AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ

ನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ
ಬ್ರಹ್ಮೋಸ್ ಕ್ಷಿಪಣಿ
TV9 Web
| Edited By: |

Updated on:Aug 23, 2022 | 7:32 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನು (BrahMos missile) ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾ ಮಾಡಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. 2022 ಮಾರ್ಚ್ 09ರಂದು ಬ್ರಹ್ಮೋಸ್ ಕ್ಷಿಪಣಿಯನ್ನು ಆಕಸ್ಮಿಕವಾಗಿ ಉಡಾಯಿಸಲಾಗಿದೆ. ಘಟನೆಯ ಜವಾಬ್ದಾರಿಯನ್ನು ನಿಗದಿಪಡಿಸುವುದು ಸೇರಿದಂತೆ ಪ್ರಕರಣದ ಸತ್ಯಗಳನ್ನು ಹೊರತರಲು ಸ್ಥಾಪಿಸಲಾದ ನ್ಯಾಯಾಲಯವು (Court of Inquiry-Col), ಮೂವರು ಅಧಿಕಾರಿಗಳು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOP) ನಿಂದ ಮಾಡಿದ ವಿಚಲನವು ಕ್ಷಿಪಣಿಯ ಆಕಸ್ಮಿಕ ಉಡಾವಣೆಗೆ ಕಾರಣವಾಯಿತು ಎಂದು ಕಂಡುಹಿಡಿದಿರುವುದಾಗಿ ವಾಯುಪಡೆ ಹೇಳಿಕೆ ತಿಳಿಸಿದೆ. ಈ ಘಟನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಮಾರ್ಚ್‌ನಲ್ಲಿ ಪಾಕಿಸ್ತಾನದ ಪ್ರದೇಶಕ್ಕೆ ಭಾರತದ ಕಡೆಯಿಂದ ಆಕಸ್ಮಿಕವಾಗಿ ಕ್ಷಿಪಣಿಯನ್ನು ಹಾರಿತ್ತು. ಇದನ್ನು ರಕ್ಷಣಾ ಸಚಿವಾಲಯವು “ತೀವ್ರ ವಿಷಾದನೀಯ” ಎಂದು ಹೇಳಿದ್ದು “ತಾಂತ್ರಿಕ ದೋಷ” ಕಾರಣ ಎಂದಿತ್ತು.

ಪಾಕಿಸ್ತಾನದ ಪ್ರಕಾರ, ಕ್ಷಿಪಣಿಯು ತನ್ನ ವಾಯುಪ್ರದೇಶದೊಳಗೆ 100 ಕಿ.ಮೀ.ಗೂ ಹೆಚ್ಚು ದೂರ, 40,000 ಅಡಿ ಎತ್ತರದಲ್ಲಿ ಹಾರಿದ್ದು, ಬೀಳುವ ಮುನ್ನ ಶಬ್ದದ ಮೂರು ಪಟ್ಟು ವೇಗದಲ್ಲಿ ಹಾರಿತು. ಕ್ಷಿಪಣಿಯಲ್ಲಿ ಯಾವುದೇ ಸಿಡಿತಲೆ ಇರಲಿಲ್ಲ, ಆದ್ದರಿಂದ ಅದು ಸ್ಫೋಟಿಸಲಿಲ್ಲ.

ತನ್ನ ವಾಯುಪ್ರದೇಶದ ಅಪ್ರಚೋದಿತ ಉಲ್ಲಂಘನೆ ಎಂದು ಕರೆದಿರುವುದನ್ನು ಪ್ರತಿಭಟಿಸಲು ಇಸ್ಲಾಮಾಬಾದ್‌ನಲ್ಲಿ ಭಾರತದ ಅಧಿಕಾರಿಗಳನ್ನು ಕರೆಸಲಾಗಿದೆ ಎಂದು ದೇಶದ ವಿದೇಶಾಂಗ ಕಚೇರಿ ತಿಳಿಸಿತ್ತು . ಈ ಘಟನೆಯ ಬಗ್ಗೆ ತನಿಖೆಗೆ ಪಾಕಿಸ್ತಾನವು ಕರೆ ನೀಡಿದ್ದು , ಇದು ಪ್ರಯಾಣಿಕರ ವಿಮಾನ ಮತ್ತು ನಾಗರಿಕರ ಜೀವಕ್ಕೆ ಅಪಾಯವನ್ನುಂಟುಮಾಡುಬಲ್ಲುದಾಗಿತ್ತು ಎಂದು ಹೇಳಿಕೆ ನೀಡಿತ್ತು.

ಇಂತಹ ನಿರ್ಲಕ್ಷ್ಯದ ಅಹಿತಕರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಿ ಮತ್ತು ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಮರುಕಳಿಸುವುದನ್ನು ತಪ್ಪಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನವು ಭಾರತಕ್ಕೆ ಎಚ್ಚರಿಕೆ ನೀಡಿತ್ತು.

Published On - 7:31 pm, Tue, 23 August 22

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​