AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಟಾಟಾ ಏಸ್, ಲಾರಿ ನಡುವೆ ಡಿಕ್ಕಿ, 6 ಸಾವು, 5 ಜನರಿಗೆ ಗಾಯ

ತಿರುಚ್ಚಿ-ಚೆನ್ನೈ ರಾಷ್ಟ್ರೀಯ (Trichy-Chennai) ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಗಂನಲ್ಲಿ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್(Tata Ace) ವಾಹನವು ಲಾರಿಗೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ.

Accident: ಟಾಟಾ ಏಸ್, ಲಾರಿ ನಡುವೆ ಡಿಕ್ಕಿ, 6 ಸಾವು, 5 ಜನರಿಗೆ ಗಾಯ
Accident Tata Ace, collision between lorry, 6 dead, 5 injured
TV9 Web
| Edited By: |

Updated on: Dec 07, 2022 | 3:08 PM

Share

ಚೆಂಗಲ್ಪಟ್ಟು: ತಿರುಚ್ಚಿ-ಚೆನ್ನೈ ರಾಷ್ಟ್ರೀಯ (Trichy-Chennai) ಹೆದ್ದಾರಿಯಲ್ಲಿ ಭೀಕರ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಗಂನಲ್ಲಿ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್(Tata Ace) ವಾಹನವು ಲಾರಿಗೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಎದುರಿನಿಂದ ಟಾಟಾ ಏಸ್ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಹಿಂದೆ ಬಂದ ಮತ್ತೊಂದು ವಾಹನ ಟಾಟಾ ಏಸ್‌ಗೂ ಡಿಕ್ಕಿ ಹೊಡೆದಿದೆ.

ಆರು ಮಂದಿ ಮೃತರು, ಐವರು ಗಾಯಗೊಂಡಿದ್ದಾರೆ

ಎರಡು ವಾಹನಗಳ ನಡುವೆ ಟಾಟಾ ಏಸ್ ನಜ್ಜುಗುಜ್ಜಾಗಿದ್ದರಿಂದ ಆರು ಮಂದಿ ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿ ಚೆಂಗಲಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ

ಮೃತರ ಕುಟುಂಬಗಳಿಗೆ ಸಿಎಂ ನಿಧಿ ಹಂಚಿಕೆ ಅಪಘಾತದಲ್ಲಿ ಮೃತಪಟ್ಟ ಆರು ಮಂದಿಯ ಕುಟುಂಬಗಳಿಗೆ ಸಿಎಂ ಎಂಕೆ ಸ್ಟಾಲಿನ್ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಾರ್ತಿಕ್ ದೀಪಂ ಆಚರಣೆ ಮುಗಿಸಿ ಪ್ರಯಾಣಿಕರೊಂದಿಗೆ ಟಾಟಾ ಏಸ್ ತಿರುವಣ್ಣಾಮಲೈನಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ