ರಬಂಧಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಪ್ರಾಥಮಿಕ ಚಿಕಿತ್ಸೆ ಕೊಟ್ಟ ಸ್ಥಾನಿಕ ವೈದ್ಯಾಧಿಕಾರಿಯು ಅವರನ್ನು ಜಲ್​ಪೈಗುರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸುವಂತೆ ಶಿಫಾರಸು ಮಾಡಿದರು. ಆಸ್ಪತ್ರೆಗೆ ಕರೆತರುವ ಮಾರ್ಗದಲ್ಲಿಯೇ 10 ಮಂದಿ ಮೃತಪಟ್ಟಿದ್ದರು ಎಂದು ವೈದ್ಯರು ಹೇಳಿದ್ದಾರೆ. ಘಟನೆಗೆ ಕಾರಣವಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಪರಾರಿಯಾಗಿದ್ದಾನೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಸಿತಾಲ್​ಕುಚಿ ಪ್ರದೇಶಕ್ಕೆ ಸೇರಿದವರು. ಎಲ್ಲರ ಕುಟುಂಬಗಳಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 6:49 am, Mon, 1 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ