Accident | ಬೆಳಗಿನ ಜಾವ ಆಕ್ಸಿಡೆಂಟ್​: ನಿಂತಿದ್ದ ತೈಲ ಟ್ಯಾಂಕರ್​ಗೆ ಕಾರ್​ ಡಿಕ್ಕಿ, ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳ ಸಾವು

Madhya Pradesh Accident: ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Accident | ಬೆಳಗಿನ ಜಾವ ಆಕ್ಸಿಡೆಂಟ್​: ನಿಂತಿದ್ದ ತೈಲ ಟ್ಯಾಂಕರ್​ಗೆ ಕಾರ್​ ಡಿಕ್ಕಿ, ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳ ಸಾವು
ಪ್ರಾತಿನಿಧಿಕ ಚಿತ್ರ
Follow us
|

Updated on:Feb 23, 2021 | 11:28 AM

ಭೋಪಾಲ್: ನಿಂತಿದ್ದ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್​ನ ತಲವಾಲಿ ಚಾಂದ್​ ಬಳಿ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್​ ಸಮೀಪದಲ್ಲಿ ನಿಂತಿದ್ದ ತೈಲ ಸಾಗಣೆ ಟ್ಯಾಂಕರ್​ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತರಾಗಿದ್ದಾರೆ.

ಮೃತ ಯುವಕರೆಲ್ಲರೂ ಇಂದೋರ್​ನ ನಿವಾಸಿಗಳಾಗಿದ್ದು, 18 ರಿಂದ 28 ವರ್ಷ ಪ್ರಾಯದವರೆಂದು ತಿಳಿದುಬಂದಿದೆ. ಈ ಯುವಕರ ತಂಡವು ಇಂದೋರ್​ನ ಹೊರ ಪ್ರಾಂತ್ಯದಲ್ಲಿರುವ ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಮರಳುತ್ತಿದ್ದರು ಎಂದು ಲಸುದಿಯ ಪೊಲೀಸ್​ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಮೃತರನ್ನು ರಿಶಿ ಪವಾರ್, ಸೂರಜ್​, ಚಂದ್ರಭಾನ್ ರಘುವಂಶಿ, ಸೋನು ಜತ್, ಸುಮಿತ್ ಸಿಂಗ್​ ಮತ್ತು ದೇವ್​ ಎಂದು ಗುರುತಿಸಲಾಗಿದೆ.

ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿರುವರಾದರೂ ಬದುಕಿ ಬಾಳಬೇಕಿದ್ದ ಆರು ಯುವಕರು ಹೀಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿರುವುದು ಅತ್ಯಂತ ಖೇದಕರ ಸಂಗತಿ.

ಇದನ್ನೂ ಓದಿ: ಬಸ್​ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆ; 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Published On - 10:56 am, Tue, 23 February 21

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್